ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪವರ್ಗೀಕರಿಸುವ ಹಕ್ಕು ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಆ ಮೂಲಕ 2004ರಲ್ಲಿ ಇ.ವಿ.ಚಿನ್ನಯ್ಯ ವರ್ಸಸ್ ಆಂಧ್ರ ಪ್ರದೇಶ ಸರ್ಕಾರ ಪ್ರಕರಣದಲ್ಲಿ ನೀಡಲಾಗಿದ್ದ ತೀರ್ಪನ್ನು ರದ್ದುಗೊಳಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠದಲ್ಲಿ ಒಬ್ಬರನ್ನು ಹೊರತುಪಡಿಸಿ (ನ್ಯಾ. ಬೇಲಾ ತ್ರಿವೇದಿ) ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಇದ್ದ ನ್ಯಾಯಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296