ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಅಳಲಸಂದ್ರ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಫೋಟೋದಲ್ಲಿ ಕಾಣುವ ಯುವಕ ನೇಣಿಗೆ ಶರಣಾಗಿದ್ದ ಆದರೆ ಕುಟುಂಬಸ್ಥರು ಹೇಳುವ ಹಾಗೆ ನಮ್ಮ ಹುಡುಗ ನೇಣು ಹಾಕಿಕೊಳ್ಳುವ ಹೇಡಿಯಲ್ಲ.
ಹುಡುಗನ ಸಹೋದರಿ ಲಕ್ಷ್ಮೀ ಮಾತನಾಡಿ, ಕೋಳಲ ಪೊಲೀಸ್ ಠಾಣೆಯ ಅಧಿಕಾರಿ ಮಹಾಲಕ್ಷ್ಮಿ ಹಾಗೂ ಕೊರಟಗೆರೆ ಪೋಲಿಸ್ ಅಧಿಕಾರಿಗಳು ನಮಗೆ ನ್ಯಾಯ ದೊರಕಿಸುತ್ತಿಲ್ಲ. ಎಷ್ಟು ಬಾರಿ ಮನವಿ ಮಾಡಿದರೂ ಅದು ಕೊಲೆಯಲ್ಲ ಆತ್ಮಹತ್ಯೆ ಎಂದು ಹೇಳುತ್ತಾರೆ.
ಯಾರಾದರೂ ಕೈ ಕಾಲುಗಳನ್ನು ಹಿಂದಕ್ಕೆ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಎಂದು ಕೇಳಿದರೆ ನೀವು ಲಾಯರ್ ಗಳ ಎಂದು ನಮಗೆ ಪ್ರಶ್ನಿಸುತ್ತಾರೆ. ನಮ್ಮ ತಮ್ಮನ ನೇಣು ಬಿಗಿದಿರುವ ಮರದಲ್ಲಿ ಕಣ್ಣಾರೆ ಕಾಣಬಹುದು. ಅದು ಕೊಲೆಯೋ ಆತ್ಮಹತ್ಯೆಯೋ ಎಂದು ಈ ಅಧಿಕಾರಿಗಳು ಏಕೆ ಈ ರೀತಿ ಮಾತನಾಡುತ್ತಿದ್ದಾರೆ ಎಂದು ನಮಗೆ ಅರ್ಥವಾಗುತ್ತಿಲ್ಲ. ನಮ್ಮ ತಮ್ಮನ ಕೊಲೆಗೆ ಕಾರಣರಾದ ನಮ್ಮ ಚಿಕ್ಕಪ್ಪ ನರಸಿಂಹಯ್ಯ ,ಅದೇ ಗ್ರಾಮದವರಾದ ಗೌರಮ್ಮ ಗಂಗರಾಜು ಮೂರ್ತಿ ಶಿವರಾಜ್ ಪುನೀತ್ ಇವರುಗಳೇ ನನ್ನ ತಮ್ಮನ ಸಾವಿಗೆ ಕಾರಣ ಇವರುಗಳನ್ನು ಬಂಧಿಸಿ ನಮ್ಮ ತಮ್ಮನ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಕುಟುಂಬಸ್ಥರು ಜಿಲ್ಲಾಧಿಕಾರಿಯ ಕಾಲಿಗೆ ಬಿದ್ದ ಘಟನೆ ದೊಡ್ಡಪಾಲನಹಳ್ಳಿ ಗ್ರಾಮವಾಸ್ತವ್ಯ ಸಭೆಯಲ್ಲಿ ನಡೆದಿದೆ .
ಹುಡುಗನ ತಂದೆ ಮಾತನಾಡಿ, ನನ್ನ ಮಗನ ಸಾವಿಗೆ ಕಾರಣ ಅವರನ್ನು ಬಂಧಿಸುತ್ತಿಲ್ಲ ಕೊಳಲ ಸಬ್ ಇನ್ಸ್ಪೆಕ್ಟರ್ ಮಹಾಲಕ್ಷ್ಮಿಯವರ ಬಳಿ ಕಂಪ್ಲೇಂಟ್ ಕೊಡಲು ಹೋದರೆ ಇದು ನಮಗೆ ಬರುವುದಿಲ್ಲ ಕೊರಟಗೆರೆಗೆ ಕೊಡಿ ಎನ್ನುತ್ತಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಬಂದರೆ ಇಲ್ಲಿರುವ ಅಧಿಕಾರಿಗಳು ಅದು ಕೊಲೆಯಲ್ಲ ಆತ್ಮಹತ್ಯೆ ಎಂದು ವಾಪಸ್ ಹೋಗುವಂತೆ ಹೇಳುತ್ತಿದ್ದಾರೆ.
ಇನ್ನೂ ತುಮಕೂರು ಜಿಲ್ಲಾ ಪೊಲೀಸ್ ಠಾಣೆವರೆಗೂ ದೂರು ಕೊಟ್ಟಿದ್ದೇನೆ. ಅಲ್ಲಿಯೂ ಕೂಡ ಇದುವರೆಗೂ ಯಾವುದೇ ರೀತಿಯ ನ್ಯಾಯ ದೊರಕಲಿಲ್ಲ ನಮಗೆ ನ್ಯಾಯ ಕೊಡಿಸುವರೇ ಅನ್ಯಾಯವನ್ನು ಮಾಡಿದರೆ ನಾವು ಯಾರ ಬಳಿ ನ್ಯಾಯ ಕೇಳಬೇಕು ಎಂದು ಮಾಧ್ಯಮದವರ ಬಳಿ ಕುಟುಂಬಸ್ಥರು ತಮ್ಮ ಅಳಲು ತೋಡಿಕೊಂಡರು.
ಮದುವೆಯಾಗಿದ್ದರೂ ಮನೆಯಲ್ಲೇ ಇರುವ ಹೆಣ್ಣುಮಕ್ಕಳು ಕುಟುಂಬಕ್ಕೆ ಆಸರೆಯಾಗಿದ್ದ ಗಂಡು ಮಗ ಕೊಲೆಯಾಗಿದ್ದಾನೆ ಬಡತನದಲ್ಲಿ ಹುಟ್ಟಿದ ನಮಗೆ ನ್ಯಾಯ ಕೊಡಿಸಿ ಎಂದು ಅಧಿಕಾರಿಗಳ ಬಳಿ ಹೋದರೆ ಯಾವುದೇ ನ್ಯಾಯ ಸಿಗುತ್ತಿಲ್ಲ ಎಂದು ಜಿಲ್ಲಾಧಿಕಾರಿಗಳ ಕಾಲಿಗೆ ಬಿದ್ದು ನ್ಯಾಯ ಕೊಡಿಸುವಂತೆ ಪರಿಪರಿಯಾಗಿ ಕೇಳಿಕೊಂಡರು .
ಕೂಡಲೇ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿ ನಿಮಗೆ ನ್ಯಾಯ ದೊರಕಿಸುವುದು ನನ್ನ ಜವಾಬ್ದಾರಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5