ಮಧುಗಿರಿ: ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರಿಗೆ ಇರಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್ ಹಾಗೂ ಮಧುಸೂದನ್ ತಿಳಿಸಿದರು.
ತಾಲೂಕಿನ ದೊಡ್ಡೇರಿ ಹೋಬಳಿ ರಂಗಾಪುರ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತೆಯೇ ಸೇವೆ ಆಂದೋಲನದ ಅಂಗವಾಗಿ ಜಯನಗರ ಗ್ರಾಮ ಬಳಿ ಇದ್ದ ಪುರಾತನ ಮೇರಾ ಮಡುಗು ಕಲ್ಯಾಣಿಯನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪೂರ್ವಜರು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ನೀರಿನ ಸೆಲೆಗಳನ್ನು ಗುರುತಿಸಿ ಕಲ್ಯಾಣಿ ಕಟ್ಟೆಗಳನ್ನು ನಿರ್ಮಿಸಿದ್ದಾರೆ.
ಅವುಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಮರೆಮಡುಗು ಕಲ್ಯಾಣಿಯು ಅತ್ಯಂತ ಪುರಾತನವಾಗಿದ್ದು, ಕಾಡಿನ ಮಧ್ಯದಲ್ಲಿದೆ. ಗಿಡಗಂಟೆಗಳು ಬೆಳೆದು ಯಾರು ಗುರುತಿಸಿದೆ ಸ್ವಚ್ಛಗೊಳಿಸದೆ ಉಪಯೋಗಕ್ಕೆ ಬಾರದಂತಿತ್ತು ಗ್ರಾಮ ಪಂಚಾಯಿತಿ ವತಿಯಿಂದ ಆಂದೋಲನ ಕಮ್ಮಿ ಕೊಂಡು ಕಲ್ಯಾಣಿಗೆ ಕಾಯಕಲ್ಪ ನೀಡಲಾಗಿದೆ ಎಂದರು.
ಹೆಣ್ಣು ಮಕ್ಕಳಿಗೆ ಸಂತಾನ ಭಾಗ್ಯಕ್ಕಾಗಿ ಈ ಕಲ್ಯಾಣಿಯಲ್ಲಿ ಗಂಗಾ ಪೂಜೆ ಮಾಡಿದರೆ ಸಂತಾನ ಫಲ ಸಿಗುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಿದ್ದರು. ಆದರೆ ಇತ್ತೀಚೆಗೆ ನಿರ್ಲಕ್ಷ ಕೊಳಗಾಗಿ ಸುತ್ತಲೂ ಪೊದೆ ಬೆಳೆದು ನಿಂತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy