nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025
    Facebook Twitter Instagram
    ಟ್ರೆಂಡಿಂಗ್
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    • ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ
    • ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶದ ಅಭಿವೃದ್ದಿಗೆ ಶಿಕ್ಷಕರೇ ಕಾರಣ : ಸಚಿವ ಮಂಕಾಳ ವೈದ್ಯ
    ಜಿಲ್ಲಾ ಸುದ್ದಿ September 6, 2024

    ದೇಶದ ಅಭಿವೃದ್ದಿಗೆ ಶಿಕ್ಷಕರೇ ಕಾರಣ : ಸಚಿವ ಮಂಕಾಳ ವೈದ್ಯ

    By adminSeptember 6, 2024No Comments2 Mins Read
    karavara

    ಕಾರವಾರ: ದೇಶದ ಅಭಿವೃದ್ಧಿ ರಾಜಕಾರಣಿಗಳಿಂದ, ಬೇರೆ ಬೇರೆ ವ್ಯವಸ್ಥೆಯಿಂದ ಆಗಿದೆ ಎಂದು ಅಂದುಕೊAಡಿದ್ದರೆ ಅದು ತಪ್ಪು, ದೇಶದ ಅಭಿವೃದ್ಧಿಗೆ ನಿಜವಾಗಿಯೂ ಕಾರಣರಾದವರು ಶಿಕ್ಷಕರು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್. ವೈದ್ಯ ಹೇಳಿದರು.

    ಅವರು ಗುರುವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ, ಲಯನ್ಸ್ ಕ್ಲಬ್ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರದ ಮೂಡಗಣಪತಿ ಸಬಾಭವನದಲ್ಲಿ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣರವರ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಯಾವುದೇ ವ್ಯಕ್ತಿ ಎಷ್ಟೇ ಎತ್ತರಕ್ಕೆ ಏರಿದರು, ತನಗೆ ವಿದ್ಯೆ ಕಲಿಸಿದ ಶಿಕ್ಷಕರಿಗೆ ತಲೆ ಬಾಗುತ್ತಾನೆ, ಕೈ ಮುಗಿಯುತ್ತಾನೆ. ಶಿಕ್ಷಕರಿಗೆ ದೇಶದ ಮೂಲೆ ಮೂಲೆಯಲ್ಲಿಯು ಆಸ್ತಿ ಇದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳೆಲ್ಲಾ ಅವರಿಗೆ ವಿದ್ಯಾರ್ಥಿಗಳಾಗಿದ್ದು, ಅವರದೇ ಆಸ್ತಿಯಾಗಿದ್ದಾರೆ. ಶಿಕ್ಷಕರು ಯಾವಾಗಲು ಗುರುಗಳೇ ಆಗಿದ್ದು, ನಿವೃತ್ತಿ ನಂತರವು ಗುರುಗಳೇ ಆಗಿರುತ್ತಾರೆ. ಶಿಕ್ಷಣದಂತಹ ಪುಣ್ಯದ ಕೆಲಸದಲ್ಲಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು, ಇದು ಮರೆಯಲಾಗದ ಕ್ಷೇತ್ರ. ಶಿಕ್ಷಕರ ವೃತ್ತಿಯಲ್ಲಿ ಗೌರವವಿದೆ, ಶಕ್ತಿ ಇದೆ ಎಂದರು.

    ಜಿಲ್ಲೆಯಲ್ಲಿ ತಮ್ಮ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದೇನೆ. ಮುಂದೆ ಕೂಡ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ಕೊಡುತ್ತೇನೆ. ಶಿಕ್ಷಕರ ಸಲಹೆ ಸೂಚನೆ ಮಾರ್ಗದರ್ಶನ ಸದಾ ಬೇಕು. ದೇಶ, ರಾಜ್ಯ, ಊರು ಸಮೃದ್ಧಿಯಾಗಿ ಬೆಳೆಯಲು ಶಿಕ್ಷಕರು ಕಾರಣ, ನಾವು ಇಂದು ಇಷ್ಟು ಎತ್ತರಕ್ಕೆ ಬೆಳೆಯಲು, ಇಲ್ಲಿ ನಿಂತು ಮಾತನಾಡಲು ಶಿಕ್ಷಕರೆ ಕಾರಣಿಕರ್ತರಾಗಿದ್ದಾರೆ ಎಂದು ಸಚಿವರು ಹೇಳಿದರು.

    ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ಸಮಾಜದಲ್ಲಿ ಶಿಕ್ಷಕರಿಗೆ ಬಹು ದೊಡ್ಡ ಜವಾಬ್ದಾರಿ ಇದೆ. ಮಕ್ಕಳು ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳುವ ರೀತಿ ಅವರನ್ನು ವಿದ್ಯಾಭ್ಯಾಸದ ಸಮಯದಲ್ಲೇ ಶಿಕ್ಷಕರು ಮಾರ್ಪಡಿಸಬೇಕು. ಯಾವುದೇ ಸಮಸ್ಯೆಗಳನ್ನು ಎದುರಿಸುವ ರೀತಿಯಲ್ಲಿ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡುವಂತಾಗಬೇಕು, ಮಕ್ಕಳು ಪಾಲಕರಿಗಿಂತ ಶಿಕ್ಷಕರ ಮಾತನ್ನು ತಪ್ಪದೇ ಪಾಲಿಸುತ್ತಾರೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪ್ರಾರಂಭದಲ್ಲಿಯೇ ಸಂಸ್ಕಾರಯುತ ವಿದ್ಯಾರ್ಥಿಗಳಾದರೆ, ಮುಂದೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದರು.

    ಪ.ಪಂ.ಅಧ್ಯಕ್ಷ ನಾಗರಾಜ್ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಕುಮಟಾ ಡಯಟ್ನ ಉಪ ನಿರ್ದೇಶಕ ಜಿ.ಎಸ್. ಭಟ್ಟ, ಜಿ.ಪಂ. ಮುಖ್ಯ ಯೋಜನಾಧಿಕಾರಿ ವಿನೋದ ಅನ್ವೇಕರ, ತಹಸೀಲ್ದಾರ್ ರವಿರಾಜ್ ದೀಕ್ಷಿತ್, ಹೊನ್ನಾವರ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಮತ್ತಿತರರು ಇದ್ದರು.

    ಕಾರವಾರ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಅತ್ತ್ಯುತ್ತಮ ಪ್ರಶಸ್ತಿ ಪಡೆದ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಕರಿಗೆ, ನಿವೃತ್ತ ಶಿಕ್ಷಕರಿಗೆ ಮತ್ತು ಕಳೆದ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ಪಡೆದವರನ್ನು ಸನ್ಮಾನಿಸಲಾಯಿತು.

    ಡಿಡಿಪಿಐ ಲತಾ ನಾಯ್ಕ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಬಿ. ನಾಯ್ಕ್ ವಂದಿಸಿದರು. ಸಹ ಶಿಕ್ಷಕರರಾದ ಸುದೇಶ್ ನಾಯ್ಕ ಹಾಗೂ ಪ್ರಕಾಶ್ ನಾಯ್ಕ್ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ತುಮಕೂರು: ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ…

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.