nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳು ಕ್ರಿಯಾಶೀಲತೆ, ಸಂವಹನ ಕಲೆಯನ್ನು ಬೆಳೆಸಿಕೊಳ್ಳಿ: ಸಾಕಿನ ಬಕ್ಕರ್ ಕರೆ
    ತುಮಕೂರು February 13, 2025

    ವಿದ್ಯಾರ್ಥಿಗಳು ಕ್ರಿಯಾಶೀಲತೆ, ಸಂವಹನ ಕಲೆಯನ್ನು ಬೆಳೆಸಿಕೊಳ್ಳಿ: ಸಾಕಿನ ಬಕ್ಕರ್ ಕರೆ

    By adminFebruary 13, 2025No Comments2 Mins Read
    sakina

    ತುಮಕೂರು: ಇಂದಿನ ಉದ್ಯೋಗ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಪೈಪೋಟಿಯನ್ನು ಗಮನದಲ್ಲಿಟ್ಟುಕೊಂಡು ಯುವಜನತೆ ತಮ್ಮ ಕ್ರಿಯಾಶೀಲತೆ, ನೈಪುಣ್ಯತೆಯನ್ನು ಮತ್ತು ಸಂವಹನ ಕಲೆಯನ್ನು ದೂರದೃಷ್ಟಿಯನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಬಾಸ್ ಸಂಸ್ಥೆಯ ಅಖಿಲ ಭಾರತ ಮಟ್ಟದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‌ಆರ್ ವಿಭಾಗ) ವಿಭಾಗದ ಮುಖ್ಯಸ್ಥೆ ಸಾಕಿನ ಬಕ್ಕರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಾಹೇ ಮತ್ತು ಬಾಸ್ ಸಂಸ್ಥೆಯ ಸಹಯೋಗಲದಲ್ಲಿ ಏರ್ಪಡಿಸಲಾಗಿದ್ದ ‘ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಉದ್ಯೋಗ ಮೇಳದಂತಹ ಸಮಾಜಮುಖಿ ಕಾರ್ಯಕ್ರಮಗಳು ಅತ್ಯಂತ ಪ್ರಶಂಸನೀಯವಾಗಿವೆ. ಇವತ್ತಿನ ಯುವಜನತೆ ತಮ್ಮ ಕ್ರಿಯಾಶೀಲತೆ ಮತ್ತು ಸಂವಹನ ಕಲೆಯನ್ನು ಅತ್ಯಂತ ದೂರದೃಷ್ಟಿಯನ್ನು ಇಟ್ಟುಕೊಂಡು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.


    Provided by
    Provided by

    ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಮಾತನಾಡಿ, ಇಂದು ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವಕಾಶಗಳು ಸಾಕಷ್ಟಿದೆ. ಈ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳನ್ನು ಅವಶ್ಯಕತೆಗೆ ತಕ್ಕಂತೆ ಬಳಸಿಕೊಂಡು ನಿಮ್ಮ ಜೀವನವನ್ನು ಉತ್ತಮಗೊಳಿಸಿಕೊಳ್ಳಿ ಎಂದು ಹೇಳಿದರು.

    ಸಾಹೇ ಕುಲಸಚಿವರಾದ ಡಾ.ಅಶೋಕ್ ಮೆಹ್ತಾ ಅವರು ಮಾತನಾಡಿ, ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ನಾವು ಹೊಂದಾಣಿಕೆಯನ್ನು ಮಾಡಿಕೊಂಡಾಗ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಉಳಿದುಕೊಳ್ಳಬಹುದು. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಕಷ್ಟು ಉದ್ಯೋಗವಕಾಶಗಳು ಇದೆ ಆದರೆ ಈ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಉಳ್ಳವರು ಕಡಿಮೆಯಾಗುತ್ತಿದ್ದಾರೆ. ಹಾಗಾಗಿ ಉದ್ಯೋಗಕ್ಕೆ ತಕ್ಕ ಕೌಶಲ್ಯವನ್ನು ರೂಪಿಸಿಕೊಂಡು ನಿಮ್ಮ ಜೀವನವನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.

    ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂಎಸ್ ರವಿಪ್ರಕಾಶ್ ಮಾತನಾಡಿ ನಾವು ಮಾಡುವ ಕೆಲಸದ ಮೇಲೆ ಅಭಿಮಾನ ಇರಿಸಿಕೊಂಡು ಕ್ಷುಲ್ಲಕ ಕಾರಣಗಳಿಗೆ ಸಿಕ್ಕ ಉದ್ಯೋಗವನ್ನು ಬಿಟ್ಟು ಬೇರೊಂದು ಉದ್ಯೋಗಕ್ಕೆ ಹೋಗದೆ ಇರುವ ಉದ್ಯೋಗದಲ್ಲಿ ಉತ್ತಮ ಸಾಧನೆಯನ್ನು ಮಾಡಿ ಮುಂದುವರಿಯಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಶ್ರೀ ಸಿದ್ದಾರ್ಥದ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ್, ಉದ್ಯೋಗ ಮೇಳದ ಆಯೋಜಕರಾದ  ಡಾ.ಶ್ರೀನಿಧಿ ಮತ್ತು ಉದ್ಯೋಗಾಧಿಕಾರಿಗಳಾದ ಡಾ.ಕಲೀಮ್,  ಡಾ.ಹರೀಶ್ ಮುಂತಾದವರು ಭಾಗವಹಿಸಿದ್ದರು.

    ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 1,500 ಉದ್ಯೋಗಾಂಕ್ಷಿಗಳು ಮತ್ತು ವಿವಿಧ ಕಂಪನಿಯ 66 ಉದ್ಯೋಗಪತಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರು.

    ಸುಮಾರು 160 ಉದ್ಯೋಗಾಂಕ್ಷಿಗಳಿಗೆ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡಲಿಕ್ಕೆ ಅಂತಿಮಗೊಳಿಸಿ, ಆಯ್ಕೆ ಪಟ್ಟಿ ಪ್ರಕಟಿಸಲಾಯಿತು. ಪ್ರಮುಖವಾಗಿ ವಿಶೇಷ ಚೇತನರಿಗೆ ಸಾಧ್ಯವಾಗುವಂತಹ ಉದ್ಯೋಗಗಳನ್ನು ಕೊಡಲು ಕೆಲವು ಸಂಸ್ಥೆಗಳು ಮುಂದೆ ಬಂದು ಹಲವಾರು ವಿಕಲಚೇತನರು ಸಹ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ತಮ್ಮ ಬದುಕನ್ನು ಕಟ್ಟಿಕೊಳ್ಳುವಂತಹ ಉದ್ಯೋಗಗಳನ್ನು ಪಡೆದುಕೊಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುಮಕೂರು: ಹೆತ್ತ ತಾಯಿಯನ್ನೇ ಮಗಳೊಬ್ಬಳು ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿ ಅಂತ್ಯಕ್ರಿಯೆಗೆ ಮುಂದಾಗಿದ್ದ…

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.