nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು

    May 14, 2026

    ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ

    May 14, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು
    • ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ
    • ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ
    ಮಧುಗಿರಿ May 14, 2026

    ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ

    By adminMay 14, 2026No Comments2 Mins Read
    kn rajanna

    ಮಧುಗಿರಿ: ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಮೇ 20ರಂದು ತುಮಕೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ನಮ್ಮ ತಾಲೂಕಿನಿಂದ ಅಧಿಕ ಜನರನ್ನು ಕರೆತರುವ ನಿಟ್ಟಿನಲ್ಲಿ 250ಕ್ಕೂ ಅಧಿಕ ಬಸ್‌ ಗಳನ್ನು ನಿಯೋಜಿಸಲಾಗಿದೆ. ಬರುವವರಿಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಎನ್.ರಾಜಣ್ಣ ಸಲಹೆ ನೀಡಿದರು.

    ಅವರು ತಾಲೂಕು ಪಂಚಾಯಿತಿ ಆವರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ ಬುಧವಾರ 20 ಅರ್ಹ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿದ ನಂತರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.


    Provided by
    Provided by

    ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಧಿಕಾರಿಗಳು ಅಂದು ಬೆಳಿಗ್ಗೆ ಸಕಾಲಕ್ಕೆ ಜನರನ್ನು ಹೊರಡಿಸಿ ಕಾರ್ಯಕ್ರಮಕ್ಕೆ ಕರೆತರಬೇಕು. ಇದು ನಮ್ಮ ಸರ್ಕಾರದ ಸಾಧನಾ ಸಮಾವೇಶವಾಗಿದ್ದು, ಬರುವ ಜನರು ಮೀಸಲಿರುವ ಆಸನಗಳಲ್ಲಿ ಕೂತು ವೀಕ್ಷಿಸಬೇಕು. ಸಮಾರಂಭ ಮುಗಿಯುವ ತನಕ ಯಾರೂ ಸಹ ಎದ್ದು ಬರಬಾರದು. ನಂತರ ಅವರಿಗಾಗಿ ನಿಗದಿಪಡಿಸಿರುವ ಬಸ್‌ಗಳಲ್ಲಿ ಆಯಾಯ ಗ್ರಾಮಗಳಿಗೆ ಜನರನ್ನು ಕ್ಷೇಮವಾಗಿ ಬಿಡುವುದು ಸಹ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

    ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರು ಕರ್ನಾಟಕ ಮಾದರಿಯಲ್ಲಿ ಉಚಿತ ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಆದರೆ ವಿಜಯ್ ಅವರ ಹಾದಿ ಮುಳ್ಳಿನ ಹಾದಿಯಾಗಿದ್ದು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಭಾವಾವೇಶದಲ್ಲಿ ಭರವಸೆಗಳನ್ನು ನೀಡುವುದರಿಂದ ಮುಂದೆ ಎದುರಾಗುವ ಸಮಸ್ಯೆ–ಸವಾಲುಗಳನ್ನು ಹೇಗೆ ಸ್ವೀಕರಿಸಿ ಪರಿಹರಿಸಿಕೊಳ್ಳುತ್ತಾರೆನ್ನುವುದನ್ನು ಕಾದು ನೋಡಬೇಕು ಎಂದರು.

    ಕರ್ನಾಟಕದಲ್ಲಿ ಸಿ.ಎಂ.ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಶಾಸಕ ಕೆ.ಎನ್.ರಾಜಣ್ಣ ಉತ್ತರಿಸಿ, ಮೋದಿ ಆಕಾಶದಲ್ಲಿ ತೇಲಾಡುತ್ತಿದ್ದು ಅವರು ಭೂಮಿ ಮೇಲೆ ಇಲ್ಲ. ಭೂಮಿಯ ಮೇಲೆ ಇದ್ದು ಮಾತನಾಡಿದರೆ ಅದು ಅರ್ಥವಾಗುತ್ತದೆ. ಆದ್ದರಿಂದ ನಮ್ಮ ಪಕ್ಷದ ವಿಚಾರ ಅವರಿಗೆ ಯಾಕೆ ಹೇಳಬೇಕು ಎಂದು ತಿರುಗೇಟು ನೀಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದೆ. ಜನಾದೇಶಕ್ಕೆ ನಾವು ತಲೆಬಾಗುತ್ತೇವೆ ಎಂದು ರಾಜಣ್ಣ ತಿಳಿಸಿದರು.

    ಸಭೆಯಲ್ಲಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಶ್ರೀನಿವಾಸ್, ತಾಪಂ ಇಒ ಲಕ್ಷ್ಮಣ್, ಎಇ ಧನಂಜಯ್, ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ವಿ.ವೆಂಕಟರಾಜು, ಅಧಿಕಾರಿ ಕಲ್ಪನಾ ಬಾಯಿ, ಬಿಸಿಎಂ ಅಧಿಕಾರಿ ಜಯರಾಮ್, ಲೋಕೋಪಯೋಗಿ ಇಲಾಖೆಯ ಇಇ ಹನುಮಂತರಾವ್, ಎಇಇ ಸಂಪತ್ ಕುಮಾರ್, ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ಕಾಂತರಾಜು, ಪುರಸಭಾ ಮುಖ್ಯಾಧಿಕಾರಿ ಎಸ್.ಸುರೇಶ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026

    ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ

    May 11, 2026

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು

    May 14, 2026

    ತುಮಕೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿ ಕಾರೇಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪೆಟ್ಟಿಗೆ ಅಂಗಡಿಯನ್ನಿಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ…

    ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ

    May 14, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.