nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025
    Facebook Twitter Instagram
    ಟ್ರೆಂಡಿಂಗ್
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶನಿವಾರದ ಆ ಒಂದು ಸಂಜೆ | ವಿವೇಕಾನಂದ ಎಚ್.ಕೆ.
    ಲೇಖನ August 30, 2024

    ಶನಿವಾರದ ಆ ಒಂದು ಸಂಜೆ | ವಿವೇಕಾನಂದ ಎಚ್.ಕೆ.

    By adminAugust 30, 2024No Comments3 Mins Read
    vivekananda
    • ವಿವೇಕಾನಂದ. ಎಚ್. ಕೆ.

    ಸುಮಾರು 6 ಗಂಟೆ. ಮೋಡ ಮುಸುಕಿದ ವಾತಾವರಣ. ಇನ್ನೂ ಸ್ವಲ್ಪ ಬೆಳಕಿತ್ತು. ನಗರದ ಅಪಾರ್ಟ್ಮೆಂಟ್ ಕಟ್ಟಡ ನಿರ್ಮಾಣ ಕಾರ್ಯದ ಅಂದಿನ ಕೆಲಸ ಮುಗಿದು ಕೂಲಿ ಹಣದ ಬಟವಾಡೆ ನಡೆಯುತ್ತಿತ್ತು.

    ಮೇಸ್ತ್ರಿ ಒಬ್ಬರು ಕುರ್ಚಿ, ಟೇಬಲ್ ಹಾಕಿಕೊಂಡು ಕುಳಿತು ನಗದು ಹಣವನ್ನು ಹಂಚಿಕೆ ಮಾಡುತ್ತಿದ್ದರು. ಅಲ್ಲಿ ಸುಮಾರು 40 – 50 ವಿವಿಧ ಕೆಲಸಗಾರರು ಸೇರಿದ್ದರು. ಅದರಲ್ಲಿ ಹೆಂಗಸರು ಸಹ ಬಹುತೇಕ ಸಮ ಪ್ರಮಾಣದಲ್ಲಿ ಇದ್ದರು. ಕೆಲವರು ನೆಲದ ಮೇಲೆ, ಸ್ವಲ್ಪ ಜನ ಅಲ್ಲಿದ್ದ ಸಿಮೆಂಟ್ ಇಟ್ಟಿಗೆಗಳ ಮೇಲೆ, ಹಲವರು ಪ್ಲಾಸ್ಟಿಕ್ ಚೀಲಗಳ ಮೇಲೆ ಕುಳಿತು ತದೇಕ ಚಿತ್ತದಿಂದ ಮೇಸ್ತ್ರಿ ಎಣಿಸುವ ದುಡ್ಡನ್ನೇ ನೋಡುತ್ತಾ ಕುಳಿತಿದ್ದರು.


    Provided by

    ಒಂದಿಬ್ಬರು ಎಲೆ ಅಡಿಕೆ, ಮತ್ತಿಬ್ಬರು ಸಿಗರೇಟು, ಇನ್ನಿಬ್ಬರು ವಿಮಲ್ ಅಡಿಕೆ ಪುಡಿ ಹಾಕುತ್ತಾ ಹಣವನ್ನೇ ದಿಟ್ಟಿಸುತ್ತಿದ್ದರು. ಹೆಣ್ಣು ಮಗಳೊಬ್ಬರು ಮಗುವಿಗೆ ಹಾಲು ಕುಡಿಸುತ್ತಿದ್ದರೆ ಮತ್ತೊಂದು ಹೆಂಗಸು ತಲೆ ಬಾಚಿಕೊಳ್ಳುತ್ತಾ ಹಣವನ್ನೇ ನೋಡುತ್ತಿತ್ತು.

    ಅಲ್ಲಿ ಒಬ್ಬಬ್ಬರಿಗೆ ಅಂದಾಜು ಸುಮಾರು 3 ರಿಂದ 5 ಸಾವಿರದವರೆಗೆ ಹಣ ಸಿಗುತ್ತಿತ್ತು. ‌ಅದು ಒಂದು ವಾರದ ಕೂಲಿ ಅಥವಾ ಸಂಬಳ ಇರಬೇಕು.

    ಆ ದೃಶ್ಯ ನೋಡಿದಾಗ ಗಮನ ಸೆಳೆದದ್ದು ಅವರು ಮೇಸ್ತ್ರಿ ಎಣಿಸುತ್ತಿದ್ದ ಹಣವನ್ನು ನೋಡುತ್ತಿದ್ದ ರೀತಿ, ಕಣ್ಣುಗಳಲ್ಲಿ ಇದ್ದ ವರ್ಣಿಸಲಾಗದ – ತೀಕ್ಷ್ಣವೂ ಅಲ್ಲದ, ಕುತೂಹಲವು ಅಲ್ಲದ, ಆಸೆಯೂ ಅಲ್ಲದ ಅಸಹಜ ನೋಟ, ಮುಖದಲ್ಲಿ ವ್ಯಕ್ತವಾಗುತ್ತಿದ್ದ ಗುರುತಿಸಲಾಗದ ಭಾವ ಮನಸ್ಸುಗಳಲ್ಲಿ ಮೂಡುತ್ತಿದ್ದ ಆಲೋಚನೆ ಎಲ್ಲೆಲ್ಲೋ ಕರೆದೊಯ್ಯುತ್ತಿತ್ತು.

    ಆ ದುಡ್ಡು ಅವರ ಪಾಲಿಗೆ ಎಷ್ಟೊಂದು ಮಹತ್ವದ್ದಾಗಿರಬಹುದು, ಆ ನಿರ್ಜೀವ ಪೇಪರ್ ನೋಟುಗಳು ಜೀವವಿರುವ ವ್ಯಕ್ತಿಗಳನ್ನು ಹೇಗೆ ನಿಯಂತ್ರಿಸುತ್ತದೆ, ಅವರ ಕೈಗೆ ಸಿಗುವ ಆ ಹಣವನ್ನು ಅವರು ಹೇಗೆಲ್ಲಾ ಖರ್ಚು ಮಾಡಬಹುದು.

    ಒಬ್ಬರು ಸಾಲದ ಕಂತು ಕಟ್ಟಬಹುದು, ಇನ್ನೊಬ್ಬರು ಬಡ್ಡಿ ಕಟ್ಟಬಹುದು, ಮತ್ತೊಬ್ಬರು ಮನೆ ಬಾಡಿಗೆ, ಇತರರು ಮಕ್ಕಳ ಶಾಲಾ ಶುಲ್ಕ, ನೀರು ವಿದ್ಯುತ್ ಬಿಲ್, ದಿನಸಿ ಅಂಗಡಿ, ಗ್ಯಾಸ್, ಮಾತ್ರೆಗಳು, ಬಟ್ಟೆಗಳು ಹೀಗೆ ಎಷ್ಟೆಷ್ಟೋ ಜೀವನಾವಶ್ಯಕ ಅಥವಾ ಬದುಕಿನ ಚಲನೆಗಾಗಿ ಆ ಹಣವನ್ನೇ ಅವಲಂಬಿಸಿರುವ ಮನಸ್ಥಿತಿ ತುಂಬಾ ಕಾಡುತ್ತದೆ.

    ಶಾಪಿಂಗ್ ಮಾಲ್ ಗಳು, ಸಿನಿಮಾ ಥಿಯೇಟರ್‌ ಗಳು, ಪ್ರವಾಸಿ ತಾಣಗಳು, ಬ್ಯೂಟಿ ಪಾರ್ಲರ್ಗಳು, ವೈಭವೋಪೇತ ಹೋಟೆಲ್‌ಗಳು, ಅಪಾರ್ಟ್ಮೆಂಟ್ ಗಳು, ಮದುವೆ ಗೃಹ ಪ್ರವೇಶಗಳು, ನಾಮಕರಣ ಜನ್ಮದಿನಗಳು, ಪಾರ್ಟಿ ಸಮಾರಂಭಗಳು, ರೆಸಾರ್ಟ್ ಗಳು, ಕಾರುಗಳು, ದುಬಾರಿ ಶೂ ಬಟ್ಟೆ ಮೊಬೈಲುಗಳು, ಸ್ವಿಮಿಂಗ್ ಪೂಲ್ಗಳು ಇವುಗಳ ನಡುವೆ ಈ ಕೂಲಿ ಕಾರ್ಮಿಕರ 3/4 ಸಾವಿರ ರೂಪಾಯಿಗಳ ಖರ್ಚಿನ ಕಾತುರತೆ ನೆನಪಾಗುತ್ತದೆ.

    ಈ ಸಣ್ಣ ಹಣಕ್ಕಾಗಿ ಒಂದು ವಾರ ಕಾಲ ಬೆವರು ಸುರಿಸಿ ದುಡಿಯುವ, ಅದೇ ಬದುಕಾಗಿ ಜೀವನ ಸವೆಸುವ ಜೀವಗಳ ನಡುವೆ ನೂರಾರು ಕೋಟಿಗಳ, ಅಪಾರ ಆಸ್ತಿಗಳ, ಕೇಜಿ ಗಟ್ಟಲೆ ಚಿನ್ನ ಬೆಳ್ಳಿ ಸಂಗ್ರಹಿಸಿರುವವರು ನೆನಪಾಗುತ್ತಾರೆ.

    ಹಣವೆಂಬ ವಸ್ತು ಇಡೀ ಜೀವನದ ಧ್ಯೇಯ, ಗುರಿ, ಸಾರ್ಥಕತೆಯ ಅಥವಾ ಮೋಕ್ಷದ ಮಾರ್ಗವಾಗಿ ಮಾರ್ಪಾಟಾಗಿರುವ ಸಮಾಜದಲ್ಲಿ ನಾವು ವಾಸಿಸುತ್ತಿದ್ದೇವೆ.

    ಹಣ ಎಲ್ಲಿಯಾದರೂ ಇರಲಿ, ಯಾರದಾದರೂ ಆಗಿರಲಿ ಅದನ್ನು ನೋಡುವಾಗ ಆಗುವ ಮನಸ್ಸುಗಳ ಭಾವ, ಅದು ಬೇರೆಯವರ ಪಾಲಾದಾಗ ಅಥವಾ ಅದು ನಮಗೆ ದೊರೆತಾಗ ಆಗುವ ಮಾನಸಿಕ ತಳಮಳ ಬಹುಶಃ ಹಣವೇ ನಮ್ಮ ಬದುಕು ಎಂದೇ ಭಾಸವಾಗುತ್ತದೆ.

    ರಾಜಕೀಯ, ವ್ಯಾಪಾರ, ಧಾರ್ಮಿಕ, ಆರೋಗ್ಯ, ಶಿಕ್ಷಣ, ಸಮಾಜ ಸೇವೆ, ಆಧ್ಯಾತ್ಮ ಯಾವುದೇ ಆಗಿರಲಿ ಬಹುತೇಕ ಎಲ್ಲವೂ ಹಣ ಕೇಂದ್ರಿತವೇ ಆಗಿರುತ್ತದೆ. ಅದರ ಪ್ರಮಾಣ ಹೆಚ್ಚು ಕಡಿಮೆ ಆಗಬಹುದಷ್ಟೇ.

    ದಿನದ ಎಚ್ಚರದ ಪ್ರತಿ ಕ್ಷಣವೂ ಹಣ ಬೇರೆ ಬೇರೆ ರೂಪದಲ್ಲಿ ಪ್ರಭಾವ ಬೀರುತ್ತಲೇ ಇರುತ್ತದೆ.

    ಕೂಲಿ ಕಾರ್ಮಿಕರು ಹಣವನ್ನು ನೋಡುತ್ತಿದ್ದ ದೃಶ್ಯಗಳು, ಹಣಕ್ಕಾಗಿ ಮಾಡುವ ಸುಫಾರಿ ಕೊಲೆಗಳು, ಹಣಕ್ಕಾಗಿ ಮಂತ್ರಿಗಳು, ಅತಿ ಗೌರವಾನ್ವಿತ ಅಧಿಕಾರಿಗಳು, ಸರ್ವಸಂಗ ಪರಿತ್ಯಾಗಿ ಧಾರ್ಮಿಕ ಮುಖಂಡರು, ಸಮಾಜ ಸೇವಕರು, ಹೋರಾಟಗಾರರು, ದರೋಡೆಕೋರರು ಎಲ್ಲರೂ ಹಣದ ಪ್ರಾಮುಖ್ಯತೆಯನ್ನು ಮತ್ತೆ ಮತ್ತೆ ದೃಢಪಡಿಸುತ್ತಾರೆ.

    ಆದರೆ ಒಂದಲ್ಲಾ ಒಂದು ದಿನ ಇದರಿಂದ ನಾವು ಹೊರಗೆ ಬರಲೇ ಬೇಕಿದೆ. ಇಲ್ಲದಿದ್ದರೆ ನಾಗರಿಕ ಸಮಾಜ ಮಾನವೀಯವಾಗಿ ಉಳಿಯದೆ ಕೇವಲ ಹಣದ ಗುಲಾಮಿತನದಲ್ಲಿ ಬದುಕು ‌ಶವವಾಗುವ ಸಮಾಜದಲ್ಲಿ ನಾವು ಇರಬೇಕಾಗುತ್ತದೆ.

    ಹಣ ನಮ್ಮನ್ನು ನಿಯಂತ್ರಿಸುವ ವ್ಯವಸ್ಥೆ ಬದಲಾಗಿ ಮತ್ತೆ ನಾವು ಹಣವನ್ನು ನಿಯಂತ್ರಿಸುವ ಕಾಲದ ನಿರೀಕ್ಷೆಯಲ್ಲಿ…….

    ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
    ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
    ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
    ಮನಸ್ಸುಗಳ ಅಂತರಂಗದ ಚಳವಳಿ,


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನಿಜವಾದ ದಾನಿ

    April 4, 2025

    ರಾಜನ ಹಿಂದಿನ ಜನುಮ

    April 2, 2025

    ಏಪ್ರಿಲ್ 1: ಪ್ರತಿ ನಿತ್ಯವೂ ನಾವು ಫೂಲ್ ಗಳಾಗುತ್ತೇವೆ

    April 1, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಧಾರವಾಡ: ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡ್ತಾರಾ? ಎಂದು ಸಚಿವ ಸಂತೋಷ್…

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.