ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಕೆಲವರು ಅಸಮಾಧಾನವನ್ನು ಹೊರಹಾಕಿದರಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಮಲತಾ ಅಂಬರೀಶ್, ಕೆಲವರು ಅಸಮಾಧಾನವನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ನಾನು ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಮಾಡುತ್ತಿದ್ದಂತೆ ಮತ್ತೆ ಕೆಲವರು ಚಪ್ಪಾಳೆ, ಶಿಳ್ಳೆ ಹಾಕಿ ಸಂಭ್ರಮಿಸಿದರು. ಅದು ನಿಮಗೆ ಕೇಳಲಿಲ್ಲವೇ? ಎಂದು ಮರು ಪ್ರಶ್ನೆಯನ್ನು ಹಾಕಿದರು.
ನೋಡಿ, ಯಾವುದೇ ವಿಷಯದಲ್ಲಿಯಾದರೂ ಯಾರನ್ನೂ ನೂರಕ್ಕೆ ನೂರು ಮೆಚ್ಚಿಸಲು ಆಗುವುದಿಲ್ಲ. ಈ ವಿಷಯದಲ್ಲಿ ಕೆಲವರಿಗೆ ಈಗ ಅಸಮಾಧಾನ ಆಗಿರಬಹುದು. ಆದರೆ, ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ಅಂಬರೀಶ್ ಅವರ ಅಭಿಮಾನಿಗಳು ಸದಾ ನನ್ನ ಬೆನ್ನ ಹಿಂದೆ ಇರಲಿದ್ದಾರೆ ಎಂಬ ನಂಬಿಕೆ ನನಗೆ ಇದೆ. ಈ ಹಿನ್ನೆಲೆಯಲ್ಲಿ ನಾನು ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸುಮಲತಾ ಅಂಬರೀಶ್ ಸಮಜಾಯಿಷಿ ನೀಡಿದರು.
ಹೀಗೆ ಸುಮಲತಾ ಅಂಬರೀಶ್ ಅವರು ತಮ್ಮ ಭಾಷಣದಲ್ಲಿ ಬಿಜೆಪಿ ಸೇರುವ ಬಗ್ಗೆ ಹಲವು ಅಂಶಗಳನ್ನು ಬಿಚ್ಚಿಟ್ಟಿದ್ದು, ಈ ವಾರದಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದರ ಬಗ್ಗೆ ಒಂದೇ ಒಂದು ಮಾತನಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296