ದೇವನಹಳ್ಳಿ: ವಾರಾಣಸಿಗೆ ಧಾರ್ಮಿಕ ಪ್ರವಾಸ ಕೈಗೊಂಡಿದ್ದ ತಿಪಟೂರು ಮೂಲದ ಮೂವರು ಮಹಿಳೆಯರು ಬೆಂಗಳೂರಿನ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ತಿಪಟೂರಿನ ವಿದ್ಯಾನಗರದ ನಿವಾಸಿಗಳಾದ ಗಂಗಮ್ಮ (38), ಜಯಮ್ಮ (65) ಹಾಗೂ ಯಶೋದಮ್ಮ (60) ಮೃತಪಟ್ಟ ದುರ್ದೈವಿಗಳು. ಒಟ್ಟು 13 ಜನರ ತಂಡವೊಂದು ಟೆಂಪೊ ಟ್ರಾವೆಲರ್ (TT) ವಾಹನದಲ್ಲಿ ತಿಪಟೂರಿನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಅಲ್ಲಿಂದ ಅವರು ವಾರಾಣಸಿಗೆ ವಿಮಾನದ ಮೂಲಕ ಪ್ರಯಾಣಿಸಬೇಕಿತ್ತು.
ಆದರೆ, ವಿಮಾನ ನಿಲ್ದಾಣದ ಸಮೀಪ ತಲುಪುತ್ತಿದ್ದಂತೆ ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಇವರು ಪ್ರಯಾಣಿಸುತ್ತಿದ್ದ ಟೆಂಪೊ ಟ್ರಾವೆಲರ್ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಪಘಾತದಲ್ಲಿ ಟೆಂಪೊದಲ್ಲಿದ್ದ ಇತರ ಪ್ರಯಾಣಿಕರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


