ಪಾವಗಡ: ತಾಲ್ಲೂಕು ನಿಡಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯತಿಯ ಸಿ.ಕೆ.ಪುರ ಗ್ರಾಮದಲ್ಲಿ ಸಮಾಜ ಸೇವಕರಾದ ನೆರಳೇಕುಂಟೆ ನಾಗೇಂದ್ರಪ್ಪ ರೋಡ್ ಶೋ ನಡೆಸುವ ಮೂಲಕ ಗ್ರಾಮ ವೀಕ್ಷಣೆ ಮಾಡಿದರು.
ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮದ ಸ್ವಚ್ಛತೆಯನ್ನು ಕಾಪಾಡಿಕೊಂಡಾಗ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತರಾಗಲು ಕಾರಣವಾಗಿರುತ್ತದೆ ಎಂದು ತಿಳಿಸಿದರು
ಇದೇ ಸಂದರ್ಭದಲ್ಲಿ ಶ್ರೀ ಚೆನ್ನಕೇಶವ ಕ್ರಿಕೆಟ್ ಆಟಗಾರರನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದಿನ ಯುವಜನತೆ ದೈಹಿಕವಾಗಿ ಸದೃಢರಾಗಲು ಕ್ರೀಡೆ ಮುಖ್ಯ ಕಾರಣವೆಂದು ತಿಳಿಸಿದರು
ಮುಂದಿನ ದಿನಗಳಲ್ಲಿ ಆಟಗಾರರಾದ ನೀವುಗಳು, ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟ, ರಾಜ್ಯ ಮಟ್ಟದಲಿ ಉತ್ತಮವಾದ ಕ್ರೀಡೆಗಳನ್ನು ಆಡುವುದರ ಮೂಲಕ ಊರಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಲಕ್ಷಮ್ಮ ಈರಣ್ಣ, ಮಾದಿಗ ಜನಾಂಗದ ಎಸ್. ಹನುಮಂತರಾಯಪ್ಪ, ಕನ್ನಮೇಡಿ, ಮೀನಕುಂಟನಹಳ್ಳಿ, ನರಸಿಂಹಪ್ಪ, ಮಾಜಿ ಗ್ರಾ.ಪಂ.ಉಪಾಧ್ಯಕ್ಷರು, ಯುವ ಮುಖಂಡ ಕಂಡಕ್ಟರ್ ಪ್ರಭು, ಮೊಬೈಲ್ ರವಿ, ಮುಖಂಡರಾದ ನರಸಿಂಹರೆಡ್ಡಿ, ನಲಿಗಾನಹಳ್ಳಿ ಮಂಜುನಾಥ್ ಆಟಗಾರರು ಮತ್ತು ಊರಿನ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB