nammatumakuru

    Subscribe to Updates

    Get the latest creative news from FooBar about art, design and business.

    What's Hot

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025
    Facebook Twitter Instagram
    ಟ್ರೆಂಡಿಂಗ್
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    • ಬೀದರ್ | 1. 34 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ನಾಶ
    • ತುಮಕೂರು | ಆಮೆ ವೇಗದಲ್ಲಿ ಸಾಗಿದ ಜಾತಿವಾರು ಸಮೀಕ್ಷೆ: ಕಾಡುತ್ತಿರುವ ಸಮಸ್ಯೆಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ವ ರೋಗಕ್ಕೂ ರಾಮಬಾಣ ಎಕ್ಕ ಗಿಡ
    ಆರೋಗ್ಯ May 31, 2024

    ಸರ್ವ ರೋಗಕ್ಕೂ ರಾಮಬಾಣ ಎಕ್ಕ ಗಿಡ

    By adminMay 31, 2024No Comments3 Mins Read
    ace plant

    ಎಕ್ಕವನ್ನು ಹಿಂದೂಗಳು ದೈವಿಕ ಗಿಡವೆಂದು ಕರೆದರೂ ಅವರಾಗೇ ಬೆಳೆಸುವುದಿಲ್ಲ. ಎಲ್ಲೆಂದರಲ್ಲಿ ತಾನಾಗೇ ಬೆಳೆಯುವ ಅಪಾರ ಔಷಧೀಯ ಗುಣಗಳನ್ನು ಹೊಂದಿರುವ, ಪೂಜೆಗೂ ಉಪಯೋಗಿಸಲ್ಪಡುವ ಈ ಸಸ್ಯದ ಬಗ್ಗೆ ಎಲ್ಲರಿಗೂ ಸಂಪೂರ್ಣ ತಿಳಿವಳಿಕೆ ಇಲ್ಲ. ಆದರೆ ಭಯಭಕ್ತಿ ಇದೆ. ಸೂರ್ಯನು(ಅದಕ್ಕೆ ಅರ್ಕ ಎಂದು ಈ ಗಿಡದ ಇನ್ನೊಂದು ಹೆಸರು) ಈ ಗಿಡದ ಅಧಿಪತಿ. ಇದನ್ನು ತಂತ್ರ ವಿದ್ಯೆ ಕಲಿತವರು ಬಹಳವಾಗಿ ಉಪಯೋಗಿಸುತ್ತಾರೆ. ಹಲವಾರು ನಂಬಿಕೆ, ಮೂಢನಂಬಿಕೆಗಳು ಈ ಗಿಡದ ಬಗ್ಗೆ ಪ್ರಚಲಿತದಲ್ಲಿದ್ದು, ವೈದ್ಯಕೀಯವಾಗಿ ಸರಿಯಾಗಿ ಬಳಸಿದಲ್ಲಿ ಉತ್ತಮ ಫಲಿತಾಂಶ ಕೊಡುವ ರಹಸ್ಯಮಯ ಗಿಡವಾಗಿದೆ.

    ನಮ್ಮ ಪೂರ್ವಜರು ಹೇಳುವಂತೆ ಬಿಳಿ ಎಕ್ಕದ ಗಿಡ ಒಂದು ಮನೆಯಲ್ಲಿದ್ದರೆ ಆರೋಗ್ಯ, ಐಶ್ವರ್ಯ ಮತ್ತು ಹಣಕಾಸು ಎಲ್ಲ ಸಮಸ್ಯೆಗೂ ಪರಿಹಾರ ದೊರಕುತ್ತದೆ. ಕೇವಲ ಪೂಜೆ ಮತ್ತು ಧಾರ್ಮಿಕವಾಗಿ ಮಾತ್ರವಲ್ಲ ಆಯುರ್ವೇದದಲ್ಲೂ ಎಕ್ಕ ಗಿಡಕ್ಕೆ ಮಹತ್ವದ ಸ್ಥಾನವಿದೆ. ಔಷಧೀಯ ಗುಣಗಳಿಂದ ಎಕ್ಕವೂ ಶ್ರೀಮಂತವಾಗಿದೆ. ಈ ಸಸ್ಯದ ಅಡಕವಾಗಿರುವ ಔಷಧೀಯ ಗುಣಗಳ ಬಗ್ಗೆ ಇಂದಿನವರಿಗೆ ಅಷ್ಟಾಗಿ ಅರಿವಿಲ್ಲ. ಇಂದು ಈ ಲೇಖನದಲ್ಲಿ ಪ್ರಕೃತಿದತ್ತವಾಗಿ ದೊರಕುವ ಎಕ್ಕ ಗಿಡದ ಔಷಧೀಯ ಗುಣಗಳ ಬಗ್ಗೆ ತಿಳಿಯೋಣ.


    Provided by
    Provided by
    Provided by

    ಶಿವನಿಗೆ ಅತ್ಯಂತ ಪ್ರಿಯವಾದ ಹೂವುಗಳಲ್ಲಿ ಈ ಎಕ್ಕದ ಹೂವು ಕೂಡ ಒಂದು. ಶಿವರಾತ್ರಿಯಂದು ಈ ಎಕ್ಕದ ಹೂವಿಗೆ ವಿಶೇಷ ಬೇಡಿಕೆ ಇರುತ್ತದೆ. ಅದೇ ರೀತಿ ಆರೋಗ್ಯದ ವಿಷಯಕ್ಕೆ ಬಂದಾಗ ಎಕ್ಕದ ಗಿಡ ಶ್ರೀಮಂತವಾಗಿದೆ. ಮುಳ್ಳು ತಾಗಿದರೆ, ಚೇಳು ಅಥವಾ ಇನ್ನಿತರ ವಿಷಜಂತುಗಳು ಕಡಿದಾಗ ಈ ಎಕ್ಕದ ಗಿಡದ ಹಾಲನ್ನು ಹಚ್ಚುತ್ತಾರೆ. ಅದರೆ ಮಹತ್ವದ ಸಂಗತಿಯೆಂದರೆ ಎಕ್ಕದ ಗಿಡದ ಹಾಲು ಕಣ್ಣಿಗೆ ಸಿಡಿಯಬಾರದು. ಸಿಡಿದರೆ ಕಣ್ಣು ಕುರುಡಾಗುವ ಅಪಾಯವಿರುತ್ತದೆ. ಹೀಗಾಗಿ ಬಳಕೆಯ ವೇಳೆ ಜಾಗೃತರಾಗಿರಿ. ಚಿಕ್ಕಮಕ್ಕಳ ಕೈಗಂತೂ ಸಿಗದಿದ್ದರೇನೆ ಒಳಿತು. ವಯಸ್ಸಾದಂತೆ ಕಾಲಿನ ಸ್ನಾಯುಗಳಲ್ಲಿ ಶಕ್ತಿ ಕೊರತೆಯಾಗುತ್ತದೆ. ಇದರಿಂದ ಕುಳಿತರೂ, ನಿಂತರೂ ನೋವು ಕಾಡಲಾರಂಭಿಸುತ್ತದೆ. ಇದಕ್ಕೆ ಎಕ್ಕದ ಎಲೆ ಪರಿಹಾರ ನೀಡುತ್ತದೆ. ಮಂಡಿನೋವು ಇರುವವರು ಎಕ್ಕದ ಎಲೆಯನ್ನು ಸುಟ್ಟು ಬಿಸಿ ಇರುವಾಗಲೇ ಅದನ್ನು ನೋವಿರುವ ಜಾಗದಲ್ಲಿ ಇರಿಸಿಕೊಂಡು ಬಟ್ಟೆಯನ್ನು ಕಟ್ಟಿಕೊಂಡರೆ ನೋವು ಕಡಿಮೆಯಾಗುತ್ತದೆ.

    ದಿನದಲ್ಲಿ ಒಂದು ಅಥವಾ ಎರಡು ಬಾರಿ ಈ ರೀತಿ ಮಾಡಿದರೆ ಉತ್ತ ಫಲಿತಾಂಶ ಕಂಡುಕೊಳ್ಳಬಹುದಾಗಿದೆ. ಎಕ್ಕದ ಗಿಡ ವಿಷವಾದರೂ ಸರಿಯಾಗಿ ಬಳಕೆ ಮಾಡಿದರೆ ಆರೋಗ್ಯಕ್ಕೆ ಒಳಿತಾಗುವ ಹಲವು ಗುಣಗಳನ್ನು ಒಳಗೊಂಡಿದೆ. ಎಕ್ಕದ ಗಿಡದ ಹೂವನ್ನು ಒಣಗಿಸಿ ಪುಡಿ ಮಾಡಿ ಚೂರ್ಣದಂತೆ ಮಾಡಿಟ್ಟುಕೊಂಡರೆ ಅಸ್ತಮಾ ರೋಗಿಗಳಿಗೆ ಉತ್ತಮ ಔಷಧವಾಗಿದೆ. ಪ್ರತಿದಿನ ಈ ಚೂರ್ಣದ ಸೇವನೆಯನ್ನು ಮಾಡುತ್ತಿದ್ದರೆ ಅಸ್ತಮಾ, ದುರ್ಬಲತೆ, ಶ್ವಾಸಕೋಶದ ಸಮಸ್ಯೆಗಳು ದೂರವಾಗುತ್ತದೆ. ದಮ್ಮು ರೋಗವಿರುವವರು ಕೂಡ ಈ ಚೂರ್ಣವನ್ನು ಸೇವನೆ ಮಾಡುವುದರಿಂದ ಶ್ವಾಸಕೋಶದಲ್ಲಿ ಹಿಡಿತವಾಗುವ ಅನುಭವ ಸರಿಹೋಗುತ್ತದೆ.

    ಪ್ರಾಚೀನ ಕಾಲದಿಂದಲೂ ಎಕ್ಕದ ಗಿಡವನ್ನು ಔಷಧೀಯ ಗಿಡವಾಗಿ ಬಳಸುತ್ತಿದ್ದಾರೆ. ಕಾಲು ಅಥವಾ ಇತರ ದೇಹದ ಮೇಲಾಗುವ ಊತವನ್ನು ಕಡಿಮೆ ಮಾಡಲು ಎಕ್ಕದ ಎಲೆ ಸಹಕಾರಿಯಾಗಿದೆ. ಎಕ್ಕದ ಎಲೆಗೆ ಕೊಬ್ಬರಿ ಎಣ್ಣೆಯನ್ನು ಹಚ್ಚಿ ಬಿಸಿ ಮಾಡಿ ಊತವಿರುವ ಜಾಗದಲ್ಲಿ ಇಡಬೇಕು. ಒಂದು ವಾರಗಳ ಕಾಲ ಹೀಗೆ ಮಾಡುವುದಿರಿಂದ ಕಾಲಿನ ಊತ ಕಡಿಮೆಯಾಗುತ್ತದೆ. ಶರೀರದ ಮೇಲೆ ಗಾಯಗಳಾದರೆ ಎಕ್ಕದ ಎಲೆಗಳನ್ನು ಬಿಸಿ ಮಾಡಿ ಗಾಯದ ಮೇಲೆ ಇಡುವುದರಿಂದ ರಕ್ತಸ್ರಾವ ನಿಲ್ಲುತ್ತದೆ ಜೊತೆಗೆ ನೋವು ಕೂಡ ಬೇಗನೆ ವಾಸಿಯಾಗುತ್ತದೆ. ಎಕ್ಕದ ಗಿಡದ ಎಲೆಯ ತುದಿಯಲ್ಲಿ ಬರುವ ಬಿಳಿಯ ಬಣ್ಣದ ಹಾಲನ್ನು ನಂಜಿನ ಈಟಗಲು ಕಚ್ಚಿರುವ ಜಾಗದಲ್ಲಿ ಹಚ್ಚದರೆ ದೇಹಕ್ಕೆ ನಂಜು ಅಂಟುವುದಿಲ್ಲ. ಅಲ್ಲದೆ ಮುಳ್ಳು ಚುಚ್ಚಿದ್ದರೆ ಈ ಹಾಲನ್ನು ಮುಳ್ಳು ಚುಚ್ಚಿದ ಜಾಗದಲ್ಲಿ ಹಾಕಿದರೆ ಮುಳ್ಳು ಹೊರಗೆ ಬರುತ್ತದೆ.

    ಚೇಳು ಕಚ್ಚಿದ್ದರೆ ಆ ಜಾಗಕ್ಕೆ ಎಕ್ಕದ ಗಿಡದ ಹಾಲನ್ನು ಹಾಕಿದರೆ ನೋವು ಬೇಗನೆ ಕಡಿಮೆಯಾಗುತ್ತದೆ. ವಿಷ ಕೂಡ ದೇಹಕ್ಕೆ ಹೋಗದಂತೆ ತಡೆಯುತ್ತದೆ. ಇತ್ತೀಚೆಗಂತೂ ಮಧುಮೇಹ ಎಲ್ಲರಲ್ಲೂ ಇರುವ ಸಾಮಾನ್ಯ ಕಾಯಿಲೆಯಂತಾಗಿದೆ. ಮಧುಮೇಹಕ್ಕೆ ಸಾಕಷ್ಟು ಔಷಧಗಳಿದ್ದರೂ ಮೂಲಿಕೆಗಳ ಔಷಧ ಹೆಚ್ಚು ಪರಿಣಾಮಕಾರಿಯಾಗಿದೆ. ಮಧುಮೇಹ ನಿಯಂತ್ರಣಕ್ಕೆ ಎಕ್ಕದ ಎಲೆ ಸಹಕಾರಿಯಾಗಿದೆ. ಹೌದು, ಎಕ್ಕದ ಎಲೆಗಳನ್ನು ಬಿಸಿ ಮಾಡಿ ರಾತ್ರಿ ಮಲಗುವ ಮುನ್ನ ಪಾದದ ಕೆಳಗೆ ಇಟ್ಟು ಬಟ್ಟೆ ಸುತ್ತಿಕೊಂಡು ಮಲಗಿ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬಂದು ಮಧುಮೇಹ ನಿಯಂತ್ರಣದಲ್ಲಿರುತ್ತದೆ. ಯಾವುದೇ ಆಗಲಿ ಒಂದೊಮ್ಮೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಹೃದಯಾಘಾತಕ್ಕೂ ಮುನ್ನ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ: ನಿರ್ಲಕ್ಷಿಸಿದರೆ ಜೀವಕ್ಕೆ ಅಪಾಯ!

    September 6, 2025

    ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ

    September 4, 2025

    ಹೆಚ್ಚು ನಿದ್ರೆ ಮಾಡುತ್ತಿದ್ದೀರಾ? ಹಾಗಿದ್ದರೆ ಈ ಲೇಖನವನ್ನು ತಪ್ಪದೇ ಓದಿ

    August 16, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ನಾನು ಈ ಲೇಖನವನ್ನು ಬರೆಯುತ್ತಿರುವ ಸಂದರ್ಭದಲ್ಲಿ ಈ ಹಿಂದೆ ಆತ್ಮಗಳಿಗೆ ಸಂಬಂಧಿಸಿದಂತೆ ಯಾವ ಲೇಖನವನ್ನೂ ಓದಿರುವುದಿಲ್ಲ ಎಂದು ಸ್ಪಷ್ಟೀಕರಣ ಮಾಡುತ್ತಾ…

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025

    ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.