ಪಾವಗಡ: ಪಟ್ಟಣದ ಶ್ರೀನಿವಾಸ ನಗರದ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜಿನ ಕಾರ್ಯದರ್ಶಿಗಳಾದ ಡಾ.ವೆಂಕಟರಾಮಯ್ಯ ಮಾತಾಡಿ, ನಮ್ಮ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯಾದ ಸುರಕ್ಷತೆಯನ್ನು ನಾವೇ ಒದಗಿಸಿ ಕೊಡುತ್ತೇವೆ. ನಮ್ಮ ಕಾಲೇಜು ಪಾವಗಡ ತಾಲ್ಲೂಕಿಗೆ ಹೆಸರುವಾಸಿಯಾಗಿದೆ ಎಂದರು.
ಇದೇ ಸಮಯದಲ್ಲಿ ಕಾಲೇಜಿನ ಪ್ರಾಂಶುಪಾಲ ನಾಗೇಂದ್ರಕುಮಾರ್, ಉಪ ಪ್ರಾಂಶುಪಾಲರಾದ ನಾಗರಾಜು, ಕನ್ನಡ ಉಪನ್ಯಾಸಕರಾದ ಸುರೇಶ್, ಅರ್ಥಶಾಸ್ತ್ರ ಉಪನ್ಯಾಸಕರಾದ ಶಿವಕುಮಾರ್, ಎಲ್ಲ ಉಪನ್ಯಾಸಕರು, ಎಲ್ಲಾ ವಿದ್ಯಾರ್ಥಿಗಳು, ಎಲ್ಲಾ ಪೋಷಕ ವರ್ಗದವರು ಹಾಗೂ ಪತ್ರಕರ್ತ, ವಿದ್ಯಾರ್ಥಿ ನಂದೀಶ್ ನಾಯ್ಕ ಪಿ. ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5