ಬೆಂಗಳೂರು: ಜಮ್ಮು–ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 28ಕ್ಕೂ ಹೆಚ್ಚು ಜನ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ.
ಬೆಂಗಳೂರಿನ ಟೆಕ್ಕಿ ಭರತ್ ಭೂಷಣ್ ಕೂಡಾ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ್ದು, ಇದೀಗ ದಾಳಿಯ ಸಂದರ್ಭದಲ್ಲಿ ಉಗ್ರರು ಹೇಳಿದ ಮಾತು ಏನೆಂದು ಮೃತ ಭರತ್ ಅತ್ತೆ ಹೇಳಿದ್ದಾರೆ.
ಬೆಂಗಳೂರಿನ ಟೆಕ್ಕಿ ಭರತ್ ಭೂಷಣ್ ಅವರನ್ನು ಅವರ ಪತ್ನಿ ಮತ್ತು ಮೂರು ವರ್ಷದ ಮಗನ ಮುಂದೆಯೇ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಇನ್ನು ದಾಳಿಯ ನಂತರ ಮಗಳೊಂದಿಗೆ ಮಾತನಾಡಿದ ಭರತ್ ಭೂಷಣ್ ಅವರ ಅತ್ತೆ, ‘ಭಯೋತ್ಪಾದಕರು ಆಧಾರ್ ತೋರಿಸಿ, ಮುಸ್ಲಿಂ ಆದ್ರೆ ಬಿಡ್ತೀನಿ, ನೀವು ಹಿಂದೂಗಳೇ ಎಂದು ಕೇಳಿ, ನಂತರ ನೆಲಕ್ಕೆ ಬೀಳುವವರೆಗೂ ಗುಂಡಿಕ್ಕಿ ಕೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW