ತುಮಕೂರು: ವಿದ್ಯಾರ್ಥಿಗಳು ಕೌಶಲ್ಯವನ್ನು ಹೆಚ್ಚಿಸಿಕೊಂಡು ದೊರೆತ ಅವಕಾಶವನ್ನು ಸಮರ್ಪಕವಾಗಿಬಳಸಿಕೊಳ್ಳಿ ಎಂದು ಸಾಹೇ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಕೆ.ಬಿ.ಲಿಂಗೇಗೌಡ ಕರೆ ನೀಡಿದರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪಿಜಿ ಸೆಮಿನಾರ್ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸಾಹೇ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ಪ್ರಥಮ ಬ್ಯಾಚ್ ನ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಕೌಶಲ್ಯವನ್ನು ಕಲಿಯುವ ಅನಿವಾರ್ಯತೆ ಇದೆ. ಕೌಶಲ್ಯವನ್ನು ಬೆಳಸಿಕೊಂಡು ಧೈರ್ಯದಿಂದ ಮುನ್ನುಗ್ಗಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ಡಾ.ಎಂ.ಝಡ್. ಕುರಿಯನ್ ಮಾತನಾಡಿ, ನಿಮ್ಮ ಯಶಸ್ಸಿಗೆ ನೀವೇ ಕಾರಣ ಹಾಗಾಗಿ ಯಶಸ್ಸಿನ ಕಡೆ ಮುನ್ನುಗ್ಗಿ. ಬಂದ ಅವಕಾಶವನ್ನು ಬಿಟ್ಟು ಮತ್ತೊಂದು ಅವಕಾಶಕ್ಕೆ ಕಾಯಬೇಡಿ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಉದ್ಯಮವನ್ನು ಸೃಷ್ಟಿಸುವ ಕಡೆ ಗಮನಹರಿಸಿ ಎಂದು ಹೇಳಿದರು.
ಎಸ್ಎಸ್ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ್ ಮಾತನಾಡಿ, ಪ್ರಸಕ್ತ ಸಂದರ್ಭದಲ್ಲಿ ಬೇಡಿಕೆ ಇರುವ ಎಂಬಿಎ ಕೋರ್ಸ್ ಗೆ ಬೇಕಾದ ಎಲ್ಲಾ ಸೌಲಭ್ಯವನ್ನು ನೀಡಲಾಗಿದೆ. ಇದನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾಹೇ ವಿಶ್ವವಿದ್ಯಾನಿಲಯ ಪರಿಕ್ಷಾಂಗ ಕುಲಸಚಿವರಾದ ಡಾ.ಗುರುಶಂಕರ್ ಜಿ, ಉದ್ಯೋಗ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥರಾದ ಡಾ.ಅಶೋಕ್ ಮೆಹ್ತ, ಅಕಾಡಮಿ ಡೀನ್ ಡಾ. ರೇಣುಕಲತಾ ಎಸ್, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ರೂಪ ಎಂ.ಸಿ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx