ತುಮಕೂರು: ಜಿಲ್ಲೆಯ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಗ್ರಾಮ ದೇವತೆಗಳಿಗೆ ಪೊಲೀಸ್ ಠಾಣೆಯಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆಸಿರುವ ಅಪರೂಪದ ಪ್ರಸಂಗ ನಡೆದಿದೆ.
ತಿಪಟೂರು ನಗರದ ಗ್ರಾಮದೇವತೆ ಕೆಂಪಮ್ಮ ದೇವಿ, ಚಿಕ್ಕಮ್ಮ ದೇವಿ, ಕೊಲ್ಲಾಪುರದಮ್ಮ ದೇವರುಗಳಿಗೆ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಸಮವಸ್ತ್ರದಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದರು.
ಅಲ್ಲದೆ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಗಳು ಸೀರೆಯನ್ನು ಧರಿಸಿ ಕುಂಕುಮಾರ್ಚನೆ ಸೇರಿದಂತೆ ಮಹಾಮಂಗಳಾರತಿಯನ್ನು ನೆರವೇರಿಸಿದರು.
ಠಾಣೆಯೊಳಗೆ ದೇವರಿಗೆ ಗದ್ದುಗೆ ನಿರ್ಮಿಸಿದ್ದರು. ಇದೇ ವೇಳೆ ಪೊಲೀಸ್ ಠಾಣೆ ಕಟ್ಟಡಕ್ಕೆ ಕಾವು ಕಟ್ಟಲೇ ಮಾಡಿದ ಪೂಜಾರಿಗಳು, ದೇವರಿಂದ ಪೊಲೀಸ್ ಠಾಣೆಯ ನಾಲ್ಕು ದಿಕ್ಕಿನ ಮೂಲೆ ಮೂಲೆಗೆ ನಿಂಬೆ ಹಣ್ಣು ಒಡೆದು ಪೀಡೆ ಪಿಶಾಚಿ ಇನ್ನಿತರೆ ಕೆಟ್ಟ ದೃಷ್ಠಿಗಳಿಂದ ರಕ್ಷಣೆಗಾಗಿ ಮಾಡಿಸುವ ಕಟ್ಟಳೆ ಪೂಜೆ ನೆರವೇರಿಸಲಾಯಿತು.
ಸಂವಿಧಾನಿಕ ಸ್ಥಳದಲ್ಲಿ ಮೌಢ್ಯಾಚರಣೆ ಮಾಡಿದ ಪೊಲೀಸರ ನಡೆ ಅಚ್ಚರಿ ಮೂಡಿಸಿದೆ. ಅದರಲ್ಲೂ ಮುಖ್ಯವಾಗಿ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿನಿಧಿಸುವ ತುಮಕೂರು ಜಿಲ್ಲೆಯ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಈ ರೀತಿ ನಡೆದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW