ತುಮಕೂರು: ತುರುವೇಕೆರೆ ಮೈತ್ರಿ ಸಭೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ ಸಮರ ನಡೆದಿದೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.
ಸಭೆಯಲ್ಲಿ ಅಸಮಾಧಾನ ಹೊರಹಾಕಿದ ಬಿಜೆಪಿ ಮುಖಂಡ ಕೊಂಡಜ್ಜಿ ವಿಶ್ವನಾಥ್ ಅವರನ್ನು ಕಂಡು ಅಭ್ಯರ್ಥಿ ಸೋಮಣ್ಣ ಕೆಲಕಾಲ ಗೊಂದಲಕ್ಕೆ ಒಳಗಾದರು.
ಕಳೆದ ಬಾರಿ ನಾನು ಸೋಲೋದಕ್ಕೆ ಕೊಂಡಜ್ಜಿ ವಿಶ್ವನಾಥ್ ಕೂಡ ಕಾರಣ ಎಂದಿದ್ದ ಶಾಸಕ ಎಂ.ಟಿ. ಕೃಷ್ಣಪ್ಪ. ಸಭೆಯ ಭಾಷಣದಲ್ಲಿ ಹೇಳಿದ್ದ ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಅವರ ಭಾಷಣ ಮುಗಿಯುತ್ತಿದ್ದಂತೆ, ಅದಕ್ಕೆ ಸಮಜಾಯಿಷಿ ನೀಡಲು ಮುಂದಾದ ಕೊಂಡಜ್ಜಿ ವಿಶ್ವನಾಥ್ ಅವರನ್ನು, ಇದಕ್ಕೆ ಬೇಡ ಎಂದು ಸೋಮಣ್ಣ ಹೇಳಿದರು. ಈ ವೇಳೆ ಶಾಸಕ ಕೃಷ್ಣಪ್ಪ ವಿರುದ್ಧ ಕೊಂಡಜ್ಜಿ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ವೇದಿಕೆಯ ಮುಂಭಾಗದಲ್ಲಿ ಇದ್ದ ಜೆಡಿಎಸ್ ಕಾರ್ಯಕರ್ತ ಸತೀಶ್ ಎಂಬಾತ ಆಕ್ಷೇಪ ವ್ಯಕ್ತಪಡಿಸಿದರು. “ಅಣ್ಣ ಹೀಗಾದ್ರೆ ಬೇಡ ಬಾ ಅಣ್ಣ ಹೋಗೋಣ” ಎಂದು ಶಾಸಕ ಕೃಷ್ಣಪ್ಪರನ್ನ ಕರೆದ ಸತೀಶ್, ನಿಜ ಹೇಳಿದ್ದಾರೆ ಶಾಸಕರು ಹೇಳಲಿ ಬಿಡಿ ಎಂದು ಜೆಡಿಎಸ್ ನ ಸತೀಶ್ ಹಾಗೂ ಇತರ ಕಾರ್ಯಕರ್ತರು ಹೇಳಿದರು.
ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ನಡೆಯುತ್ತಿರುವ ಬಿಜೆಪಿ ಜೆಡಿಎಸ್ ಪಕ್ಷದ ಸಮನ್ವಯ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಕಾರ್ಯಕರ್ತರ ವಾಗ್ವಾದ ಹಿನ್ನೆಲೆ ಸಭೆಯಲ್ಲಿ ಕೆಲಕಾಲ ಗೊಂದಲ ಉಂಟಾಯಿತು.
ಈ ಹಿಂದೆ ಕೊಂಡಂಜಿ ವಿಶ್ವನಾಥ್ ಜೆಡಿಎಸ್ ನಲ್ಲಿದ್ದರು, ಸದ್ಯ ಬಿಜೆಪಿಯಲ್ಲಿರುವ ವಿಶ್ವನಾಥ್, ಶಾಸಕ ಎಮ್. ಟಿ. ಕೃಷ್ಣಪ್ಪ ಹಾಗೂ ಮಾಜಿ ಶಾಸಕ ಮಸಾಲೆ ಜಯರಾಮ್ ರಿಂದ ಪರಿಸ್ಥಿತಿ ತಿಳಿಗೊಂಡಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296