ಸಿರಾ: ಉಕ್ರೇನ್ ನಲ್ಲಿ ಎಂಬಿಬಿಎಸ್ನ ಓದುತ್ತಿದ್ದ ವಿದ್ಯಾರ್ಥಿಗಳು ಭಾರತಕ್ಕೆ ಬಂದು ತಲುಪಿದ್ದಾರೆ. ಮಕ್ಕಳು ಆಗಮಿಸುತ್ತಿದ್ದಂತೆಯೇ ಪೋಷಕರು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.
ಸಿರಾ ನಗರದ ವಿದ್ಯಾರ್ಥಿನಿ ನಗರದ ಪ್ರಿಯಾಂಕ ಮತ್ತು ಮತ್ತೊಬ್ಬ ವಿದ್ಯಾರ್ಥಿ ಸಿರಾ ನಗರದ ಸಪ್ತಗಿರಿ ಬಡಾವಣೆಯ ತ್ರಿಶಾಂಕ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಆಗಿದ್ದಾರೆ. ಮಕ್ಕಳ ಆಗಮನದಿಂದ ಪೋಷಕರು ತೀವ್ರ ಸಂತದ ವ್ಯಕ್ತಪಡಿಸಿದ್ದಾರೆ.
ಉಕ್ರೇನ್ ದೇಶದ ವಿವಿಧ ವಿವಿಯಲ್ಲಿ ಎಂಬಿಬಿಎಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಯುದ್ಧ ಭೀತಿ ಆವರಿಸಿದಾಗ ಪೋಷಕರ ಒತ್ತಾಯಕ್ಕೆ ಮಣಿದು ಉಕ್ರೇನ್ ನಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಅಲ್ಲಿಂದ. ಸಿರಾಕ್ಕೆ ವಾಪಸ್ ಆಗಮಿಸಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.
ಈ ಸಂದರ್ಭದಲ್ಲಿ ಉಕ್ರೇನ್ ದೇಶದಿಂದ ಮರಳಿ ಸುರಕ್ಷಿತವಾಗಿ ಮನೆಗೆ ತಲುಪಿರುವ ವಿದ್ಯಾರ್ಥಿಗಳ ಮನೆಗೆ ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಶಾಸಕ ಡಾ.ರಾಜೇಶ್ ಗೌಡ, ತಹಶೀಲ್ದಾರ್ ಮಮತಾ ಮತ್ತಿತರರು ಭೇಟಿ ನೀಡಿದರು. ಮುಂದಿನ ವಿದ್ಯಾಭ್ಯಾಸದ ಕುರಿತು ಸರ್ಕಾರದಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು ಇದೇ ಸಂದರ್ಭದಲ್ಲಿ ನೀಡಿದರು.
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB