ಚಿಕ್ಕೋಡಿ: ಆಡಳಿತ ವ್ಯವಸ್ಥೆ ಕುಸಿದಿದೆ, 2 ದಿನದಲ್ಲಿ ನಾನು ರಾಜೀನಾಮೆ ನೀಡಿದರೂ ಆಶ್ಚರ್ಯವಿಲ್ಲ ಎಂದು ಹಿರಿಯ ಶಾಸಕ ರಾಜು ಕಾಗೆ ಸ್ವಪಕ್ಷ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಬಿ.ಆರ್. ಪಾಟೀಲ್ ಆಡಿರುವ ಮಾತುಗಳು ಸುಳ್ಳಲ್ಲ. ಅವರ ಆಡಿಯೋ ವೈರಲ್ ವಿಚಾರಕ್ಕೆ ನನ್ನ ಬೆಂಬಲವಿದೆ ಎಂದರು.
ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ನನಗೆ 25 ಕೋಟಿ ರೂಪಾಯಿ ಕಾಮಗಾರಿ ಮಂಜೂರು ಮಾಡಲಾಗಿದೆ. ಇದರಲ್ಲಿ 12 ಕೋಟಿ ರೂಪಾಯಿ ರಸ್ತೆ ಕಾಮಗಾರಿಗೆ ಅನುಮತಿ ನೀಡಲಾಗಿದೆ. ಇನ್ನು 13 ಕೋಟಿ ರೂಪಾಯಿ ಕಾಮಗಾರಿಯ ವರ್ಕ್ ಆರ್ಡರ್ ಸಿಕ್ಕಿಲ್ಲ. 72 ಸಮುದಾಯದ ಭವನಕ್ಕೆ ಅನುಮೋದನೆ ಸಿಕ್ಕಿಲ್ಲ. ಎರಡು ವರ್ಷ ಆಯ್ತು ಇನ್ನೂ ವರ್ಕ್ ಆರ್ಡರ್ ಬಂದಿಲ್ಲ. ಇಲ್ಲಿ ಅಧಿಕಾರಿಗಳನ್ನು ಕೇಳಿದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಸರ್ಕಾರದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ, ನನ್ನ ಮನಸ್ಸಿಗೆ ನೋವಾಗಿದೆ, ನನಗೆ ರಾಜೀನಾಮೆ ಕೊಡುವ ಮನಸ್ಥಿತಿ ಬಂದಿದೆ. ನಾನು ಎರಡು ದಿನದಲ್ಲಿ ಹೋಗಿ ರಾಜೀನಾಮೆ ಕೊಟ್ಟರೂ ಯಾವುದೇ ಆಶ್ಚರ್ಯವಿಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW