ಗುಬ್ಬಿ : ತಾಲೂಕಿನಲ್ಲಿ ವರುಣನ ಆರ್ಭಟಕ್ಕೆ ಚೇಳೂರು ಹೋಬಳಿಯ ಹರಿವೆಸಂದ್ರ ಗ್ರಾಮದಲ್ಲಿ ಎರಡು ಮನೆಗಳು ತಡ ರಾತ್ರಿ ಧರೆಗೆ ಉರುಳಿದ್ದು, ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ತಡರಾತ್ರಿ 11 ಗಂಟೆಯ ಸಮಯದಲ್ಲಿ ಭಾರೀ ಮಳೆಗೆ ಮನೆ ಕುಸಿದಿದ್ದು, ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರು ಸಹ ಯಾರು ಸ್ವೀಕರಿಸುತ್ತಿಲ್ಲ ಎಂದು ಸಂತ್ರಸ್ತ ಮಹಿಳೆ ಮಹದೇವಮ್ಮ ದೂರಿದ್ದಾರೆ.
ಕೂಡಲೇ ಸರಕಾರ ಈ ಮನೆಗಳಿಗೆ ಪರಿಹಾರ ನೀಡಿ ತಾತ್ಕಾಲಿಕವಾಗಿ ಅವರಿಗೆ ನೆರವು ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ವರದಿ: ಡಿ.ಮಂಜುನಾಥ್ ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz