ಕೊಪ್ಪಳ: ತಾಲ್ಲೂಕಿನ ಗಬ್ಬೂರು ಗ್ರಾಮದಲ್ಲಿ ಮಾ. 21ರಂದು ಒಂದೂವರೆ ತಿಂಗಳ ಬಾಣಂತಿ ನೇತ್ರಾವತಿ (28) ಎಂಬುವರು ಮಧ್ಯರಾತ್ರಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ.
ನೇತ್ರಾವತಿ ತಾಯಿ ಕನಕಮ್ಮ ಕಂಬಳಿ ಹಾಗೂ ತಮ್ಮ ಮಾರುತಿ ಕಂಬಳಿ ಈ ಕೃತ್ಯ ಎಸಗಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.ಬಾಣಂತನಕ್ಕೆ ತವರು ಮನೆಗೆ ಬಂದಿದ್ದ ನೇತ್ರಾವತಿ ಶವ ಮನೆ ಬಳಿಯಿರುವ ಖಾಲಿ ಜಾಗದಲ್ಲಿ ಸುಟ್ಟಸ್ಥಿತಿಯಲ್ಲಿ ಕಂಡುಬಂದಿದೆ. ಏನಾಗಿದೆ ಎಂಬುದು ಗೊತ್ತಿಲ್ಲ ಎಂದು ಮೃತಳ ಸಂಬಂಧಿಕರು ಹೇಳಿದ್ದರು. ಯುಗಾದಿ ಅಮವಾಸ್ಯೆ ಇದ್ದ ಕಾರಣ ಇದು ನಿಧಿಗಾಗಿ ಮಾಡಿದ ಕೃತ್ಯವಾಗಿರಬಹುದು ಎಂದು ಅನೇಕರು ಶಂಕೆ ವ್ಯಕ್ತಪಡಿಸಿದ್ದರು.
ಪೊಲೀಸರು ಫೋನ್ ಕರೆ ದಾಖಲೆ, ಕುಟುಂಬದವರ ನಡುವಿನ ಜಗಳ ಈ ಎಲ್ಲಾ ಅಂಶಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದರು. ಬಳಿಕ ವಿಚಾರಣೆಯಲ್ಲಿ ಕುಟುಂಬದವರಿಂದಲೇ ಈ ಕೃತ್ಯ ನಡೆದಿದೆ ಎನ್ನುವ ವಿಷಯ ಬಹಿರಂಗವಾಗಿದೆ. ಹೆರಿಗೆ ಖರ್ಚು ಹಾಗೂ ಬಂಗಾರ ಕೊಡಿಸುವ ವಿಷಯಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ರಾತ್ರಿ ಜಗಳವಾಗಿದ್ದು, ಇದೇ ಕಾರಣಕ್ಕೆ ಮಗಳನ್ನು ತಾಯಿ ಹಾಗೂ ಸಹೋದರ ಸೇರಿಕೊಂಡು ಕೊಲೆ ಮಾಡಿದ್ದಾರೆ. ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾಧ್ಯಮಗಳಿಗೆ ತಿಳಿಸಿದರು. ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA