ತುಮಕೂರು: ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ, SMAM, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ, ಜೇನುಕೃಷಿ ಸೇರಿದಂತೆ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯ ತೋಟಗಾರಿಕಾ ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರೂಪ ಎನ್.ಎಸ್. ಮನವಿ ಮಾಡಿದ್ದಾರೆ.
ಹನಿ ನೀರಾವರಿ : ಅಡಿಕೆ ಹೊರತುಪಡಿಸಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಈ ಯೋಜನೆಯಡಿ 2 ಹೆಕ್ಟೇರ್ವರೆಗೆ ಸಾಮಾನ್ಯ ವರ್ಗ, ಪ.ಜಾತಿ/ಪ.ಪಂಗಡ ವರ್ಗಕ್ಕೆ ಶೇ.90ರಷ್ಟು ಸಹಾಯಧನ ನೀಡಲಾಗುವುದು. ಪ.ಜಾತಿ/ಪ.ಪಂಗಡ ರೈತರು ಹನಿ ನೀರಾವರಿ ಪಡೆದು 7 ವರ್ಷಗಳಾಗಿದ್ದಲ್ಲಿ ಮತ್ತೊಮ್ಮೆ ಸಹಾಯಧನ ಪಡೆಯಲು ಅರ್ಹರಿರುತ್ತಾರೆ.
SMAM ಯೋಜನೆ : ಈ ಯೋಜನೆಯಡಿ ಪವರ್ ವೀಡರ್, ಬ್ರಷ್ ಕಟರ್, ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ದೋಟಿ, ಮತ್ತಿತರ ಯಂತ್ರೋಪಕರಣಗಳನ್ನು ಖರೀದಿಸಿದ ರೈತರಿಗೆ ಶೇ.40 ರಿಂದ 50ರವರೆಗೆ ಸಹಾಯಧನ ನೀಡಲಾಗುವುದು.
ಮಹಾತ್ಮಗಾಂಧಿ ಉದ್ಯೋಗ ಖಾತ್ರಿ (ನರೇಗಾ)ಯೋಜನೆ: ನರೇಗಾ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ/ಪುನಶ್ಚೇತನ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುವುದು.
ಜೇನುಕೃಷಿ:- ಜೇನುಕೃಷಿ ಯೋಜನೆಯಡಿ ರೈತರ ತಾಕಿನಲ್ಲಿ ಜೇನುಪೆಟ್ಟಿಗೆ ಇಟ್ಟುಕೊಳ್ಳಲು ಸಹಾಯಧನ ನೀಡಲಾಗುವುದು.
ಸಹಾಯಧನ ಸೌಲಭ್ಯ ಪಡೆಯಲಿಚ್ಛಿಸುವ ರೈತರು ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ, ಜಾತಿ ಪ್ರಮಾಣ ಪತ್ರ(ಪ.ಜಾ./ಪ.ಪಂಗಡ ರೈತರಿಗೆ), ಜಂಟಿ ಖಾತೆ ಇದ್ದಲ್ಲಿ ಒಪ್ಪಿಗೆ ಪ್ರಮಾಣ ಪತ್ರ, ಖಾತೆದಾರರು ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರ ಸೇರಿದಂತೆ ಮತ್ತಿತರ ದಾಖಲಾತಿಗಳನ್ನು ಲಗತ್ತಿಸಿ ಎಫ್ಐಡಿ ನಂಬರ್ನೊAದಿಗೆ ಸಂಬAಧಿಸಿದ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತುಮಕೂರು ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರ ಕೋರಾ ಹಾಗೂ ಬೆಳ್ಳಾವಿ–8970870918; ಹೆಬ್ಬೂರು–9538287992; ಕಸಬಾ ಹಾಗೂ ಊರ್ಡಿಗೆರೆ–8197516149; ಗೂಳೂರು-7338242328ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW