ಕೊಡಗು: ಜಿಲ್ಲೆಯ ಸೋಮವಾರಪೇಟೆಯ ಸುವಿದ್ ಲಾಡ್ಜ್ ನಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತೆಲಂಗಾಣದ ರಾಜು (55) ಮತ್ತು ಸ್ವಾತಿ (53) ನೇಣಿಗೆ ಶರಣಾದ ದಂಪತಿಗಳಾಗಿದ್ದಾರೆ.
ಎರಡೂವರೆ ತಿಂಗಳಿಂದ ಲಾಡ್ಜ್ ನಲ್ಲಿದ್ದ ದಂಪತಿ, ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಕಂಡುಬಂದಿದೆ. ಎರಡೂವರೆ ತಿಂಗಳಿಂದ ನಿತ್ಯವೂ ಲಾಡ್ಜ್ ಬಿಲ್ ಪಾವತಿಸುತ್ತಿದ್ದ ದಂಪತಿ, ಏನೂ ಕೆಲಸ ಮಾಡದೇ ಸುತ್ತಾಡಿಕೊಂಡಿದ್ದರು ಎನ್ನಲಾಗಿದೆ.
ಹಣಕಾಸಿನ ಸಮಸ್ಯೆಯಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೋಮವಾರಪೇಟೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296