ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ತೇಜಸ್ವಿನಿ ಬಿ. ರವರ ವಿರುದ್ಧ ಜ.22 ರಂದು ಅಟ್ರಾಸಿಟಿ ಕಾಯ್ದೆ ಅಡಿಯಲ್ಲಿ ಎಫ್.ಐ.ಆರ್ ದಾಖಲಾಗಿ ಒಂದು ವಾರ ಕಳೆದರೂ ಅವರನ್ನು ಬಂಧಿಸದೇ, ಅಮಾನತ್ತು ಮಾಡದೆ ಸೇವೆಯಲ್ಲಿ ಮುಂದುವರೆಸಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಅಟ್ರಾಸಿಟಿ ಆರೋಪ ಹೊತ್ತಿರುವ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ರವರು ಇದೇ ಜಾಗದಲ್ಲಿ ಸೇವೆ ಮುಂದುವರೆಸಿದ್ದಾರೆ. ತಹಶೀಲ್ದಾರ್ ತಮ್ಮ ವಿರುದ್ಧದ ಆರೋಪಗಳ ಬಗ್ಗೆ ಸಾಕ್ಷಿ ನಾಶಕ್ಕೆ ಮುಂದಾಗುವ ಎಲ್ಲಾ ಸಾಧ್ಯತೆಗಳು ಇರುತ್ತದೆ. ಆದ್ದರಿಂದ ತುರ್ತಾಗಿ ಆರೋಪಿತೆಯನ್ನು ಬಂಧಿಸಿ ಅಮಾನತುಗೊಳಿಸುವಂತೆ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.
ಈ ವೇಳೆ ಮಾತನಾಡಿದ ದೂರುದಾರ ಪರಮೇಶ್ ಜಿಲ್ಲಾಧಿಕಾರಿಗಳು ಕೂಡಲೇ ತಾಲ್ಲೂಕು ತಹಶೀಲ್ದಾರ್ ಅವರ ಮೇಲೆ ಸೂಕ್ತ ಕ್ರಮ ವಹಿಸದೆ ಹೋದರೆ ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೋರಾಟ ನಡೆಸಲಾಗುವುದು ಎಂದರು.
ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ವೇಳೆ ಶಾಂತರಾಜು, ಚಂದ್ರಪ್ಪ, ಗಂಗಮ್ಮ, ರಾಜಣ್ಣ, ಮಾರಕ್ಕ, ಶಂಭುಲೀಂಗ, ಗೌರಮ್ಮ ಸೇರಿದಂತೆ ಇತರರು ಹಾಜರಿದ್ದರು.
ವರದಿ: ಉದಯ್ ಕುಮಾರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB