nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.

    April 16, 2026

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026
    Facebook Twitter Instagram
    ಟ್ರೆಂಡಿಂಗ್
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯ ಸುವರ್ಣಮುಖಿ ಮತ್ತು ಜಯಮಂಗಲಿ ನದಿಗಳಿಗೆ ಜೀವಕಳೆ : 25 ವರ್ಷಗಳ ಬಳಿಕ ಮಾವತ್ತೂರು ಕೆರೆ ಕೋಡಿ
    ಕೊರಟಗೆರೆ August 3, 2022

    ಕೊರಟಗೆರೆಯ ಸುವರ್ಣಮುಖಿ ಮತ್ತು ಜಯಮಂಗಲಿ ನದಿಗಳಿಗೆ ಜೀವಕಳೆ : 25 ವರ್ಷಗಳ ಬಳಿಕ ಮಾವತ್ತೂರು ಕೆರೆ ಕೋಡಿ

    175ಕ್ಕೂ ಅಧಿಕ ಕೆರೆ-ಕಟ್ಟೆಗಳು ಭರ್ತಿ  ಸೇತುವೆ-ರಸ್ತೆ ಸಂಪರ್ಕ ಕಡಿತ
    By adminAugust 3, 2022No Comments2 Mins Read
    koratagere

    ಕೊರಟಗೆರೆ : ಮಳೆರಾಯನ ಆರ್ಭಟದಿಂದ ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿಪಾತ್ರದ ಸೇತುವೆಗಳು ಜಲಾವೃತ ಆಗಿದೆ. ಕೊರಟಗೆರೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಬಹುತೇಕ ಮಣ್ಣಿನ ಮನೆಗಳು ಕುಸಿದಿವೆ. ರೈತಾಪಿವರ್ಗ ಬಿತ್ತನೆ ಮಾಡಿದ್ದ ಸಾವಿರಾರು ಎಕರೇ ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ ಬೆಳೆಗಳು ನೀರಿನಲ್ಲಿ ಮುಳುಗಿ ರೈತರಿಗೆ ಕೋಟ್ಯಾಂತರ ರೂ ನಷ್ಟವಾಗಿದೆ.

    ಕೊರಟಗೆರೆ ಕ್ಷೇತ್ರದ ಜಯಮಂಗಲಿ, ಸುವರ್ಣಮುಖಿ ಮತ್ತು ಗರುಡಾಚಲ ನದಿಗಳು 25ವರ್ಷಗಳ ನಂತರ ಮತ್ತೇ ಸಂಗಮವಾಗಿವೆ. ವೀರಸಾಗರ ಮತ್ತು ಚೀಲಗಾನಹಳ್ಳಿ ಗ್ರಾಮವೇ ಜಲಾವೃತವಾಗಿ ಮನೆಯಲ್ಲಿದ್ದ ದವಸದಾನ್ಯಗಳು ನೀರಿನಲ್ಲಿ ಮುಳುಗಿ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆಯ ಸಹಾಯದಿಂದ ತೋಟದಲ್ಲಿನ ರೈತರನ್ನು ರಕ್ಷಣೆ ಮಾಡಲಾಗಿದೆ.


    Provided by
    Provided by

    koratagere 1

    ಕೊರಟಗೆರೆ ಕ್ಷೇತ್ರದಲ್ಲಿ ರೈತರು ಬಿತ್ತನೆ ಮಾಡಲಾಗಿದ್ದ ಕೃಷಿ ಬೆಳೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ನೂರಾರು ಮನೆಗಳು ನೆಲಸಮ ಆಗಿವೆ. ಮನೆಯಲ್ಲಿದ್ದ ಧಾನ್ಯಗಳು ನಾಶವಾಗಿವೆ. ಹೂವಿನ ಬೆಳೆಗಳು ನೀರಿನಲ್ಲಿ ಮುಳುಗಿವೆ. ತೋಟಗಳಲ್ಲಿ 5ಅಡಿಗೂ ಅಧಿಕ ನೀರು ನಿಂತಿದೆ. ಮಳೆರಾಯನ ಆರ್ಭಟದಿಂದ ಕೊರಟಗೆರೆ ಕ್ಷೇತ್ರದಲ್ಲಿ ಊಹಿಸಲು ಆಗದಷ್ಟು ನಷ್ಟವಾಗಿದೆ. ಕಂದಾಯ, ಕೃಷಿ ಮತ್ತು ತೋಟಗಾರಿಕೆ ಅಧಿಕಾರಿವರ್ಗ ಜಂಟಿಸಮೀಕ್ಷೆ ಮಾಡಬೇಕಿದೆ.

    ತ್ರಿಮೂರ್ತಿ ನದಿಗಳ ಸಂಗಮ:

    ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿಗಳು ಕೊರಟಗೆರೆ ಕ್ಷೇತ್ರದ ಮೂಲಕ ಹರಿಯುತ್ತವೆ. 3 ನದಿಗಳು ವೀರಸಾಗರ ಬಳಿ ಸಂಗಮವಾಗಿ ಜಯಮಂಗಲಿ ನದಿಯಾಗಿ ಹರಿದು ಆಂಧ್ರಪ್ರದೇಶದ ಪರಿಗಿ ಕೆರೆಗೆ ಸೇರಲಿದೆ. ಕೊರಟಗೆರೆ ಕ್ಷೇತ್ರದ ಮಾವತ್ತೂರು ಕೆರೆಯು 25ವರ್ಷದ ನಂತರ ಭರ್ತಿಯಾಗಿದೆ. ತೀತಾ ಜಲಾಶಯ, ಜೆಟ್ಟಿಅಗ್ರಹಾರ ಮತ್ತು ತುಂಬಾಡಿ ಜಲಾಶಯ ಸೇರಿದಂತೆ ಕೊರಟಗೆರೆಯ 175ಕ್ಕೂ ಅಧಿಕ ಕೆರೆಕಟ್ಟೆಗಳು ತುಂಬಿ ಕೋಡಿಬಿದ್ದಿವೆ.

    ನೀರಿನಲ್ಲೇ ರೈತರ ಬಳಿ ಬಂದ ತಹಶೀಲ್ದಾರ್ ನದಿಯಲ್ಲಿ ಹರಿಯುವ ನೀರನ್ನು ಲೆಕ್ಕಿಸದೇ ಸೇತುವೆಯನ್ನು ದಾಟಿ ಮುಂಜಾನೆಯೇ ರೈತರ ಮನೆ ಮತ್ತು ಜಮೀನುಗಳಿಗೆ ತಹಶೀಲ್ದಾರ್ ನಾಹೀದಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆ-ಕಟ್ಟೆಗಳ ಮೇಲೆ ನಿಗಾ ವಹಿಸುವಂತೆ ಸಣ್ಣ ನೀರಾವರಿ ಇಲಾಖೆ ಸೂಚಿಸಿದ್ದಾರೆ. ಕಂದಾಯ ಇಲಾಖೆ, ತಾಪಂ ಇಓ, ಪಪಂ ಮುಖ್ಯಾಧಿಕಾರಿ ಮತ್ತು ಪೊಲೀಸ್ ಇಲಾಖೆ 24ಗಂಟೆಯು ಕಾರ್ಯನಿರ್ವಹಣೆ ಮಾಡಲಿದೆ. ಗ್ರಾಪಂ ಪಿಡಿಓ ಮತ್ತು ನಾಡಕಚೇರಿ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡುವಂತೆ ತಹಶೀಲ್ದಾರ್ ಖಡಕ್ ಆದೇಶ ಮಾಡಿದ್ದಾರೆ.

    koratagere

    ಸೇತುವೆ ಜಲಾವೃತ-ಸಂಪರ್ಕ ಕಡಿತ:

    ಸುವರ್ಣಮುಖಿ ಮತ್ತು ಜಯಮಂಗಳಿ ನದಿಪಾತ್ರದ ಬಿ.ಡಿ.ಪುರ ಸಂಪರ್ಕದ ಸೇತುವೆ, ದೊಡ್ಡಸಾಗ್ಗೆರೆ ಸಂಪರ್ಕದ ಸೇತುವೆ, ಕೋಡ್ಲಹಳ್ಳಿ ಸೇತುವೆ, ಚೀಲಗಾನಹಳ್ಳಿ ಸೇತುವೆ, ಚನ್ನಸಾಗರ ಸೇತುವೆ, ಚೀಲಗಾನಹಳ್ಳಿ ಸೇತುವೆ, ಲಂಕೇನಹಳ್ಳಿ ಸೇತುವೆ ಜಲಾವೃತವಾಗಿ ಸಾರಿಗೆ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಕೊರಟಗೆರೆ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ನೂರಾರು ಮನೆಗಳಿಗೆ ನೀರು ಹರಿದು ಲಕ್ಷಾಂತರ ರೂ ನಷ್ಟವಾಗಿದೆ.

    ಮಳೆರಾಯನ ಕೃಪೆಯಿಂದ ಕೊರಟಗೆರೆ ಕ್ಷೇತ್ರದ ಕೆರೆಕಟ್ಟೆ ತುಂಬಿ ದಶಕಗಳ ನಂತರ 3ನದಿಗಳ ಸಂಗಮವಾಗಿದೆ. ಕೊರಟಗೆರೆ ಪಟ್ಟಣ ಮತ್ತು ಗ್ರಾಮೀಣದಲ್ಲಿ ಮನೆಗಳು ಕುಸಿದು ಬೆಳೆಗಳಿಗೆ ಹಾನಿಯಾಗಿವೆ. ನದಿಪಾತ್ರದ ರೈತರು ಎಚ್ಚರಿಕೆಯಿಂದ ಇರಬೇಕಿದೆ. ಕೆರೆ-ಕಟ್ಟೆಗಳ ರಕ್ಷಣೆಗೆ ಅಧಿಕಾರಿವರ್ಗ ಮುಂದಾಗಿ ರಾಜ್ಯ ಸರಕಾರ ತಕ್ಷಣ ರೈತರಿಗೆ ತುರ್ತು ಪರಿಹಾರ ನೀಡಬೇಕಿದೆ ಎಂದು ಮಾಜಿ ಶಾಸಕಪಿ.ಆರ್.ಸುಧಾಕರಲಾಲ್ ಒತ್ತಾಯಿಸಿದರು.

    ಕೊರಟಗೆರೆಯ ವೀರಸಾಗರ ಮತ್ತು ಚೀಲಗಾನಹಳ್ಳಿ ಗ್ರಾಮ ಜಲಾವೃತ ಆಗಿದೆ. ಅಧಿಕಾರಿವರ್ಗ ಜಂಟಿಯಾಗಿ ತುರ್ತು ಕಾರ್ಯಚರಣೆ ನಡೆಸುತ್ತೀದ್ದಾರೆ. ಅವಶ್ಯಕತೆ ಇರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ಈಗಾಗಲೇ ತಹಶೀಲ್ದಾರ್‍ಗೆ ಸೂಚಿಸಿದ್ದೇನೆ. ಸರಕಾರದ ಆದೇಶದಂತೆ ಜಂಟಿ ಸಮೀಕ್ಷೆ ನಡೆಸಿ ಬೆಳೆಪರಿಹಾರ ಮತ್ತು ಪುರ್ನವಸತಿಗೆ ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.

    April 16, 2026

    ತಿಪಟೂರು: ಅಸ್ಪೃಶ್ಯತಾ ಆಚರಣೆ, ಮರ್ಯಾದೆಗೇಡು ಹತ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಅಣಿಯಾಗಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ರಾಜಶೇಖರ್…

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.