nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!

    October 21, 2025

    ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

    October 21, 2025

    ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತದಿಂದ ಮಾಜಿ ಅಧ್ಯಕ್ಷ ಸಾವು

    October 21, 2025
    Facebook Twitter Instagram
    ಟ್ರೆಂಡಿಂಗ್
    • ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!
    • ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತದಿಂದ ಮಾಜಿ ಅಧ್ಯಕ್ಷ ಸಾವು
    • ಕರ್ನಾಟಕ ಸಂಪನ್ಮೂಲ ಹೈಕಮಾಂಡ್ ಗೆ ಅರ್ಪಿಸಿದ ಕೀರ್ತಿ ಬಿಜೆಪಿಯದ್ದು: ಸಚಿವ ಪ್ರಿಯಾಂಕ್ ಖರ್ಗೆ
    • ನೀರಿನ ಟಬ್ ಗೆ ಬಿದ್ದ 11 ತಿಂಗಳ ಮಗು ಸಾವು
    • ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ಕಂಪೆನಿ ನಿರ್ವಾಹಕನಿಗೆ ಪಂಗನಾಮ!
    • ತಿಪಟೂರು | ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರ ಪರದಾಟ
    • ಕವನ: ದೀಪಾವಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶ ಸದೃಡವಾಗಿ ಪ್ರಜಾಪ್ರಭುತ್ವವಾಗಿ ನಿಂತಿರುವುದಕ್ಕೆ ಸಂವಿಧಾನ ಕಾರಣ: ಡಾ.ಜಿ.ಪರಮೇಶ್ವರ್
    ರಾಜ್ಯ ಸುದ್ದಿ April 15, 2025

    ದೇಶ ಸದೃಡವಾಗಿ ಪ್ರಜಾಪ್ರಭುತ್ವವಾಗಿ ನಿಂತಿರುವುದಕ್ಕೆ ಸಂವಿಧಾನ ಕಾರಣ: ಡಾ.ಜಿ.ಪರಮೇಶ್ವರ್

    By adminApril 15, 2025No Comments2 Mins Read
    tumakuru ambedkar jayanti

    ತುಮಕೂರು: ಸ್ವಾತಂತ್ರ್ಯ ಬಂದಾಗಿನಿಂದ ಬಾಬಾ ಸಾಹೇಬ್‌ ರ ಪ್ರತಿಮೆ ನಿರ್ಮಿಸಲು ಸಾಧ್ಯವಾಗಿರಲಿಲ್ಲ. ಮಹಾನಗರ ಪಾಲಿಕೆಯಲ್ಲಿ ಅನೇಕ ಬಾರಿ ನಿರ್ಧರಿಸಿದ್ದರು ಸಾಧ್ಯವಾಗಲಿಲ್ಲ. ಎಲ್ಲ ಜಿಲ್ಲೆಗಳಲ್ಲೂ ಬಾಬಾ ಸಾಹೇಬ್ ಪ್ರತಿಮೆ ಇಡಲಾಗಿತ್ತು. ಬೆಂಗಳೂರಿಗೆ ಹತ್ತಿರವಿರುವ ತುಮಕೂರಿನಲ್ಲಿ ಇಡಲಾಗಿಲ್ಲ ಎಂಬ ಕೊರಗು ಇತ್ತು. ಪ್ರತಿಮೆ ಇಡಲು ಎಲ್ಲರು ಒಕ್ಕರಲಿನಿಂದ ಸಹಕರಿಸಿದರು‌ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

    ತುಮಕೂರು ನಗರದ ಟೌನ್‌ಹಾಲ್ ಮುಂಭಾಗದಲ್ಲಿ ನೂತನವಾಗಿ ಸ್ಥಾಪಿಸಲಾದ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ 12 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ ಹಾಗೂ ಮಹಾನಗರ ಪಾಲಿಕೆ ಆವರಣದಲ್ಲಿ ಅಳವಡಿಸಲಾದ ‘ಲೈಟ್ ಯುಟಿಲಿಟಿ ಹೆಲಿಕ್ಯಾಪ್ಟರ್’ ಮಾದರಿಯನ್ನು ಉದ್ಘಾಟಿಸಿ  ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮಾತನಾಡಿದರು.


    Provided by
    Provided by
    Provided by

    ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಹೋಗಿದ್ದರೆ ಭಾರತ ಯಾವ ಸ್ಥಾನಮಾನದಲ್ಲಿ ಇರುತ್ತಿತ್ತು ಎಂಬುದು ಊಹಿಸಲು ಸಾಧ್ಯವಿಲ್ಲ‌‌. ಸ್ವಾತಂತ್ರ್ಯದ ನಂತರ ಪ್ರತಿಯೊಂದು ಜಾತಿ, ಧರ್ಮ ಸಮಾನವಾಗಿ ಬಾಳಬೇಕೆಂಬ ಮಾತುಗಳು ಕೇಳಿ ಬಂದಾಗ ಸಂವಿಧಾನ ರಚಿಸುವ ಜವಾಬ್ಧಾರಿ ಅಂಬೇಡ್ಕರ್ ರವರ ಹೆಗಲ ಮೇಲೆ ಬೀಳುತ್ತದೆ ಎಂದರು.

    ಪ್ರತಿಯೊಬ್ಬ ಭಾರತೀಯನಿಗೆ ಸಮಾನತೆ ಸಿಗಬೇಕು. ಭ್ರಾತೃತ್ವ, ಸಹೋದರತ್ವದಿಂದ ಬಾಳಬೇಕು‌. ಈ ಎಲ್ಲ ವೈವಿದ್ಯಮಯವಾದ ಚಿಂತನೆಯಿಂದ ಸಂವಿಧಾನ ಕೊಟ್ಟಿದ್ದಾರೆ. ಯಾವುದೇ ರಾಜ್ಯದ ಅಧಿವೇಶನ, ಲೋಕಸಭೆ ಅಧಿವೇಶನ ನಡೆದರೂ ಬಾಬಾ ಸಾಹೇಬ್‌ ರನ್ನು ನೆನಪು ಮಾಡಿಕೊಳ್ಳದ ದಿನವೇ ಇಲ್ಲ‌. ಅಭಿಮಾನದಿಂದ ಸಂವಿಧಾನವನ್ನು ಜ್ಞಾಪಿಸಿಕೊಳ್ಳುತ್ತಾರೆ. ದೇಶ ಸದೃಡವಾಗಿ ಪ್ರಜಾಪ್ರಭುತ್ವವಾಗಿ ನಿಂತಿರುವುದಕ್ಕೆ ಸಂವಿಧಾನ ಕಾರಣ ಎಂದರು.

    ಈ ದೇಶದಲ್ಲಿ ಸಮಾನತೆ ಬರಬೇಕು. ಜಾತಿವ್ಯವಸ್ಥೆ ನಮ್ಮ ತಿನ್ನುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಬಾಬಾ ಸಾಹೇಬ್‌  ಹಿಂದೂ ವಿರೋಧಿಯಲ್ಲ. ಹಿಂದೂ ಸಮಾಜವನ್ನು ಬದಲಾವಣೆ ಮಾಡಲು ಮುಂದಾದರು. ಮನುಸ್ಮೃತಿಯನ್ನು ಸುಟ್ಟರು. ಆದರು ಬದಲಾವಣೆ ಆಗಲಿಲ್ಲ. ಜಾತಿವ್ಯವಸ್ಥೆ, ಸಮಾಜ ಬದಲಾಗಲಿಲ್ಲ. ಇದರಿಂದ ಮನನೊಂದು, ‘ಆಕಸ್ಮಿಕವಾಗಿ ಹಿಂದೂವಾಗಿ ಹುಟ್ಟಿದ್ದೇನೆ. ಹಿಂದೂವಾಗಿ ಸಾಯಲಾರೇ’ ಎನ್ನುತ್ತಾರೆ. ಸಹೋದರತ್ವ ಭಾವನೆ ಬರಲಿಲ್ಲವಲ್ಲ ಎಂದು ಬೌದ್ಧ ಧರ್ಮಕ್ಕೆ ಸೇರ್ಪಡೆಯಾಗುತ್ತದೆ.  ಒಂದು ಕಾಲಕ್ಕೆ ಬಡತನದ ದೇಶವಾಗಿದ್ದ ಬಾಬರತ, ಇಂದು ವಿಶ್ವದಲ್ಲಿ 4ನೇ ಅರ್ಥಿಕ ದೇಶವಾಗಿ ಬೆಳೆದಿರುವುದಕ್ಕೆ ಸಂವಿಧಾನ ಕಾರಣ ಎಂದರು.

    ರಿಸರ್ವ್ ಬ್ಯಾಂಕ್ ಇಲ್ಲವಾಗಿದ್ದರೆ ನಮ್ಮ ಆರ್ಥಿಕ ಮಟ್ಟ ಏನಾಗಿರುತ್ತಿತ್ತು ಎಂದು ಊಹಿಸಲು ಅಸಾಧ್ಯ. ಪ್ರಸ್ತುತ ಸಂದರ್ಭದಲ್ಲಿ ಬದಲಾವಣೆ ಆಗುತ್ತಿವೆ. ವಿದ್ಯಾವಂತರಾಗುತ್ತಿದ್ದಾರೆ ಮನಸ್ಸು ಬದಲಾಗುತ್ತಿಲ್ಲ. ಸಮಾಜ ಅರ್ಥ ಮಾಡಿಕೊಳ್ಳಬೇಕು‌. ಇಲ್ಲವಾದರೆ ಹೀಗೆ ಉಳಿದುಬಿಡುತ್ತೇವೆ. ಬದಲಾವಣೆ ಎಂಬುದು ಸಂವಿಧಾನದ ಪುಟದಲ್ಲಿ ಇದ್ದರೆ ಸಾಲದು. ಸರ್ಕಾರಗಳು ನೀಡುವ ಎಲ್ಲ ಯೋಜನೆ, ಸವಲತ್ತುಗಳು ಬದಲಾವಣೆ ತರಲೇ ಇಲ್ಲ ಎಂದರು.

    ಮಹದೇವಪ್ಪ ಅವರು ಅನೇಕ ಬದಲಾವಣೆ ತಂದಿದ್ದಾರೆ. ಸಂವಿಧಾನದ‌ಪೂರ್ವಪೀಠಿಕೆಯನ್ನು ಮನೆಮನೆಗೆ ತಲುಪಿಸಿ ಅರ್ಥ ಮಾಡಿಸುವ ಕೆಲಸ ಮಾಡಿದ್ದಾರೆ.‌ ಇದೇ ನಮ್ಮ ಬೈಬಲ್, ಕುರಾನ್ ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.

    ಯಾವ ಜನ ಹಿಂದುಳಿದಿದ್ದಾರೆ. ಅವರಿಗೆ ಕಾರ್ಯಕ್ರಮ ಕೊಟ್ಟು ಸಮಾಜದ ಮುನ್ನೆಲೆಗೆ ತರುತ್ತೇವೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.  ಶ್ರಮಪಟ್ಟು ಈ ಕಾರ್ಯಕ್ರಮ ರೂಪಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸಿಇಒ ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜಾ, ಎಸ್‌.ಪಿ. ಅಶೋಕ್ ಅವರಿಗೆ ವಿಶೇಷ ಅಭಿನಂದನೆಗಳನ್ನ ತಿಳಿಸಿದರು.

    ಕೇಂದ್ರ ಸಚಿವರಾದ ವಿ.ಸೋಮಣ್ಣ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ ಗೌಡ, ಡಾ.ಹೆಚ್.ಡಿ.ರಂಗನಾಥ್, ಹೆಚ್.ವಿ.ವೆಂಕಟೇಶ್, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಸಿ.ವೇಣುಗೋಪಾಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ ಅವರು ಹಾಗೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾಡಳಿತ, ಜಿಲ್ಲಾ‌ ಪಂಚಾಯತ್, ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!

    October 21, 2025

    ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

    October 21, 2025

    ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತದಿಂದ ಮಾಜಿ ಅಧ್ಯಕ್ಷ ಸಾವು

    October 21, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!

    October 21, 2025

    ಬೆಂಗಳೂರು: ದೀಪಾವಳಿ ಹಿನ್ನೆಲೆ ಪಟಾಕಿ ಸಿಡಿಸಲು ಹೋಗಿ ಅನಾಹುತಕ್ಕೆ ಸಿಲುಕಿದ ಒಟ್ಟು 20 ಪ್ರಕರಣಗಳು ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿವೆ. ನಾರಾಯಣ…

    ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

    October 21, 2025

    ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತದಿಂದ ಮಾಜಿ ಅಧ್ಯಕ್ಷ ಸಾವು

    October 21, 2025

    ಕರ್ನಾಟಕ ಸಂಪನ್ಮೂಲ ಹೈಕಮಾಂಡ್ ಗೆ ಅರ್ಪಿಸಿದ ಕೀರ್ತಿ ಬಿಜೆಪಿಯದ್ದು: ಸಚಿವ ಪ್ರಿಯಾಂಕ್ ಖರ್ಗೆ

    October 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.