ಕೊರಟಗೆರೆ: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸಲಹೆ ಮತ್ತು ಸೂಚನೆಯಂತೆ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಗೆ ನೂತನ ಅಧ್ಯಕ್ಷರಾಗಿ ಸುನಂದ ಶಶಿಧರ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಡ್ಲಹಳ್ಳಿ ಅಶ್ವತ್ಥನಾರಾಯಣ್ ತಿಳಿಸಿದರು.
ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಯಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ನ ಸಮಗ್ರ ಅಭಿವೃದ್ದಿಗೆ ನಮ್ಮ ಶಾಸಕರಾದ ಡಾ.ಜಿ.ಪರಮೇಶ್ವರ್ ಆರ್ಶಿವಾದ ಸದಾ ಇರಲಿದೆ. ಕ್ಯಾಮೇನಹಳ್ಳಿ ಗ್ರಾಪಂಗೆ ನೂತವಾಗಿ ಆಯ್ಕೆಯಾದ ಅಧ್ಯಕ್ಷರು ತಮ್ಮ ಸದಸ್ಯರ ಜೊತೆಗೂಡಿ ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಸಹಕಾರ ನೀಡಬೇಕಿದೆ ಎಂದು ತಿಳಿಸಿದರು.
ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆ ಸುನಂದ ಶಶಿಧರ್ ಮಾತನಾಡಿ, ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಗೆ ನಾನು ಪ್ರಥಮವಾಗಿ ಅವಿರೋಧ ಆಯ್ಕೆ ಆಗಿದ್ದೇನೆ. ನಮ್ಮ ಶಾಸಕರು ಮತ್ತು ಗ್ರಾಮ ಪಂಚಾಯತ್ ಸರ್ವಸದಸ್ಯರ ಜೊತೆ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ನನಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲ ನೀಡಿದ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5