nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025
    Facebook Twitter Instagram
    ಟ್ರೆಂಡಿಂಗ್
    • ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
    • ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
    • ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ
    • ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
    • ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
    • ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
    • ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
    • ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ವಿರುದ್ಧ ದೂರು ನೀಡಿದ ಅಲೆಮಾರಿ ಕುಟುಂಬದ ಸದಸ್ಯರು
    ಚಿಕ್ಕನಾಯಕನಹಳ್ಳಿ December 23, 2021

    ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ವಿರುದ್ಧ ದೂರು ನೀಡಿದ ಅಲೆಮಾರಿ ಕುಟುಂಬದ ಸದಸ್ಯರು

    By adminDecember 23, 2021No Comments2 Mins Read
    chikkanayakana halli

    namma tumakuru

    ತುಮಕೂರು: ತಮ್ಮ ವಿರುದ್ಧ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ರವರು ಏಕಾಏಕಿ ನಿಂದಿಸಿ ಅವಮಾನಗೊಳಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ನಮಗೆ ರಕ್ಷಣೆ ನೀಡಬೇಕೆಂದು ಅಲೆಮಾರಿ ಜನಾಂಗದ ಕುಟುಂಬಸ್ಥರು ಎಸ್.ಪಿ.ರವರಿಗೆ ದೂರು ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ.


    Provided by
    Provided by

    ಕಳೆದ ತಿಂಗಳು ಸುರಿದ ಕುಂಭದ್ರೋಣ ಮಳೆಯಿಂದಾಗಿ ಚಿ.ನಾ.ಹಳ್ಳಿ ತಾಲ್ಲೋಕಿನ ಕಡೆಗೆಹಳ್ಳಿ ಗ್ರಾಮದ ಗುಂಡು ತೋಪಿನಲ್ಲಿ ಅಲೆಮಾರಿ ಜನಾಂಗದವರು ವಾಸಿಸುತ್ತಿದ್ದ ಗುಡಿಸಲುಗಳು ಜಲಾವೃತವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಸೂರು ಕಲ್ಪಿಸಲಾಗಿತ್ತು. ನಂತರ ಕೆಲ ದಿನಗಳ ನಂತರ ಪುರಸಭೆ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರ್ ಬಂದು ಕೂಡಲೇ ತಮ್ಮ ಗುಡಿಸಲುಗಳಿಗೆ ತೆರಳುವಂತೆ ಒತ್ತಡ ಹೇರಿದ್ದಾರೆ.

    ಇದಕ್ಕೂ‌ ಮುನ್ನ ಅಲೆಮಾರಿ ಜನಾಂಗದ ಪರಮೇಶ್ ಎಂಬಾತ ತಹಶೀಲ್ದಾರ್ ರವರಿಗೆ ಮಳೆಯಿಂದಾಗಿ ಗುಡಿಸಲು ನಾಶವಾಗಿದೆ, ಈಗ ಗುಡಿಸಲಿಗೆ ಹೋಗಲು ಸಾಧ್ಯವಾಗುವುದಿಲ್ಲ, ಕನಿಷ್ಠ ಅದಕ್ಕೆ ಪರಿಹಾರ ನೀಡಿದರೆ ಗುಡಿಸಲು ಮರು ನಿರ್ಮಾಣ ಮಾಡಿಕೊಂಡು  ಬದುಕುತ್ತೇವೆಂದು ಮನವಿ ಸಲ್ಲಿಸಿರುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರದ ಚೆಕ್ ಪಡೆದುಕೊಂಡು ಹೋಗು ಎಂದು ತಿಳಿಸಿರುತ್ತಾರೆ.

    ಪರಿಹಾರ ಪಡೆಯಲು ಮರುದಿನ ಕಚೇರಿಗೆ ತೆರಳಿದ ಸಂದರ್ಭದಲ್ಲಿ ಏಕಾಏಕಿ ಪರಮೇಶ್ ಗೆ ಸಾರ್ವಜನಿಕರ ಮುಂದೆ ನಿಂದಿಸಿ 107, 109, ರೌಡಿಶೀಟರ್, ಗಡಿಪಾರು ಈ ಪದಗಳು ಗೊತ್ತಿಲ್ಲ ನಿನಗೆ, ಇವಲ್ಲವನ್ನೂ ನಿನ್ನ ಮೇಲೆ ಹಾಕಿಸುತ್ತೇನೆಂದು ಮನಸೋ ಇಚ್ಛೆ ನಿಂದಿಸಿದರು. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿ.ನಾ.ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದರೆ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ  ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲು ಬಂದಿರುವುದಾಗಿ ತಿಳಿಸಿದರು.

    ಇನ್ನು ನೊಂದವರ ಪರವಾಗಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ನಿಂತಿದ್ದು ವೇದಿಕೆಯ ಜಿಲ್ಲಾಧ್ಯಕ್ಷ ನಾಗಭೂಷಣ್ ಹಂದ್ರಾಳ್ ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ನೌಕರ ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಸಹಿಸುವುದಿಲ್ಲ. ಕೂಡಲೇ ತಹಶೀಲ್ದಾರ್ ರವರ ಮೇಲೆ ಎಫ್.ಐ.ಆರ್.ದಾಖಲಿಸಬೇಕು.. ಇಲ್ಲವಾದಲ್ಲಿ ತಾವು ಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಸಿದರು

    ಬಡವರ ನೆರವಿಗೆ ಧಾವಿಸಬೇಕಾದ ಅಧಿಕಾರಿಗಳೇ ಹೀಗೆ ಸೌಜನ್ಯ ಇಲ್ಲದ ರೀತಿಯಲ್ಲಿ ವರ್ತಿಸಿದರೆ ದಲಿತರು ನೊಂದವರು ಯಾರಬಳಿ ನ್ಯಾಯ ಕೇಳಬೇಕು ಎನ್ನುವುದು ಯಕ್ಷ ಪ್ರಶ್ನೆಯಾಗಿ ಉಳಿಯುತ್ತದೆ

     ವರದಿ: ರಾಜೇಶ್ ರಂಗನಾಥ್ ತುಮಕೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!

    October 31, 2025

    ಹುಳಿಯಾರು: ಆಹೋರಾತ್ರಿ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ

    October 31, 2025

    ಹುಳಿಯಾರು | ರೈತರ ಶಾಪ ನಿಮಗೆ ತಟ್ಟದೇ ಇರಲಾರದು: ಅಧಿಕಾರಿಗಳಿಗೆ ಸಬ್ಬೇನಹಳ್ಳಿ ಶ್ರೀನಿವಾಸ್ ಹಿಡಿಶಾಪ

    October 23, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಬೆಂಗಳೂರು: ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು…

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025

    ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ

    November 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.