nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?

    April 23, 2026

    ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    April 23, 2026

    ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

    April 23, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?
    • ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ
    • ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ
    • ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ
    • ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಏಪ್ರಿಲ್ 24 ರಿಂದ 3 ದಿನ ಕ್ರೀಡಾ ಹಬ್ಬ
    • ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ
    • ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದು: ಪ್ರಧಾನಿ ಮೋದಿ
    ರಾಷ್ಟ್ರೀಯ ಸುದ್ದಿ March 29, 2024

    ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದು: ಪ್ರಧಾನಿ ಮೋದಿ

    By adminMarch 29, 2024No Comments2 Mins Read
    modhi & bilgates

    ನವದೆಹಲಿ: ಕೃಷಿ, ಶಿಕ್ಷಣ ಮತ್ತು ಆರೋಗ್ಯ ಈ ಮೂರು ಕ್ಷೇತ್ರಗಳಲ್ಲಿ ತಂತ್ರಜ್ಞಾನವು ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕ್ಷೇತ್ರಗಳಲ್ಲಿ ತಮ್ಮ ಸರ್ಕಾರದ ಪ್ರಯತ್ನಗಳನ್ನು ಎತ್ತಿ ತೋರಿಸಿದ್ದಾರೆ.

    ಲೋಕೋಪಕಾರಿ ಮತ್ತು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರೊಂದಿಗೆ ದೆಹಲಿಯ ತಮ್ಮ ನಿವಾಸದಲ್ಲಿ ನಡೆಸಿದ ಸಂವಾದದಲ್ಲಿ ಅವರು, “ಜಗತ್ತಿನಲ್ಲಿ ಡಿಜಿಟಲ್ ವಿಭಜನೆಯ ಬಗ್ಗೆ ಕೇಳುತ್ತಿದ್ದೇನೆ. ಭಾರತದಲ್ಲಿ ಇದು ಸಂಭವಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.


    Provided by
    Provided by

    ಗರ್ಭಕಂಠದ ಕ್ಯಾನ್ಸರ್‌ ಗೆ ಕನಿಷ್ಠ ವೆಚ್ಚದಲ್ಲಿ ಲಸಿಕೆಗಳ ಅಭಿವೃದ್ಧಿ: ಗರ್ಭಕಂಠದ ಕ್ಯಾನ್ಸರ್‌ ಗೆ ಕನಿಷ್ಠ ವೆಚ್ಚದಲ್ಲಿ ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಸ್ಥಳೀಯ ಸಂಶೋಧನೆಗಾಗಿ ವಿಜ್ಞಾನಿಗಳಿಗೆ ಹಣವನ್ನು ವಿನಿಯೋಗಿಸಲು ಮುಂದೆ ಬರಲಿರುವ ತಮ್ಮ ಹೊಸ ಸರ್ಕಾರವು ವಿಶೇಷವಾಗಿ ಎಲ್ಲಾ ವರ್ಗದ ಹುಡುಗಿಯರಿಗೆ ಲಸಿಕೆಯನ್ನು ನೀಡಲು ಶ್ರಮವಹಿಸುತ್ತದೆ ಎಂದಿದ್ದಾರೆ.

    ಸಾರ್ವತ್ರಿಕ ಚುನಾವಣೆಯ ನಂತರ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳುವ ವಿಶ್ವಾಸವನ್ನು ಮೋದಿ ವ್ಯಕ್ತಪಡಿಸಿದ್ದಾರೆ. “ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಅಗತ್ಯವಿದೆ, ಭಾರತವು ಈ ನಿಟ್ಟಿನಲ್ಲಿ ಮುನ್ನಡೆಯಲಿದೆ” ಎಂದು ಹೇಳಿದರು.

    ಹವಾಮಾನ ಬದಲಾವಣೆಯ ವಿಷಯದ ಕುರಿತು ಮಾತನಾಡಿದ ಮೋದಿ, “ಅಭಿವೃದ್ಧಿಯನ್ನು ಹವಾಮಾನ ವಿರೋಧಿ ಎಂದು ವ್ಯಾಖ್ಯಾನಿಸಲು ಜಗತ್ತು ವಿದ್ಯುತ್ ಅಥವಾ ಉಕ್ಕಿನಂತಹ ನಿಯತಾಂಕಗಳನ್ನು ಬದಲಾಯಿಸಬೇಕಾಗಿದೆ. ಹಸಿರು ಜಿಡಿಪಿ ಮತ್ತು ಹಸಿರು ಉದ್ಯೋಗದಂತಹ ಪರಿಭಾಷೆಯನ್ನು ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.

    ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ವಿಷಯದ ಕುರಿತು ಚರ್ಚಿಸಿದ ಅವರು, “ಇದನ್ನು ಮಾಂತ್ರಿಕ ಸಾಧನವಾಗಿ ಅಥವಾ ಕೆಲವು ಕೆಲಸಗಳನ್ನು ಮಾಡಲು ಜನರ ಬದಲಿಗೆ ಸೋಮಾರಿ ಸಾಧನವಾಗಿ ನೋಡಬಾರದು” ಎಂದಿದ್ದಾರೆ.

    ಜಿ 20 ಶೃಂಗಸಭೆಯಲ್ಲಿ ಭಾಷಣಗಳನ್ನು ಭಾಷಾಂತರಿಸಲು ಮತ್ತು ಹಲವಾರು ಕಾರ್ಯಕ್ರಮಗಳಲ್ಲಿ ವಿವಿಧ ಭಾಷೆಗಳಲ್ಲಿ ಅನುವಾದ ಮಾಡಲು ಹೇಗೆ AI ಯನ್ನು ಬಳಸಿಕೊಳ್ಳಲಾಯಿತು. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹೇಗೆ ನೆರವಿಗೆ ಬಂದು ಎಂಬುದನ್ನು ಸಹ ಪ್ರಧಾನಿ ವಿವರಿಸಿದರು. ನಿರಂತರವಾಗಿ ತನ್ನನ್ನು ತಾನು ಸುಧಾರಿಸಿಕೊಳ್ಳಲು ಚಾಟ್‌ಜಿಪಿಟಿಯಂತಹ ತಂತ್ರಜ್ಞಾನವನ್ನು ಬಳಸಬೇಕು ಎಂದು ಅವರು ಹೇಳಿದರು.

    ತಂತ್ರಜ್ಞಾನದ ದಾಸನಲ್ಲ: AI ಬಳಕೆಯನ್ನು ಉಲ್ಲೇಖಿಸಿದ ಮೋದಿಯವರು, ತಮ್ಮ (NaMo) ಅಪ್ಲಿಕೇಶನ್‌ ನ ಮೂಲಕ ಸೆಲ್ಫಿ ತೆಗೆದುಕೊಳ್ಳಲು ಬಿಲ್ ಗೇಟ್ಸ್ ಅವರನ್ನು ಕೇಳಿಕೊಂಡರು. ಫೇಸ್-ರೆಕಗ್ನಿಷನ್ ತಂತ್ರಜ್ಞಾನದ ಮೂಲಕ ಹೇಗೆ ಕಂಡುಹಿಡಿಯಬಹುದು ಎಂಬುದನ್ನು ತೋರಿಸಿದರು.

    ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣದಲ್ಲಿ ನನಗೆ ನಂಬಿಕೆಯಿದೆ, ಅದು ಎಲ್ಲರಿಗೂ ಸಮಾನ ಅವಕಾಶವನ್ನು ನೀಡುತ್ತದೆ. ತಂತ್ರಜ್ಞಾನವನ್ನು ಹಳ್ಳಿಗಳಿಗೆ ಕೊಂಡೊಯ್ಯಬೇಕಾಗಿದೆ ಎಂದು ಸಹ ಹೇಳಿದರು. ತಾವು ತಂತ್ರಜ್ಞಾನಕ್ಕೆ ಆಕರ್ಷಿತನಾದರೂ ಕೂಡ ಅದರ ದಾಸನಲ್ಲ. ನಾನು ಪರಿಣಿತನಲ್ಲ ಆದರೆ ತಂತ್ರಜ್ಞಾನದ ಬಗ್ಗೆ ಮಗುವಿನಂತಹ ಕುತೂಹಲವನ್ನು ಹೊಂದಿದ್ದೇನೆ ಎಂದು ಅವರು ಹೇಳಿದರು, ಭಾರತದಲ್ಲಿ ಡಿಜಿಟಲ್ ಕ್ರಾಂತಿಯ ಬಗ್ಗೆ ಮಾತನಾಡುತ್ತಾ, ಪ್ರಧಾನ ಮಂತ್ರಿ ಅವರು ಅದರ ಮೇಲೆ ಯಾರೂ ಏಕಸ್ವಾಮ್ಯವನ್ನು ಹೊಂದಬಾರದು. ಅದನ್ನು ಸಾಮಾನ್ಯ ಜನರು ನಡೆಸಬೇಕು ಎಂದು ನಂಬುವವನು ನಾನು ಎಂದರು.

    ಈ ಸಂದರ್ಭದಲ್ಲಿ, ಮಹಿಳೆಯರು ಕೃಷಿಯಲ್ಲಿ ಡ್ರೋನ್ ‌ಗಳನ್ನು ಬಳಸುವ “ಡ್ರೋನ್ ದೀದಿ” ಯೋಜನೆ ಮತ್ತು ರೋಗಿಗಳಿಗೆ ದೂರದ ಚಿಕಿತ್ಸೆ ನೀಡುವ ಉಪಕ್ರಮವನ್ನು ಅವರು ಎತ್ತಿ ತೋರಿಸಿದರು. ಶಿಕ್ಷಣದಲ್ಲಿ ಶಿಕ್ಷಕರ ನ್ಯೂನತೆಗಳನ್ನು ನೀಗಿಸಲು ತಂತ್ರಜ್ಞಾನವನ್ನು ಬಳಸಲಾಗುತ್ತಿದೆ ಎಂದು ಮೋದಿ ಹೇಳಿದರು.

    “ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ಡಿಜಿಟಲ್ ತಂತ್ರಜ್ಞಾನವು ದೊಡ್ಡ ಪಾತ್ರವನ್ನು ವಹಿಸುತ್ತದೆ. ಭಾರತವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸವಿದೆ” ಎಂದು ಹೇಳಿದರು.

    ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ಕೋವಿಡ್ ವ್ಯಾಕ್ಸಿನೇಷನ್ ಸ್ಲಾಟ್‌ ಗಳು ಮತ್ತು ಪ್ರಮಾಣಪತ್ರಗಳನ್ನು ಒದಗಿಸಲು ಭಾರತವು ಕೋವಿನ್ ಪ್ಲಾಟ್‌ಫಾರ್ಮ್ ನ್ನು ಹೇಗೆ ಬಳಸಿತು ಎಂಬುದನ್ನು ಮೋದಿ ಈ ಸಂದರ್ಭದಲ್ಲಿ ಉಲ್ಲೇಖಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?

    April 23, 2026

    ತುಮಕೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೇವಲ ಒಂದು ವಾರದ ಅವಧಿಯಲ್ಲಿ ಬರೋಬ್ಬರಿ 32 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವುದು ಸ್ಥಳೀಯರಲ್ಲಿ ಹಾಗೂ…

    ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    April 23, 2026

    ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

    April 23, 2026

    ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ

    April 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.