ತುಮಕೂರಲ್ಲಿ ಅನುಮಾನಸ್ಪಾದವಾಗಿ ಮೃತಪಟ್ಟಿದ್ದು, ಪತ್ನಿ ಅಂತ್ಯಸಂಸ್ಕಾರಕ್ಕೆ ಪತಿ ಬಾರದ ಹಿನ್ನೆಲೆ ಮನೆ ಎದುರೇ ಶವ ಇಟ್ಟು ಗ್ರಾಮಸ್ಥರು ಹೊರಟು ಹೊಗಿರೋ ಅಮಾನವೀಯ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ.
ಗೃಹಿಣಿಯೊಬ್ಬಳು ಅನುಮಾನಸ್ಪಾದವಾಗಿ ಮೃತಪಟ್ಟಿದ್ದಾಳೆ. ಇತ್ತ ಪತ್ನಿ ಮೃತಪಟ್ಟಿದ್ದರೂ ಪತಿರಾಯ ಅಂತ್ಯಸಂಸ್ಕಾರಕ್ಕೆ ಬಾರದ ಹಿನ್ನೆಲೆ ಗ್ರಾಮಸ್ಥರು ಮನೆಯ ಎದುರೇ ಶವ ಇಟ್ಟು, ಮನೆ ಕಡೆ ನಡೆದಿದ್ದಾರೆ. ಕಲಾವತಿ (26) ಮೃತ ದುರ್ದೈವಿಯಾಗಿದ್ದಾರೆ.
ಸೋಮಶೇಖರ್ ಎಂಬಾತನೊಂದಿಗೆ ಕಲಾವತಿ ಮದುವೆ ಆಗಿದ್ದರು. ಆದರೆ ಇವರಿಬ್ಬರ ನಡುವೆ ಅನ್ಯೋನ್ಯತೆ ಅಷ್ಟಕಷ್ಟೇ ಇತ್ತು. ಇತ್ತೀಚೆಗೆ ಪತಿ ಸೋಮಶೇಖರ್ ಪರಸ್ತ್ರೀ ಸಹವಾಸ ಮಾಡಿದ್ದ. ಇದನ್ನೂ ಪ್ರಶ್ನಿಸಿದ್ದಕ್ಕೆ ಮನೆಯ ಪಕ್ಕದ ಶೆಡ್ ನಲ್ಲಿ ಮತ್ತೊಬ್ಬಳನ್ನು ತಂದಿಟ್ಟುಕೊಂಡಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಪದೇ ಪದೇ ಪತಿ-ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.
ವಿಚಾರಕ್ಕೆ ಮತ್ತೆ ಗಲಾಟೆ ನಡೆದು ಪತಿ ಸೋಮಶೇಖರ್ ಕಲಾವತಿಯನ್ನು ಬಾವಿಗೆ ತಳ್ಳಿ ಹತ್ಯೆ ಮಾಡಿದ್ದಾನೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ. ಅಕ್ರಮ ಸಂಬಂಧಕ್ಕೆ ಪತಿಯೇ ಪತ್ನಿ ಕೊಲೆ ಮಾಡಿ ಪರಾರಿ ಆಗಿದ್ದಾನೆ ಎಂದು ಕಿಡಿಕಾರಿದ್ದಾರೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.