nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ವಿರುದ್ಧ ದೂರು ನೀಡಿದ ಅಲೆಮಾರಿ ಕುಟುಂಬದ ಸದಸ್ಯರು
    ಚಿಕ್ಕನಾಯಕನಹಳ್ಳಿ December 23, 2021

    ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ವಿರುದ್ಧ ದೂರು ನೀಡಿದ ಅಲೆಮಾರಿ ಕುಟುಂಬದ ಸದಸ್ಯರು

    By adminDecember 23, 2021No Comments2 Mins Read
    chikkanayakana halli

    namma tumakuru

    ತುಮಕೂರು: ತಮ್ಮ ವಿರುದ್ಧ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ರವರು ಏಕಾಏಕಿ ನಿಂದಿಸಿ ಅವಮಾನಗೊಳಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ನಮಗೆ ರಕ್ಷಣೆ ನೀಡಬೇಕೆಂದು ಅಲೆಮಾರಿ ಜನಾಂಗದ ಕುಟುಂಬಸ್ಥರು ಎಸ್.ಪಿ.ರವರಿಗೆ ದೂರು ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ.

    ಕಳೆದ ತಿಂಗಳು ಸುರಿದ ಕುಂಭದ್ರೋಣ ಮಳೆಯಿಂದಾಗಿ ಚಿ.ನಾ.ಹಳ್ಳಿ ತಾಲ್ಲೋಕಿನ ಕಡೆಗೆಹಳ್ಳಿ ಗ್ರಾಮದ ಗುಂಡು ತೋಪಿನಲ್ಲಿ ಅಲೆಮಾರಿ ಜನಾಂಗದವರು ವಾಸಿಸುತ್ತಿದ್ದ ಗುಡಿಸಲುಗಳು ಜಲಾವೃತವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಸೂರು ಕಲ್ಪಿಸಲಾಗಿತ್ತು. ನಂತರ ಕೆಲ ದಿನಗಳ ನಂತರ ಪುರಸಭೆ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರ್ ಬಂದು ಕೂಡಲೇ ತಮ್ಮ ಗುಡಿಸಲುಗಳಿಗೆ ತೆರಳುವಂತೆ ಒತ್ತಡ ಹೇರಿದ್ದಾರೆ.

    ಇದಕ್ಕೂ‌ ಮುನ್ನ ಅಲೆಮಾರಿ ಜನಾಂಗದ ಪರಮೇಶ್ ಎಂಬಾತ ತಹಶೀಲ್ದಾರ್ ರವರಿಗೆ ಮಳೆಯಿಂದಾಗಿ ಗುಡಿಸಲು ನಾಶವಾಗಿದೆ, ಈಗ ಗುಡಿಸಲಿಗೆ ಹೋಗಲು ಸಾಧ್ಯವಾಗುವುದಿಲ್ಲ, ಕನಿಷ್ಠ ಅದಕ್ಕೆ ಪರಿಹಾರ ನೀಡಿದರೆ ಗುಡಿಸಲು ಮರು ನಿರ್ಮಾಣ ಮಾಡಿಕೊಂಡು  ಬದುಕುತ್ತೇವೆಂದು ಮನವಿ ಸಲ್ಲಿಸಿರುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರದ ಚೆಕ್ ಪಡೆದುಕೊಂಡು ಹೋಗು ಎಂದು ತಿಳಿಸಿರುತ್ತಾರೆ.

    ಪರಿಹಾರ ಪಡೆಯಲು ಮರುದಿನ ಕಚೇರಿಗೆ ತೆರಳಿದ ಸಂದರ್ಭದಲ್ಲಿ ಏಕಾಏಕಿ ಪರಮೇಶ್ ಗೆ ಸಾರ್ವಜನಿಕರ ಮುಂದೆ ನಿಂದಿಸಿ 107, 109, ರೌಡಿಶೀಟರ್, ಗಡಿಪಾರು ಈ ಪದಗಳು ಗೊತ್ತಿಲ್ಲ ನಿನಗೆ, ಇವಲ್ಲವನ್ನೂ ನಿನ್ನ ಮೇಲೆ ಹಾಕಿಸುತ್ತೇನೆಂದು ಮನಸೋ ಇಚ್ಛೆ ನಿಂದಿಸಿದರು. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿ.ನಾ.ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದರೆ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ  ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲು ಬಂದಿರುವುದಾಗಿ ತಿಳಿಸಿದರು.

    ಇನ್ನು ನೊಂದವರ ಪರವಾಗಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ನಿಂತಿದ್ದು ವೇದಿಕೆಯ ಜಿಲ್ಲಾಧ್ಯಕ್ಷ ನಾಗಭೂಷಣ್ ಹಂದ್ರಾಳ್ ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ನೌಕರ ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಸಹಿಸುವುದಿಲ್ಲ. ಕೂಡಲೇ ತಹಶೀಲ್ದಾರ್ ರವರ ಮೇಲೆ ಎಫ್.ಐ.ಆರ್.ದಾಖಲಿಸಬೇಕು.. ಇಲ್ಲವಾದಲ್ಲಿ ತಾವು ಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಸಿದರು

    ಬಡವರ ನೆರವಿಗೆ ಧಾವಿಸಬೇಕಾದ ಅಧಿಕಾರಿಗಳೇ ಹೀಗೆ ಸೌಜನ್ಯ ಇಲ್ಲದ ರೀತಿಯಲ್ಲಿ ವರ್ತಿಸಿದರೆ ದಲಿತರು ನೊಂದವರು ಯಾರಬಳಿ ನ್ಯಾಯ ಕೇಳಬೇಕು ಎನ್ನುವುದು ಯಕ್ಷ ಪ್ರಶ್ನೆಯಾಗಿ ಉಳಿಯುತ್ತದೆ

     ವರದಿ: ರಾಜೇಶ್ ರಂಗನಾಥ್ ತುಮಕೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!

    July 31, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ

    July 23, 2026

    Leave A Reply Cancel Reply

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.