ಗುಬ್ಬಿ: ಪಟ್ಟಣದ ಸ್ವಚ್ಛತೆಗೆ ಎಲ್ಲರೂ ಕೂಡ ಕೈಜೋಡಿಸಬೇಕು ಇದರಿಂದ ಪಟ್ಟಣವನ್ನು ಸ್ವಚ್ಛಂದವಾಗಿ ಇಟ್ಟುಕೊಳ್ಳಬಹುದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ ಕರೆ ನೀಡಿದರು.
ಪಟ್ಟಣದ ವಿನಾಯಕ ನಗರದಲ್ಲಿ ಹೈನುಗಾರಿಕೆ ಮಾಡುತ್ತಿರುವ ಕುಟುಂಬವೊಂದು ಮನೆಯ ಪಕ್ಕದಲ್ಲಿಯೇ ಸಗಣಿ ತಿಪ್ಪೆಯನ್ನು ಹಾಕಿದ್ದರು. ಇತ್ತೀಚೆಗೆ ಬೀಳುತ್ತಿರುವ ಮಳೆಯಿಂದಾಗಿ ತಿಪ್ಪೆ ದುರ್ವಾಸನೆಯಿಂದ ಕೂಡಿದ್ದರಿಂದ ನಾಗರೀಕರು ತಿಪ್ಪೆಯನ್ನು ತೆಗೆಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಕೂಡಲೇ ಕ್ರಮವಹಿಸಿ ಮಾತನಾಡಿದ ಅವರು , ಎಲ್ಲರ ಸಹಕಾರದಿಂದ ಸ್ವಚ್ಛ ಪರಿಸರವನ್ನು ನಿರ್ಮಿಸಬೇಕಾಗಿದೆ. ತಮ್ಮ ಮನೆಯ ಮುಂದೆ ಹಿಂದೆ ಸ್ವಚ್ಛತೆಯನ್ನು ಕಾಪಾಡಿ ಕೊಂಡಾಗ ರೋಗರುಜಿನಗಳಿಂದ ದೂರವಿರಬಹುದು ಹಾಗಾಗಿ ವಿನಾಯಕ ನಗರದಲ್ಲಿ ಹಾಕಿದಂತಹ ತಿಪ್ಪೆಯನ್ನು ಅಲ್ಲಿಂದ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ ಅಲ್ಲಿನ ಜನರಿಗೆ ಸಮಸ್ಯೆ ಆಗದಂತೆ ಪಟ್ಟಣ ಪಂಚಾಯಿತಿ ಕ್ರಮವಹಿಸಿದೆ ಎಂದರು.
ತಿಪ್ಪೆ ಹಾಕಿದ್ದ ರೈತ ಕುಟುಂಬಕ್ಕೂ ಸಹ ಪರಿಸರದ ಬಗ್ಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಬಗ್ಗೆ ಮಾಹಿತಿಯನ್ನು ನೀಡಿ ಅವರಿಂದ ಮತ್ತೊಮ್ಮೆ ಇಲ್ಲಿ ತಿಪ್ಪೆ ಆಗದಂತೆಮನವಿ ಮಾಡಿದ್ದೇನೆ ಎಂದು ತಿಳಿಸಿದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5