ಕೊರಟಗೆರೆ: ಪಟ್ಟಣದ ತೇರಿನ ಬೀದಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಏಕಾದಶಿ ಹಬ್ಬದ ಮರುದಿನ ಬೆಳಗ್ಗೆ ಕೋಟೆ ವೆಂಕಟರಮಣ ಸ್ವಾಮಿಯ ರಥೋತ್ಸವ ಮಾಡುವುದು ಇತಿಹಾಸದಿಂದ ಇಲ್ಲಿ ನಡೆದುಕೊಂಡು ಬಂದಿರುವ ಪದ್ಧತಿ..
ಶ್ರೀ ವೆಂಕಟರಮಣ ಸ್ವಾಮಿಯ ತೇರಿನ ವಿಶೇಷವೇನೆಂದರೆ ಏಕಾದಶಿ ಹಬ್ಬದ ಮರುದಿನ ಬೆಳಗ್ಗೆ ತೇರನ್ನು ಇಳಿಯುವ ಸಂದರ್ಭದಲ್ಲಿ ಕರಿಯಣ್ಣ ಕೆಂಚಣ್ಣ ಎಂದು ಭೂತಾರಾಧನೆ ಮಾಡುವುದು ಇಲ್ಲಿನ ಕೆಲವು ಜನಾಂಗದ ವಾಡಿಕೆ…
ಪಟ್ಟಣದಲ್ಲಿ ವಾಸಿಸುವ ಪ್ರತಿಯೊಬ್ಬರು ಜಾತಿಭೇದವಿಲ್ಲದೆ ಈ ರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ ಶ್ರೀ ವೆಂಕಟರಮಣ ಸ್ವಾಮಿಯ ಕೃಪೆಗೆ ಪಾತ್ರರಾಗಿ ತೇರನ್ನ ಎಳೆದು ದೇವರಲ್ಲಿ ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಳ್ಳುತ್ತಾರೆ…
ಶ್ರೀ ವೆಂಕಟರಮಣ ಸ್ವಾಮಿಯ ಭಕ್ತಾದಿಗಳು ಮಾತನಾಡಿ ಮುಜರಾಯಿ ಇಲಾಖೆಗೆ ಸೇರಿರುವ ಈ ದೇವಸ್ಥಾನಗಳನ್ನು ಜೀರ್ಣೋದ್ವಾರ ಮಾಡುವುದರಲ್ಲಿ ನಮ್ಮ ರಾಜ್ಯ ಸರ್ಕಾರ ವಿಫಲವಾಗಿರುವುದು ನಮ್ಮ ದುರದೃಷ್ಟವೇ ಸರಿ ದೇವಸ್ಥಾನಗಳಲ್ಲಿ ಭಕ್ತಾದಿಗಳು ಹರಕೆ ಎಂದು ಹುಂಡಿಯಲ್ಲಿ ಹಾಕುವ ಹಣವನ್ನು ಮಾತ್ರ ತೆಗೆದುಕೊಂಡು ಹೋಗುತ್ತಾರೆ ಆದರೆ ದೇವಸ್ಥಾನಗಳ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಮುಜರಾಯಿ ಇಲಾಖೆಯ ಸಂಬಂಧ ಪಟ್ಟ ದೇವಸ್ಥಾನಗಳ ಅಭಿವೃದ್ಧಿ ಬಗ್ಗೆ ಚಿಂತಿಸಬೇಕು ಎಂದು ತಿಳಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy