ಮಧುಗಿರಿ: ಆಗಸ್ಟ್ 15ರ ಸ್ವಾತಂತ್ರ ದಿನಾಚರಣೆ ಅಮೃತ ಮಹೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಸಭಾಂಗಣದಲ್ಲಿ ತಿಳಿಸಿದ್ದಾರೆ.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಂಘ-ಸಂಸ್ಥೆಗಳ ಪೂರ್ವಭಾವಿ ಸಭೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೂ ಮೂರು ದಿನಗಳ ಕಾಲ ಸರ್ಕಾರಿ ಕಚೇರಿಗಳ ಮೇಲೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯ್ತಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕೆಂದು. ರಾಷ್ಟ್ರಧ್ವಜಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾಡಬಾರದು ಎಂದು ತಿಳಿಸಿದರು.
ಸಂದರ್ಭದಲ್ಲಿ ಮಾಜಿ ಸೈನಿಕರಿಗೆ ಪೆರೇಡ್ ಮಾಡಲು ಅವಕಾಶ ನೀಡಲಾಗುವುದು ಮತ್ತು ಅವರಿಗೆ ಸನ್ಮಾನ ಮಾಡಲಾಗುವುದಿಲ್ಲ. ಸರ್ಕಾರಿ ನೌಕರರು ಕ್ರಿಯಾಶೀಲವಾಗಿ ಕೆಲಸ ಮಾಡಿದಾಗ ವಿಜೃಂಭಣೆಯಿಂದ ಆಚರಿಸಲು ಸಾಧ್ಯ ಎಂದರು.
ಆಗಸ್ಟ್ 15ರ ಬೆಳಿಗ್ಗೆ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾತಂತ್ರೋತ್ಸವದ ದಿನಕ್ಕೆ ಚಾಲನೆ ನೀಡಲಾಗುವುದು ಅದೇ ರೀತಿ ಸರ್ಕಾರಿ ಕಛೇರಿಗಳು ಬ್ಯಾಂಕುಗಳು ಆಗಸ್ಟ್ 13ರಿಂದ ತಮ್ಮ ಕಚೇರಿಗಳ ಮೇಲೆ ವಿದ್ಯುತ್ ಅಲಂಕಾರ ಮಾಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸುರೇಶ್ ಆಚಾರ್ ಕ್ಷೇತ್ರ ಶಿಕ್ಷಣಾಧಿಕಾರಿ ನಂಜುಂಡಯ್ಯ ತಾಲೂಕು ಮಟ್ಟದ ಅಧಿಕಾರಿಗಳು ಕನ್ನಡಪರ ಸಂಘಟನೆಗಳ ಮುಖ್ಯಸ್ಥರುಗಳು ಹಾಜರಿದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz