ರಾಜ್ಯದಲ್ಲಿ ಭೀಕರ ಬರದಿಂದ ಕುಡಿಯುವ ನೀರಿನ ಸಮಸ್ಯೆಯಾಗಿದೆ , ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಈ ಮಧ್ಯೆ ತಮಿಳುನಾಡಿನಿಂದ ಮತ್ತೆ ಕ್ಯಾತೆ ತೆಗೆದಿದೆ.ಕಾವೇರಿ ನದಿ ನೀರು ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿದೆ. ಕುಡಿಯಲು 0.5 ಟಿಎಂಸಿ ನೀರು ಸಾಕು, ಕುಡಿಯುವ ನೀರಿನ ನೆಪದಲ್ಲಿ ನೀರು ಬಿಡುಗಡೆಗೆ ನಿರಾಕರಿಸದೆ, ನಮ್ಮ ತಿಂಗಳ ಪಾಲು 2.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ನೆನ್ನೆ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಒತ್ತಾಯಿಸಿದ್ದಾರೆ.
ಇನ್ನು ತಮಿಳುನಾಡಿನ ಒತ್ತಾಯಕ್ಕೆ ವಿರೋಧಿಸಿ, ‘ರಾಜ್ಯದಲ್ಲಿ ಭೀಕರ ಬರದಿಂದ ಕುಡಿಯುವ ನೀರಿನ ಸಮಸ್ಯೆಯಾಗಿದೆ. ನೀರು ಹರಿಸಲು ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲವೆಂದು ವಾದ ಮಾಡಿದ್ದಾರೆ. ಕರ್ನಾಟಕ, ತಮಿಳುನಾಡು ರಾಜ್ಯಗಳ ವಾದ ಆಲಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ, ಮೇ 16ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಇದರ ಜೊತೆಗೆ ಮೇ ತಿಂಗಳ ಕೊನೆ ವಾರದಲ್ಲಿ ಸಿಡಬ್ಲ್ಯೂಎಮ್ಎ ಸಭೆ ನಡೆಸಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA