nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಮುಸ್ತಾಪೂರ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಪತ್ರ ಸಲ್ಲಿಕೆ

    September 9, 2026

    ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ

    September 9, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಮುಸ್ತಾಪೂರ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಪತ್ರ ಸಲ್ಲಿಕೆ
    • ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ
    • ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದು: ಪ್ರಧಾನಿ ಮೋದಿ
    ರಾಷ್ಟ್ರೀಯ ಸುದ್ದಿ March 29, 2024

    ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದು: ಪ್ರಧಾನಿ ಮೋದಿ

    By adminMarch 29, 2024No Comments2 Mins Read
    modhi & bilgates

    ನವದೆಹಲಿ: ಕೃಷಿ, ಶಿಕ್ಷಣ ಮತ್ತು ಆರೋಗ್ಯ ಈ ಮೂರು ಕ್ಷೇತ್ರಗಳಲ್ಲಿ ತಂತ್ರಜ್ಞಾನವು ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕ್ಷೇತ್ರಗಳಲ್ಲಿ ತಮ್ಮ ಸರ್ಕಾರದ ಪ್ರಯತ್ನಗಳನ್ನು ಎತ್ತಿ ತೋರಿಸಿದ್ದಾರೆ.

    ಲೋಕೋಪಕಾರಿ ಮತ್ತು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರೊಂದಿಗೆ ದೆಹಲಿಯ ತಮ್ಮ ನಿವಾಸದಲ್ಲಿ ನಡೆಸಿದ ಸಂವಾದದಲ್ಲಿ ಅವರು, “ಜಗತ್ತಿನಲ್ಲಿ ಡಿಜಿಟಲ್ ವಿಭಜನೆಯ ಬಗ್ಗೆ ಕೇಳುತ್ತಿದ್ದೇನೆ. ಭಾರತದಲ್ಲಿ ಇದು ಸಂಭವಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

    ಗರ್ಭಕಂಠದ ಕ್ಯಾನ್ಸರ್‌ ಗೆ ಕನಿಷ್ಠ ವೆಚ್ಚದಲ್ಲಿ ಲಸಿಕೆಗಳ ಅಭಿವೃದ್ಧಿ: ಗರ್ಭಕಂಠದ ಕ್ಯಾನ್ಸರ್‌ ಗೆ ಕನಿಷ್ಠ ವೆಚ್ಚದಲ್ಲಿ ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಸ್ಥಳೀಯ ಸಂಶೋಧನೆಗಾಗಿ ವಿಜ್ಞಾನಿಗಳಿಗೆ ಹಣವನ್ನು ವಿನಿಯೋಗಿಸಲು ಮುಂದೆ ಬರಲಿರುವ ತಮ್ಮ ಹೊಸ ಸರ್ಕಾರವು ವಿಶೇಷವಾಗಿ ಎಲ್ಲಾ ವರ್ಗದ ಹುಡುಗಿಯರಿಗೆ ಲಸಿಕೆಯನ್ನು ನೀಡಲು ಶ್ರಮವಹಿಸುತ್ತದೆ ಎಂದಿದ್ದಾರೆ.

    ಸಾರ್ವತ್ರಿಕ ಚುನಾವಣೆಯ ನಂತರ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳುವ ವಿಶ್ವಾಸವನ್ನು ಮೋದಿ ವ್ಯಕ್ತಪಡಿಸಿದ್ದಾರೆ. “ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಅಗತ್ಯವಿದೆ, ಭಾರತವು ಈ ನಿಟ್ಟಿನಲ್ಲಿ ಮುನ್ನಡೆಯಲಿದೆ” ಎಂದು ಹೇಳಿದರು.

    ಹವಾಮಾನ ಬದಲಾವಣೆಯ ವಿಷಯದ ಕುರಿತು ಮಾತನಾಡಿದ ಮೋದಿ, “ಅಭಿವೃದ್ಧಿಯನ್ನು ಹವಾಮಾನ ವಿರೋಧಿ ಎಂದು ವ್ಯಾಖ್ಯಾನಿಸಲು ಜಗತ್ತು ವಿದ್ಯುತ್ ಅಥವಾ ಉಕ್ಕಿನಂತಹ ನಿಯತಾಂಕಗಳನ್ನು ಬದಲಾಯಿಸಬೇಕಾಗಿದೆ. ಹಸಿರು ಜಿಡಿಪಿ ಮತ್ತು ಹಸಿರು ಉದ್ಯೋಗದಂತಹ ಪರಿಭಾಷೆಯನ್ನು ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.

    ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ವಿಷಯದ ಕುರಿತು ಚರ್ಚಿಸಿದ ಅವರು, “ಇದನ್ನು ಮಾಂತ್ರಿಕ ಸಾಧನವಾಗಿ ಅಥವಾ ಕೆಲವು ಕೆಲಸಗಳನ್ನು ಮಾಡಲು ಜನರ ಬದಲಿಗೆ ಸೋಮಾರಿ ಸಾಧನವಾಗಿ ನೋಡಬಾರದು” ಎಂದಿದ್ದಾರೆ.

    ಜಿ 20 ಶೃಂಗಸಭೆಯಲ್ಲಿ ಭಾಷಣಗಳನ್ನು ಭಾಷಾಂತರಿಸಲು ಮತ್ತು ಹಲವಾರು ಕಾರ್ಯಕ್ರಮಗಳಲ್ಲಿ ವಿವಿಧ ಭಾಷೆಗಳಲ್ಲಿ ಅನುವಾದ ಮಾಡಲು ಹೇಗೆ AI ಯನ್ನು ಬಳಸಿಕೊಳ್ಳಲಾಯಿತು. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹೇಗೆ ನೆರವಿಗೆ ಬಂದು ಎಂಬುದನ್ನು ಸಹ ಪ್ರಧಾನಿ ವಿವರಿಸಿದರು. ನಿರಂತರವಾಗಿ ತನ್ನನ್ನು ತಾನು ಸುಧಾರಿಸಿಕೊಳ್ಳಲು ಚಾಟ್‌ಜಿಪಿಟಿಯಂತಹ ತಂತ್ರಜ್ಞಾನವನ್ನು ಬಳಸಬೇಕು ಎಂದು ಅವರು ಹೇಳಿದರು.

    ತಂತ್ರಜ್ಞಾನದ ದಾಸನಲ್ಲ: AI ಬಳಕೆಯನ್ನು ಉಲ್ಲೇಖಿಸಿದ ಮೋದಿಯವರು, ತಮ್ಮ (NaMo) ಅಪ್ಲಿಕೇಶನ್‌ ನ ಮೂಲಕ ಸೆಲ್ಫಿ ತೆಗೆದುಕೊಳ್ಳಲು ಬಿಲ್ ಗೇಟ್ಸ್ ಅವರನ್ನು ಕೇಳಿಕೊಂಡರು. ಫೇಸ್-ರೆಕಗ್ನಿಷನ್ ತಂತ್ರಜ್ಞಾನದ ಮೂಲಕ ಹೇಗೆ ಕಂಡುಹಿಡಿಯಬಹುದು ಎಂಬುದನ್ನು ತೋರಿಸಿದರು.

    ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣದಲ್ಲಿ ನನಗೆ ನಂಬಿಕೆಯಿದೆ, ಅದು ಎಲ್ಲರಿಗೂ ಸಮಾನ ಅವಕಾಶವನ್ನು ನೀಡುತ್ತದೆ. ತಂತ್ರಜ್ಞಾನವನ್ನು ಹಳ್ಳಿಗಳಿಗೆ ಕೊಂಡೊಯ್ಯಬೇಕಾಗಿದೆ ಎಂದು ಸಹ ಹೇಳಿದರು. ತಾವು ತಂತ್ರಜ್ಞಾನಕ್ಕೆ ಆಕರ್ಷಿತನಾದರೂ ಕೂಡ ಅದರ ದಾಸನಲ್ಲ. ನಾನು ಪರಿಣಿತನಲ್ಲ ಆದರೆ ತಂತ್ರಜ್ಞಾನದ ಬಗ್ಗೆ ಮಗುವಿನಂತಹ ಕುತೂಹಲವನ್ನು ಹೊಂದಿದ್ದೇನೆ ಎಂದು ಅವರು ಹೇಳಿದರು, ಭಾರತದಲ್ಲಿ ಡಿಜಿಟಲ್ ಕ್ರಾಂತಿಯ ಬಗ್ಗೆ ಮಾತನಾಡುತ್ತಾ, ಪ್ರಧಾನ ಮಂತ್ರಿ ಅವರು ಅದರ ಮೇಲೆ ಯಾರೂ ಏಕಸ್ವಾಮ್ಯವನ್ನು ಹೊಂದಬಾರದು. ಅದನ್ನು ಸಾಮಾನ್ಯ ಜನರು ನಡೆಸಬೇಕು ಎಂದು ನಂಬುವವನು ನಾನು ಎಂದರು.

    ಈ ಸಂದರ್ಭದಲ್ಲಿ, ಮಹಿಳೆಯರು ಕೃಷಿಯಲ್ಲಿ ಡ್ರೋನ್ ‌ಗಳನ್ನು ಬಳಸುವ “ಡ್ರೋನ್ ದೀದಿ” ಯೋಜನೆ ಮತ್ತು ರೋಗಿಗಳಿಗೆ ದೂರದ ಚಿಕಿತ್ಸೆ ನೀಡುವ ಉಪಕ್ರಮವನ್ನು ಅವರು ಎತ್ತಿ ತೋರಿಸಿದರು. ಶಿಕ್ಷಣದಲ್ಲಿ ಶಿಕ್ಷಕರ ನ್ಯೂನತೆಗಳನ್ನು ನೀಗಿಸಲು ತಂತ್ರಜ್ಞಾನವನ್ನು ಬಳಸಲಾಗುತ್ತಿದೆ ಎಂದು ಮೋದಿ ಹೇಳಿದರು.

    “ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ಡಿಜಿಟಲ್ ತಂತ್ರಜ್ಞಾನವು ದೊಡ್ಡ ಪಾತ್ರವನ್ನು ವಹಿಸುತ್ತದೆ. ಭಾರತವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸವಿದೆ” ಎಂದು ಹೇಳಿದರು.

    ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ಕೋವಿಡ್ ವ್ಯಾಕ್ಸಿನೇಷನ್ ಸ್ಲಾಟ್‌ ಗಳು ಮತ್ತು ಪ್ರಮಾಣಪತ್ರಗಳನ್ನು ಒದಗಿಸಲು ಭಾರತವು ಕೋವಿನ್ ಪ್ಲಾಟ್‌ಫಾರ್ಮ್ ನ್ನು ಹೇಗೆ ಬಳಸಿತು ಎಂಬುದನ್ನು ಮೋದಿ ಈ ಸಂದರ್ಭದಲ್ಲಿ ಉಲ್ಲೇಖಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಮುಸ್ತಾಪೂರ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಪತ್ರ ಸಲ್ಲಿಕೆ

    September 9, 2026

    ಔರಾದ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮುಸ್ತಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಣ್ಣ-ಬಣ್ಣ ಹಚ್ಚಿ ಹಲವು ವರ್ಷಗಳು…

    ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ

    September 9, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.