ಕೊರಟಗೆರೆ : ಭಾರತಾವು ಒಂದು ಬಲಿಷ್ಟ ರಾಷ್ಟ್ರ ಪ್ರಗತಿಪರ ರಾಷ್ಟ್ರ ಭವಿಷ್ಯದ ಭಾರತ ಕನಸನ್ನು ಹೊತ್ತಿರುವ ಪ್ರಧಾನ ಮಂತ್ರಿಗಳ ಸಂಕಲ್ಪವನ್ನು ವಿದ್ಯಾರ್ಥಿಗಳು ನನಸು ಮಾಡಬೇಕು, ಎನ್ ಡಿಎ ಮೈತ್ರಿಕೂಟದಿಂದ ವಿತರಿಸುತ್ತಿರುವ ನೋಟ್ ಬುಕ್ ನ್ನು ಸದ್ಭಳಕೆ ಮಾಡಿಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಶಿಕ್ಷಣದಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಜನ್ಮದಿನದ ಪ್ರಯುಕ್ತ ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣನವರ ಸಹಕಾರದಿಂದ ಎನ್ ಡಿಎ ಪಕ್ಷವು ಸರ್ಕಾರಿ ಮಾಧ್ಯಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ನೋಟ್ ಬುಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿ.ಸೋಮಣ್ಣನವರು ತುಮಕೂರು ಜಿಲ್ಲೆಯ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಿದ್ದಾರೆ. ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ನಿವೃತ್ತ ಐಎಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಬಿ.ಎಚ್.ಅನಿಲ್ ಕುಮಾರ್ ಮಾತನಾಡಿ, ಉದ್ಯೋಗ ಹರಸಿ ಹೊರ ದೇಶಗಳಿಗೆ ಹೋಗುವ ಬದಲು ನಮ್ಮ ದೇಶದಲ್ಲಿನ ಸಾಕಷ್ಟು ಅವಕಾಶಗಳನ್ನು ಬಳಕೆ ಮಾಡಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕಿದೆ. ಪ್ರಧಾನ ಮಂತ್ರಿಗಳ ವಿಕಸಿತಾ ಭಾರತ ಕನಸನ್ನು ಯುವಕರು ನನಸು ಮಾಡಬೇಕು ಎಂದು ಹೇಳಿದರು.
ಜೆಡಿಎಸ್ ತಾ.ಅಧ್ಯಕ್ಷ ಕಾಮರಾಜು ಮಾತನಾಡಿ, ಈ ರಾಷ್ಟçವನ್ನು ಅತ್ಯಂತ ಉನ್ನತ ಆಲೋಚನೆಗಳಿಂದ ಸುಭದ್ರ ಭಾರತವನ್ನು ನಿರ್ಮಾಣ ಮಾಡಲಿಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಪಣ ತೊಟ್ಟಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಭಾಜಪ ಅಧ್ಯಕ್ಷ ರುದ್ರೇಶ್, ಜೆಡಿಎಸ್ ಕಾರ್ಯಾಧ್ಯಕ್ಷ ತುಂಬಾಡಿ ಲಕ್ಷ್ಮೀಶ, ಜೆಡಿಎಸ್ ಉಪಾಧ್ಯಕ್ಷ ಕೋಡ್ಲಹಳ್ಳಿ ವೆಂಕಟೇಶ್,ಲಕ್ಷ್ಮಣ್, ಬಿಜೆಪಿ ಮಾಜಿ ಅಧ್ಯಕ್ಷ ಪವನ್ ಕುಮಾರ್, ಪ.ಪಂ ಸದಸ್ಯ ಪ್ರದೀಪ್ಕುಮಾರ್, ಲಕ್ಷ್ಮಿನಾರಾಯಣ್, ಮುಖಂಡರಾದ ರಮೇಶ್, ದಾಡಿ ವೆಂಕಟೇಶ್, ರಘು, ನರೇಂದ್ರಬಾಬು, ಮಹೇಂದ್ರ, ರಂಗನಾಥ್, ಸಿದ್ದರಾಜು, ಚೇತನ್, ದಯಾನಂದ್, ಗುರುದತ್ತ, ರಂಜಿತ್ ಸೇರಿದಂತೆ ಇತರರು ಇದ್ದರು.
ಸಾವಿರಾರು ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ:
ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮದಿನದ ಪ್ರಯುಕ್ತ ಕೇಂದ್ರ ಸಚಿವ ವಿ.ಸೋಮಣ್ಣನವರ ಸಹಕಾರದಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೊರಟಗೆರೆ ಪಟ್ಟಣ, ಅಕ್ಕಿರಾಂಪುರ, ಗೌರಗಾಗನಹಳ್ಳಿ, ಸೋಂಪುರ, ಹೊಳವನಹಳ್ಳಿ, ವಡ್ಡಗೆರೆ, ದಾಸರಹಳ್ಳಿ ಸರ್ಕಾರಿ ಮಾಧ್ಯಮಿಕ ಮತ್ತು ಪ್ರೌಢಶಾಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಿಸಿದ್ದು, ವಿದ್ಯಾರ್ಥಿಗಳು ಪ್ರಧಾನಿ ಮೋದಿಯವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


