nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026
    Facebook Twitter Instagram
    ಟ್ರೆಂಡಿಂಗ್
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    • ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
    • ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    ಲೇಖನ July 17, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    By adminJuly 17, 2026No Comments3 Mins Read
    •  ರಾಘವೇಂದ್ರ ಅಡಿಗ ಎಚ್ಚೆನ್.

    ‘ಪುಣ್ಯಕೋಟಿ’ ಹಾಡನ್ನು ಕೇಳದ ಕಿವಿಗಳೆ ಇಲ್ಲ ಎನ್ನಬಹುದು. ಅಂತಹ “ಪುಣ್ಯಕೋಟಿ” ಹಾಡನ್ನು ಖ್ಯಾತ ಕಾದಂಬರಿಕಾರ, ಬರಹಗಾರ, ಕೃಷಿ ವಿಜ್ಞಾನಿ ಹಾಗೂ ಪ್ರಾಧ್ಯಾಪಕ ಕೆ.ಎನ್ ಗಣೇಶಯ್ಯ ಪುನರಚಿಸಿದ್ದಾರೆ. ಇದಕ್ಕೆ “ಪುಣ್ಯಕೋಟಿ ಶತಕರುಣಿ” ಎಂದು ಹೆಸರಿಟ್ಟಿದ್ದಾರೆ. ಲಾಫ್ಟಿಲ್ಯಾನ್ಡ್ ಸಂಸ್ಥೆ, ದಿನಿ ಸಿನಿ ಕ್ರಿಯೇಷನ್ಸ್ ಸಹಯೋಗದೊಂದಿಗೆ ಈ ಹಾಡನ್ನು ದೃಶ್ಯಕಾವ್ಯವಾಗಿ ನಿರ್ಮಾಣ ಮಾಡಿದ್ದಾರೆ. ಬಾಲು ಚಂದ್ರಶೇಖರ್ ನಿರ್ದೇಶಿಸಿದ್ದಾರೆ. ಅಜಯ್ ಶ್ರೀನಿವಾಸಮೂರ್ತಿ ಸಂಗೀತ ನೀಡಿರುವ ಈ ದೃಶ್ಯಕಾವ್ಯದ ಹಾಡನ್ನು ಮೇಘನ ಹಳಿಯಾಳ್, ಚಿಂತನ್ ವಿಕಾಸ್ ಹಾಗೂ ಆರವ್ ಜೋಶಿ ಹಾಡಿದ್ದಾರೆ. ಇತ್ತೀಚೆಗೆ ಈ ದೃಶ್ಯಕಾವ್ಯದ ಲೋಕಾರ್ಪಣೆ ಸಮಾರಂಭ ಜಯನಗರದ ಯಡಿಯೂರಿನಲ್ಲಿರುವ ಅ.ನ.ಕೃ ಸಮುದಾಯ ಭವನದ ಪುನೀತ್ ರಾಜಕುಮಾರ್ ಸಭಾಂಗಣದಲ್ಲಿ ಅದ್ದೂರಿಯಾಗಿ ನೆರವೇರಿತು. ರಾಜ್ಯಸಾಭಾ ಸದಸ್ಯರಾದ ಸುಧಾಮೂರ್ತಿ ಹಾಗೂ ಹೆಸರಾಂತ ನಟರಾದ ರಮೇಶ್ ಅರವಿಂದ್ ಈ ದೃಶ್ಯಕಾವ್ಯವನ್ನು ಲೋಕಾರ್ಪಣೆ ಮಾಡಿದರು. ಕನ್ನಡ ಹಾಗೂ ಇಂಗ್ಲೀಷ್ ಎರಡರಲ್ಲೂ ಈ ದೃಶ್ಯಕಾವ್ಯ ಮೂಡಿಬಂದಿರುವುದು ವಿಶೇಷ. ಇಂಗ್ಲೀಷ್ ನ‌ ದೃಶ್ಯಕಾವ್ಯಕ್ಕೆ ರಮೇಶ್ ಅರವಿಂದ್ ಅವರೆ ಧ್ವನಿ ನೀಡಿದ್ದಾರೆ. “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆಯ ನಂತರ ಗಣ್ಯರು ಹಾಗೂ ತಂಡದವರು ಮಾತನಾಡಿದರು.

    ಗಣೇಶಯ್ಯ ಅವರಿಗೆ ಪುಣ್ಯಕೋಟಿ ಎಂದರೆ ಬಹಳ ಇಷ್ಟ. ಏಕೆಂದರೆ ಅವರ ಮಗಳಿಗೂ ಅದೇ ಹೆಸರಿಟ್ಟಿದ್ದಾರೆ ಎಂದು ಮಾತನಾಡಿದ ಸುಧಾಮೂರ್ತಿ, ಪುಣ್ಯಕೋಟಿ ಹಾಡನ್ನು ನಾವೆಲ್ಲಾ ಕೇಳಿ ಬೆಳೆದಿದ್ದೇವೆ. ನಾವು ಪುಣ್ಯಕೋಟಿಯ ತ್ಯಾಗವನ್ನಷ್ಟೇ ನೋಡಿದ್ದೇವೆ. ಆದರೆ ಗಣೇಶಯ್ಯ ಅವರು ಇಲ್ಲಿ ಶತಕರುಣಿಯ(ಹುಲಿ) ತ್ಯಾಗವನ್ನು ಹೇಳಿದ್ದಾರೆ. ಕೊನೆಗೆ‌ ಅವರು ಹೇಳಿರುವ “ಲೋಕವೆಲ್ಲವು ಏಕವಾಗಿ ನಾಕವಾಗುವುದಿ ಧರೆ” ಎಂಬ ಸಾಲು ನನ್ನ ಮನಮುಟ್ಟಿತ್ತು. ಈ ದೃಶ್ಯಕಾವ್ಯ ಕರ್ನಾಟಕ ಮಾತ್ರವಲ್ಲದೆ ಎಲ್ಲಾ ಕಡೆಗೂ ತಲುಪುವಂತಾಗಲಿ. ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದರು.

    ನಾನು ಓದಿದ್ದ ಶಾಲೆಯ ಪ್ರಿನ್ಸಿಪಲ್ ರೂಮ್ ನಲ್ಲಿ ಒಂದು ಪೇಂಟಿಂಗ್. ಆ ಪೇಂಟಿಂಗ್ ನಲ್ಲಿ ಪಿಂಕ್ ಸೀರೆ ಉಟ್ಟು ಹಣತೆ ಹಿಡಿದು ನಗುತ್ತಿರುವ ಹೆಣ್ಣಮಗಳ ಫೋಟೊ. ಅದರ ಕೆಳಗೆ ಲೇಡಿ ವಿತ್ ದ ಲ್ಯಾಂಪ್ ಎಂದು ಬರೆದಿತ್ತು. ಆ ಫೋಟೊ ನೋಡಿದಾಗಲೆಲ್ಲ ನನಗೆ ಸುಧಾಮೂರ್ತಿ ಅವರು ನೆನಪಾಗುತ್ತಾರೆ. ಅವರ ಬರವಣಿಗೆ ಮೂಲಕ, ಚಾರಿಟಿಯ ಮೂಲಕ‌ ಸುಧಾಮೂರ್ತಿ ಅವರು ಬೆಳಕನ್ನು ಚೆಲ್ಲುತ್ತಿದ್ದಾರೆ. ಅಂತಹ ಸುಧಾಮೂರ್ತಿ ಅವರು ಈ ದೃಶ್ಯಕಾವ್ಯವನ್ನು ಬಿಡುಗಡೆ ಮಾಡಿಕೊಟ್ಟಿದ್ದಾರೆ ಅವರಿಗೆ ಧನ್ಯವಾದ. ಕೆ.ಎನ್‌. ಗಣೇಶಯ್ಯ ಅವರು ವಿಜ್ಞಾನವನ್ನು ಹಿಸ್ಟರಿ ಜೊತೆಗೆ ಸೇರಿಸಿ,‌‌ ಫಿಲಾಸಫಿಯನ್ನೂ ಸೇರಿಸಿ ನಮಗೆ ಮೂರು ದಶಕಗಳಿಂದ ಕುತೂಹಲವಾದ ಕಥೆಗಳನ್ನು ಕೊಡುತ್ತಿದ್ದಾರೆ. ನಾನು ಅವರ “ಕನಕ ಮುಸುಕು” ಹಾಗೂ “ಕರಿಸಿರಿಯಾನ” ಎರಡನ್ನು ಸೇರಿಸಿ ಚಿತ್ರಕಥೆ ಮಾಡಿ ಒಂದು ಚಿತ್ರ‌ಮಾಡಬೇಕೆಂದು ಕಾಯುತ್ತಿದ್ದೇನೆ. ಈ ದೃಶ್ಯಕಾವ್ಯವನ್ನು ಗಣೇಶಯ್ಯ ಅವರು ಅಷ್ಟೇ ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ. ಇನ್ನೂ ಈ ದೃಶ್ಯಕಾವ್ಯದ ಅನಿಮೇಶನ್ ಅಂತೂ ಅದ್ಭುತ. ಒಂದು ಹಸುವಿನ ಮೇಲೆ ಹುಲಿ ಕುಳಿತು ಬರುವುದನ್ನು ನಾನು ಇಲ್ಲಿವರೆಗೂ ನೋಡೆ ಇಲ್ಲ. ನಿರ್ದೇಶಕ ಬಾಲು ಅವರೆ ಕಲ್ಪನೆಗೆ ಧನ್ಯವಾದ. ಸಾಮೂಹಿಕವಾಗಿ ನೆನಪಲ್ಲಿರುವ ಒಂದು ಕಥೆಯನ್ನು ತೆಗೆದುಕೊಂಡು ಇದು ಅಷ್ಟೇ ಅಲ್ಲ. ಅದರ ಹಿಂದೆ ಇನ್ನೊಂದು ಕಥೆ ಇದೆ ಎಂದು ಈ ದೃಶ್ಯಕಾವ್ಯದ ಮೂಲಕ ಹೇಳಿರುವ ಗಣೇಶಯ್ಯ ಅವರಿಗೆ ಹಾಗೂ ಇಡೀ ತಂಡಕ್ಕೆ ನನ್ನ ಕಡೆಯಿಂದ ಮತ್ತೊಮ್ಮೆ ಧನ್ಯವಾದ ಎಂದರು‌ ನಟ ರಮೇಶ್ ಅರವಿಂದ್.

    ನನ್ನ ಮಗಳಿಗೆ ಪುಣ್ಯಕೋಟಿ ಎಂದು ಹೆಸರಿಟ್ಟಿದ್ದೇವೆ. ನಾನು ಹಾಗೂ ನನ್ನ ಹೆಂಡತಿ ನನ್ನ ಮಗಳಿಗೆ ಒಂದುವರೆ ವರ್ಷ ಇರಬೇಕಾದರೆ, ಅವಳನ್ನು ಕಾಡಿಗೆ ಕರೆದುಕೊಂಡು ಹೋಗಿ ಬರುತ್ತಿದ್ದೆವು. ಅವಳಿಗೆ ಅಲ್ಲಿ ತರಚಿದ ಗಾಯಗಳಾಗಿರುತ್ತಿತ್ತು. ಅದನ್ನು ನೋಡಿ, ನಮ್ಮ ಅಪ್ಪ ಬಯ್ಯುತ್ತಿದ್ದರು. ಅದರ ಮೇಲೆ ಒಂದು ಹಾಡನ್ನು ಕೂಡ ಬರೆದಿದ್ದರು. ಈ ಹಾಡಿನಲ್ಲಿ ಪುಣ್ಯಕೋಟಿ ನನ್ನ ಮಗಳಾಗಿದ್ದಳು. ನಾನು, ನನ್ನ ಹೆಂಡತಿ ವಿಲನ್ ಆಗಿದ್ದೆವು. ಈಗ ನಮ್ಮಪ್ಪ ಇಲ್ಲ. ನಾನು ಈ ಹಾಡಿನಲ್ಲಿ ಪುಣ್ಯಕೋಟಿಯನ್ನು ಸಾಯಿಸಿದ್ದೇನೆ.‌ ಇದನ್ನು ನೋಡಿದ್ದರೆ, ನಮ್ಮಪ್ಪನ ಪಾಲಿಗೆ ನಾನು ಪರ್ಮನೆಂಟ್ ವಿಲನ್ ಆಗುತ್ತಿದೆ.  ಅಪ್ಪ ಬರೆದ ಹಾಡಿನಲ್ಲಿ  ನನ್ನನ್ನು ಅವರು ವ್ಯಾಘ್ರ ಮಾಡಿದಾಗ, ಆ ವ್ಯಾಘ್ರನ್ನು ಕೂಡ ಒಳ್ಳೆಯವನೆ ಎಂದು ನಾನು ವಾದ ಮಾಡಬೇಕಿತ್ತು. ಅದೇ ಈ ಕಥೆಯ ಮೂಲ. ನನ್ನ ಕಥೆ ಪುಣ್ಯಕೋಟಿ ಸತ್ತ ನಂತರ ಮುಗಿದು ಹೋಗುತ್ತಿತ್ತು. ಅಪರ್ಣ ಎಂಬ ಹುಡುಗಿ ಕಥೆ ಬಹಳ ಚೆನ್ನಾಗಿದೆ. ಇಲ್ಲಿ ನಿಲಿಸಬೇಡಿ. ನೀವು ಪರಿಸರ ವಿಜ್ಞಾನಿ. ಪುಣ್ಯಕೋಟಿ ಹಾಗೂ ಶತಕರುಣಿ ವಂಶ ಬೆಳೆಯಿತು ಎಂಬುದನ್ನು ಸೇರಿಸಿ ಎಂದರು. ಆ ಹುಡುಗಿಯಿಂದ ಕಥಾ ವಿಸ್ತರಣೆ ಆಯಿತು. ನಂತರ ಬಾಲು ಚಂದ್ರಶೇಖರ್ ಅವರು ಇದನ್ನು ಸಿನಿಮಾ ಮಾಡುತ್ತೇನೆ ಎಂದರು. ಈ ದೃಶ್ಯಕಾವ್ಯದ ಇಂಗ್ಲಿಷ್ ಅವತರಣಿಕೆಗೆ ರಮೇಶ್ ಅರವಿಂದ್ ಅವರು ಧ್ವನಿ ನೀಡಿ, ಅವರು ಇದರ ಕುರಿತು ಆಡಿದ ಮಾತುಗಳು ಹಾಗೂ ಸುಧಾಮೂರ್ತಿ ಅವರ ಆಫೀಸ್ ಗೆ ಹೋಗಿ ಈ ದೃಶ್ಯಕಾವ್ಯ ತೋರಿಸಿದಾಗ ಅವರ ಕಣ್ಣಿನಿಂದ ನೀರು ಬಂತು. ಇವೆಲ್ಲವು ನನ್ನ ಮನ ಮುಟ್ಟಿತ್ತು ಎಂದು ದೃಶ್ಯಕಾವ್ಯದ ಸೂತ್ರಧಾರಿ ಕೆ.ಎನ್ ಗಣೇಶಯ್ಯ ಹೇಳಿದರು.

    ಮೂಲತಃ ಎಂಜಿನಿಯರ್ ಆಗಿರುವ ನಿರ್ದೇಶಕ ಬಾಲು ಚಂದ್ರಶೇಖರ್ ಅವರು ಸಹ ಈ ಅನಿಮೇಶನ್ ಸಿನಿಮಾ ಸಾಗಿ ಬಂದ ಕುರಿತು ಮಾಹಿತಿ ನೀಡಿ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು. ದಿನಿ ಸಿನಿ ಕ್ರಿಯೇಷನ್ಸ್ ನ ದಿನೇಶ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

    ಸಂಗೀತ ನಿರ್ದೇಶಕ ಅಜಯ್ ಶ್ರೀನಿವಾಸಮೂರ್ತಿ ಹೊಸಬರಾದರೂ ತುಂಬಾ ಒಳ್ಳೆಯ ಸಂಗೀತ ನೀಡಿದ್ದಾರೆ. ಒಂದು ಅಪ್ಪಟ ಕನ್ನಡದ ತಂಡ ಜಗತ್ತು ನೋಡುವಂತೆ ಈ ಹಾಡನ್ನು ಕಟ್ಟಿಕೊಟ್ಟಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!

    July 8, 2026

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

     ರಾಘವೇಂದ್ರ ಅಡಿಗ ಎಚ್ಚೆನ್. ‘ಪುಣ್ಯಕೋಟಿ’ ಹಾಡನ್ನು ಕೇಳದ ಕಿವಿಗಳೆ ಇಲ್ಲ ಎನ್ನಬಹುದು. ಅಂತಹ “ಪುಣ್ಯಕೋಟಿ” ಹಾಡನ್ನು ಖ್ಯಾತ ಕಾದಂಬರಿಕಾರ, ಬರಹಗಾರ,…

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.