nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದ್ದೂರಿಯಾಗಿ ಜರುಗಿದ ನಾಗಲಮಡಿಕೆಯ ಅಂತ್ಯಸುಬ್ರಹ್ಮಣ್ಯೇಶ್ವರ ಜಾತ್ರಾ ಮಹೋತ್ಸವ
    ಜಿಲ್ಲಾ ಸುದ್ದಿ January 17, 2024

    ಅದ್ದೂರಿಯಾಗಿ ಜರುಗಿದ ನಾಗಲಮಡಿಕೆಯ ಅಂತ್ಯಸುಬ್ರಹ್ಮಣ್ಯೇಶ್ವರ ಜಾತ್ರಾ ಮಹೋತ್ಸವ

    By adminJanuary 17, 2024No Comments2 Mins Read
    pavagada

    ಪಾವಗಡ: ಕರ್ನಾಟಕ ರಾಜ್ಯದ ಸುಪ್ರಸಿದ್ಧ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮಂಗಳವಾರ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗಿದೆ, ಪಾವಗಡ ತಾಲೂಕಿನ ನಾಗಲಮಡಿಕೆ ಗ್ರಾಮದಲ್ಲಿ ನಡೆಯುವ ಈ ಜಾತ್ರೆಗೆ ಆಂಧ್ರ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸ್ವಾಮಿಗೆ ನಮಿಸುತ್ತಾರೆ.

    ಬೆಳಗಿನ ಜಾವದಿಂದಲೇ ಸುಬ್ರಮಣ್ಯೇಶ್ವರ ಸ್ವಾಮಿಗೆ ಶಾಸ್ತ್ರೋಕ್ತವಾಗಿ ವಿವಿಧ ಪೂಜಾ ಕೈಂಕರಿಗಳನ್ನು ನೆರವೇರಿಸಿದ್ದು, ಸ್ವಾಮಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು.


    Provided by
    Provided by

    ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ದೇವಸ್ಥಾನದ ಬ್ರಹ್ಮ ರಥೋತ್ಸವಕ್ಕೆ ವಿಶೇಷ ಹೋಮ ಹವನಗಳನ್ನು ನಡೆಸಿ ಶಾಸಕರಾದ ಎಚ್ ವಿ ವೆಂಕಟೇಶ್ ಹಾಗೂ ಪಾವಗಡ ತಹಸಿಲ್ದಾರ್ ಡಿಎನ್ ವರದರಾಜ ಅವರು ರಥ ಎಳೆಯುವ ಮೂಲಕ ಚಾಲನೆ ನೀಡಿದ್ದರು.

    ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಎಚ್ ವಿ ವೆಂಕಟೇಶ್, ಕೆಲ ಕಾರಣಾಂತರಗಳಿಂದಾಗಿ ಅಂತ್ಯ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಕುಂಠಿತವಾಗಿದೆ, ದೇವಸ್ಥಾನದಲ್ಲಿ ಪಾರುಪತ್ತೆ ನಡೆಸುವವರ ಮತ್ತು ಪ್ರಧಾನ ಅರ್ಚಕರ ನಡುವಿನ ಗುದ್ದಾಟ ಒಂದು ಕಾರಣವಾಗಿದೆ, ಇದನ್ನೇ ಮುಂದುವರಿಸಿಕೊಂಡು ಬರುತ್ತಿದ್ದಾರೆ, ಇತ್ತೀಚಿಗಷ್ಟೇ ದೇವಸ್ಥಾನದ ಪ್ರಧಾನ ಅರ್ಚಕರಾದ ಬದ್ರಿನಾಥ್ ಅವರನ್ನು ಕರೆಸಿ ಸಮಾಲೋಚನೆ ಮಾಡಿ ನೀವಿಬ್ಬರೂ ಅನುಸರಿಸಿಕೊಂಡು ಹೋದರೆ ಮಾತ್ರ ದೇವಸ್ಥಾನ ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದ್ದೇನೆ.

    ಕೆಲವೇ ದಿನಗಳಲ್ಲಿ ರಾಜ್ಯದ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರ ಬಳಿ ದೇವಸ್ಥಾನದ ಅಭಿವೃದ್ಧಿಯ ಕುರಿತು ಚರ್ಚೆ ಮಾಡಲಿದ್ದೇನೆ. ಈಗಾಗಲೇ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬೇಕಾಗಿರುವಂತಹ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ವರದಿ ತಯಾರಿಸುವಂತೆ ಅಧಿಕಾರಿಗಳಿಗೂ ಸೂಚಿಸಿದ್ದೇನೆ. ಅದೇ ರೀತಿ ದೇವಸ್ಥಾನವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನೂರಕ್ಕೆ ನೂರರಷ್ಟು ಪ್ರಾಮಾಣಿಕ ಪ್ರಯತ್ನ ಮಾಡಿ ಮುಂದಿನ ವರ್ಷ ಜಾತ್ರೆಯ ಸಮಯಕ್ಕೆ ಜನರು ಶುಭ ಸುದ್ದಿಯನ್ನು ಕೇಳಲಿದ್ದಾರೆ ಎಂದರು

    ಇನ್ನು ಈ ಸಂದರ್ಭದಲ್ಲಿ ತಹಸೀಲ್ದಾರ್ ಡಿ. ಎನ್. ವರದರಾಜು,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೇಶ್ ಬಾಬು, ಪಾವಗಡ ಪುರಸಭೆಯ ಸದಸ್ಯರಾದ ಪಿ ಎಚ್ ರಾಜೇಶ್, ಕಲ್ಪವೃಕ್ಷ ರವಿ, ಮುಖಂಡರಾದ ವೆಂಕಟಮ್ಮನಹಳ್ಳಿ ನಾನಿ, ಆರ್ ಎನ್ ಅಶ್ವಥ್, ನಾಗಲಮಡಿಕೆ ಮಂಜುನಾಥ್, ನಾಗರಾಜು, ಶಿರಸ್ತೆದಾರರಾದ ಎನ್ ಮೂರ್ತಿ, ಆರ್ ಐ ರಾಜಗೋಪಾಲ್, ಕಿರಣ್ ಕುಮಾರ್, ರವಿಕುಮಾರ್, ನಾರಾಯಣ್, ಪ್ರಧಾನ ಅರ್ಚಕರಾದ ಬದ್ರಿನಾಥ್, ಸಿಪಿಐ ಗಿರೀಶ್, ಸಿಬ್ಬಂದಿ ತಿಮ್ಮಾರೆಡ್ಡಿ ಆಸೀಸ್ ಮಧುಸೂದನ್ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ

    admin
    • Website

    Related Posts

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ…

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.