ಸರಗೂರು: ಎಲ್ಲಾ ಸಮುದಾಯದ ನಾಯಕರಿಗೆ ಸಮಾನತೆ ನೀಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ನಮ್ಮ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಸರ್ಕಾರ ನುಡಿದಂತೆ ನಡೆದಿದ್ದೇವೆ ಎಂದು ಶಾಸಕ ಅನಿಲ್ ಚಿಕ್ಕಮಾದು, ಸುನೀಲ್ ಬೋಸ್ ಪರವಾಗಿ ಮತಯಾಚನೆ ಮಾಡಿದರು.
ತಾಲ್ಲೂಕಿನ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹಂಚೀಪುರ ಬಿ ಮಟಕೆರೆ, ಹೆಗ್ಗನೂರು, ಸಾಗರೆ, ಬಿದರಹಳ್ಳಿ, ಕೊತ್ತೇಗಾಲ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶನಿವಾರ ದಂದು ಮತಯಾಚನೆಯಲ್ಲಿ ಮಾತನಾಡಿದರು.
ನಮ್ಮ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು. ಬಡಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಜನೆ ಜಾರಿಗೊಳಿಸಿದ್ದಾರೆ. ಇದರಿಂದ ಅದನ್ನು ಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ ಮತ ನೀಡಿ ಎಂದು ತಿಳಿಸಿದರು.
ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿಗಳನ್ನು ಕೊಡಲಾಗುವುದು. ಮತ್ತು ರೈತರು ಸಾಲವನ್ನು ಮನ್ನಾ ಮಾಡಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಇರುವುದು ಬಡವರಿಗೆ ಪೂರಕವಾಗಿರುತ್ತದೆ. ಅದರೆ ಬಿಜೆಪಿ ಪಕ್ಷ ಇರುವುದು ಶ್ರೀಮಂತರಿಗೆ ಮಾತ್ರ ಪರವಾಗಿ ಇರುತ್ತದೆ ಎಂದು ಆರೋಪಿಸಿದರು. ಯಾರು ತಮ್ಮ ಪರವಾಗಿ ಇದ್ದಾರೆ. ನಿಮ್ಮ ಗ್ರಾಮಗಳ ಕೆಲಸಗಳನ್ನು ಮಾಡುತ್ತಾರೆ. ಅಂತವರಿಗೆ ನಿಮ್ಮ ಮತಗಳನ್ನು ನೀಡಿ ಎಂದು ಮತದಾರರಿಗೆ ಮನವಿ ಮಾಡಿಕೊಂಡರು.
ಈ ಭಾಗದಲ್ಲಿ ಆರ್. ಧ್ರುವನಾರಾಯಣ್ ಸಂಸದರಾದ ಸಮಯದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಮಾಡಿಕೊಂಡು ಬಂದಿದ್ದಾರೆ. ಅವರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಚ್.ಸಿ. ಮಹದೇವಪ್ಪ ಮತ್ತು ನಮ್ಮ ರಾಜಕೀಯ ಗುರುಗಳಾದ ಮಾಜಿ ಸಂಸದ ದಿ.ಆರ್. ಧ್ರುವನಾರಾಯಣ್ ಹಾಗೂ ನಮ್ಮ ತಂದೆ ಎಸ್ ಚಿಕ್ಕಮಾದು, ಎರಡು ತಾಲ್ಲೂಕಿನಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ನಾನು ಕೂಡ ಕಳೆದ ಐದು ವರ್ಷಗಳಿಂದ ತಾಲ್ಲೂಕನ್ನು ಆಭಿವೃದ್ಧಿ ಮಾಡಿಕೊಂಡು ಬಂದಿದ್ದೀನಿ. ಮುಂದೆಯೂ ಕೂಡ ಅಭಿವೃದ್ಧಿ ಮಾಡಿಕೊಂಡು ಬರುತ್ತೇವೆ, ನಮ್ಮ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮಾಡಿರುವುದನ್ನು ನೋಡಿಕೊಂಡು ಮಹಿಳೆಯರು 26 ದಂದು ನಡೆಯುವ ಚುನಾವಣೆಯಲ್ಲಿ, ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರಿಗೆ ಹೆಚ್ಚು ಮತಗಳನ್ನು ನೀಡಬೇಕು ಎಂದು ಮುಖಂಡರಿಗೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಜಾಷ್ ಪಾಷಾ, ಮಾದಪ್ಪ, ಪುರಸಭೆ ಸದಸ್ಯ ಹಾಗೂ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಎಚ್.ಸಿ. ನರಸಿಂಹಮೂರ್ತಿ, ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿರ್ವಾಳ್ ಬಸವರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ದೇವಲಾಪುರ ಸಿದ್ದರಾಜು, ಮಾನವ ಹಕ್ಕುಗಳ ಸಮಿತಿ ತಾಲೂಕು ಅಧ್ಯಕ್ಷ ಬಿರ್ವಾಳ್ ಚಿಕ್ಕಣ್ಣ, ಮೈಮುಲ್ ನಿರ್ದೇಶಕ ಈರೇಗೌಡ, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಮಾಜಿ ಜಿಪಂ ಸದಸ್ಯರು ಚಿಕ್ಕವೀರನಾಯಕ, ರವಿ, ಭಾಗ್ಯಲಕ್ಷ್ಮಿ, ನಂದಿನಿ ಚಂದ್ರಶೇಖರ, ನಾಮಧಾರಿಗೌಡ ಸಮಾಜದ ತಾಲ್ಲೂಕು ಅಧ್ಯಕ್ಷ ಬೀಮರಾಜು, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಹೂವಿನಕೊಳ ಸಿದ್ಧರಾಜು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತಾಲ್ಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ನಾಗರಾಜು, ಮುಖಂಡರು ಅಯಣ್ಣಸ್ವಾಮಿ, ಗುಂಡಮಲ್ಲಪ್ಪ, ಪುರದಕಟ್ಟೆ ಬಸವರಾಜು, ಮನುಗನಹಳ್ಳಿ ಗುರುಸ್ವಾಮಿ, ಆನಂದ, ಪ್ರಭುಸ್ವಾಮಿ, ಶಿವಪ್ಪ ಕೋಟೆ, ಸತೀಶ್ ಗೌಡ, ಗ್ರಾಪಂ ಸದಸ್ಯರು ದೇವದಾಸ್, ಕುರ್ಣೇಗಾಲ ಬೆಟ್ಟಸ್ವಾಮಿ, ನಾಗೇಂದ್ರ, ನಾಗೇಶ, ಶಿವಶಂಕರ್, ನಾಗೇಂದ್ರ, ಅಲ್ಪಸಂಖ್ಯಾತರ ತಾಲ್ಲೂಕು ಅಧ್ಯಕ್ಷ ಜಲೀಲ್, ಇಬ್ರಾಹಿಂ, ಮಣಿಕಂಠ, ಇನ್ನೂ ಮುಖಂಡರು ಸೇರಿದಂತೆ ಹಲವರು ಹಾಜರಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296