nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    • ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣದ ಉದ್ದೇಶದಿಂದ ಲ್ಯಾಪ್ ಟಾಪ್ ವಿತರಣೆ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುಷ್ಟರ ಸಹವಾಸದ ಪರಿಣಾಮ
    ಲೇಖನ March 30, 2025

    ದುಷ್ಟರ ಸಹವಾಸದ ಪರಿಣಾಮ

    By adminMarch 30, 2025No Comments3 Mins Read
    fox and donkey

    ಒಂದು ಊರಿನಲ್ಲಿ ಒಬ್ಬ ಅಗಸ ಒಂದು ಕತ್ತೆ ಸಾಕಿದ್ದನು.  ಅದನ್ನು ಬಟ್ಟೆಗಳನ್ನು ಹೇರಿಕೊಂಡು ನದಿಗೆ ಹೋಗಿ ಒಗೆದು, ಒಣಗಿಸಿ ಮತ್ತೆ ಹೇರಿಕೊಂಡು ಊರಿಗೆ ಬರಲು ಉಪಯೋಗಿಸುತ್ತಿದ್ದನು.

    ದಿನಾಲೂ ಬಟ್ಟೆತೂಕ ಹೊರುವುದೇ ಅದರ ಕಾಯಕವಾಗಿತ್ತು. ಒಂದು ದಿನ ರಾತ್ರಿ ಕತ್ತೆ ಮಲಗಿಕೊಂಡು ಹೀಗೆ ಯೋಚಿಸುತ್ತಿತ್ತು. ಈ ಅಗಸ ನನಗೆ ದಿನಾಲೂ ತೂಕ ಹೊರಿಸುತ್ತಾನೆ, ನನಗೂ ತೂಕ ಹೊತ್ತೂ ಹೊತ್ತೂ ಸಾಕಾಗಿ ಹೋಗಿದೆ. ಹೇಗಾದರೂ ಮಾಡಿ ಇವನಿಂದ ತಪ್ಪಿಸಿಕೊಂಡು ಹೋಗಬೇಕಲ್ಲ, ನಾನು ಸ್ವತಂತ್ರ್ಯವಾಗಿ ಬದುಕಬೇಕು ಎಂದುಕೊಂಡು ಸಮಯಕ್ಕಾಗಿ ಕಾಯುತ್ತಿತ್ತು. ಒಂದು ದಿನ ಅಗಸನನ್ನು ನದಿ ಬಳಿ ಬಿಟ್ಟು ಮೇಯಲು ಸ್ವಲ್ಪದೂರವಿದ್ದ ಕಾಡಿಗೆ ಹೋಯಿತು ಅದರ ಎದುರು ನರಿಯೊಂದು ಬಂದಿತು. ನರಿಯನ್ನು ನೋಡಿ ಕತ್ತೆ ಇದರ ಉಪಾಯ ಪಡೆದರೆ ಹೇಗೆ ಎಂದುಕೊಂಡು ನರಿಯನ್ನು ಕರೆದು ತನ್ನ ಕಷ್ಟವನ್ನೆಲ್ಲಾ ಹೇಳಿಕೊಂಡು ಒಂದು ಉಪಾಯ ನೀಡುವಂತೆ ಕೇಳಿಕೊಂಡಿತು.


    Provided by

    ನರಿಗೆ ಹಿಂದೆ ಚಿರತೆಯೊಂದು ತನಗಿಷ್ಟವಾದ ಊರಿನ ಕತ್ತೆಯೊಂದನ್ನು ಊಟಕ್ಕಾಗಿ ತಂದು ಕೊಟ್ಟರೆ ನರಿಗೆ ಪ್ರತಿಯಾಗಿ ನರಿ ಕೇಳಿದ ಬೇಟೆಯೊಂದನ್ನು ಮಾಡಿ ಕೊಡುವ ಮಾತು ಕೊಟ್ಟಿತ್ತು, ಇದನ್ನು ಜ್ಞಾಪಿಸಿಕೊಂಡ ನರಿಯು ಈ ಸಂದರ್ಭ ಉಪಯೋಗಿಸಿಕೊಳ್ಳಬೇಕೆಂದು ಹೀಗೆ ಹೇಳಿತು. ನೋಡು ಇಂದು ರಾತ್ರಿ ನಾನು ನೀನಿರುವಲ್ಲಿಗೆ ಬಂದು ನಿನ್ನನ್ನು ಕರೆದುಕೊಂಡು ಹೋಗುತ್ತೇನೆ, ವಿಶಾಲ ಹುಲ್ಲುಗಾವಲನ್ನು ನಿನಗೆ ಕಾಡಿನಲ್ಲಿ ತೋರಿಸುತ್ತೇನೆ ನೀನು ಆರಾಮವಾಗಿ ಎಷ್ಟುಬೇಕಾದರೂ ತಿಂದುಕೊಂಡು ಇರಬಹುದು, ಅಲ್ಲಿ ಯಾರೂ ನಿನ್ನನ್ನು ಕೇಳುವವರಿಲ್ಲ, ಪಾಪ ನಿನ್ನನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ, ನೀನು ಎಷ್ಟೊಂದು ಸೊರಗಿ ಹೋಗಿದ್ದಿ ಎಂದಾಗ ಸಂತೋಷಗೊಂಡ ಕತ್ತೆಯು ಹಾಗೇ ಆಗಲೀ ನೀನು ಬರುವುದನ್ನೇ ಎದುರು ನೋಡುತ್ತಿರುತ್ತೇನೆ ಎಂದು ಹೇಳಿ ನದಿಯತ್ತ ಹೊರಟಿತು.

    ಇದನ್ನೆಲ್ಲಾ ದೂರದಿಂದಲೇ ನೋಡುತ್ತಿದ್ದ ಕಾಡು ನಾಯಿಯೊಂದು ಕತ್ತೆಯ ಹತ್ತಿರ ಬಂದು ನೋಡು ಆ ನರಿಯನ್ನು ನೀನು ಎಂದಿಗೂ ನಂಬಬೇಡ, ಅದು ಮೋಸಗಾರ ಈಗಲೇ ನನ್ನ ಜೊತೆ ಬಂದುಬಿಡು ಕತ್ತೆಗಳಿರುವ ಗುಂಪಿಗೆ ನಿನ್ನನ್ನು ಸುರಕ್ಷಿತವಾಗಿ ಸೇರಿಸುತ್ತೇನೆ ನನ್ನನ್ನು ನಂಬು ಎಂದಾಗ ಕತ್ತೆಯು ತನ್ನ ಮನದಲ್ಲಿ ಈ ಕಾಡು ನಾಯಿಯನ್ನು ನಂಬುವುದುಬೇಡ ತನ್ನ ಗುಂಪಿಗೆ ಕರೆದುಕೊಂಡು ಹೋಗಿ ನನ್ನ ಎಲ್ಲ ನಾಯಿಗಳ ಜೊತೆ ನನ್ನನ್ನೇ ತಿಂದುಬಿಟ್ಟರೆ ಏನುಮಾಡುವುದು, ಎಂದುಕೊಂಡು ಇಲ್ಲ ನಾನು ನಿನ್ನನ್ನು ನಂಬುವುದಿಲ್ಲ ನಾನು ಹೋಗುತ್ತೇನೆ ಎಂದಾಗ ನಾಯಿಯು ಕರೆದು ಬುದ್ಧಿಹೇಳಿದರೆ ಇಷ್ಟೇ ನಿನ್ನ ಹಣೆಬರಹ ಏನಾದರೂ ಮಾಡಿಕೊ ಎಂದುಕೊಳ್ಳುತ್ತಾ ಅಲ್ಲಿಂದ ಹೊರಟುಹೋಯಿತು.

    ಅಂದು ರಾತ್ರಿ ಇತ್ತ ನರಿಯು ಚಿರತೆ ಬಳಿ ಹೋಗಿ ಇಂದು ರಾತ್ರಿ ನಿನಗೆ ಊರಕತ್ತೆ ತಂದುಕೊಡುವುದಾಗಿ ಹೇಳಿ ಒಂದು ಮರೆಯಲ್ಲಿ ಕಾಯುತ್ತಿರುವಂತೆ ಹೇಳಿ ಊರಿಗೆ ಬಂದಿತು ಮತ್ತು ಕತ್ತೆ ಇರುವಲ್ಲಿಗೆ ಹೋಗಿ ಅದರ ಹಗ್ಗವನ್ನು ಬಿಡಿಸಿ ಅಲ್ಲಿಂದ ಕಾಡಿಗೆ ಕರೆದುಕೊಂಡು ಹೋಯಿತು. ಕತ್ತೆಯು ತನಗೆ ಸ್ವತಂತ್ರ ಸಿಕ್ಕ ಖುಷಿಯಲ್ಲಿ ಇನ್ನು ಆನಂದದಿಂದ ಕಾಡಿನಲ್ಲಿ ಸ್ವಾತಂತ್ರ್ಯವಾಗಿ ಅಡ್ಡಾಡಿಕೊಂಡು ಇರಬಹುದು ಎಂದು ಮನಸಿನಲ್ಲಿ ಕನಸು ಕಾಣುತ್ತಾ ಬರುತ್ತಿತ್ತು, ಆದರೆ ಮರೆಯಲ್ಲಿ ಕಾಯುತ್ತಿದ್ದ ಚಿರತೆಯು ನರಿಯ ಜೊತೆ ಕತ್ತೆ ಬರುವುದನ್ನು ದೂರದಿಂದಲೇ ನೋಡಿ ಮರೆಯಲ್ಲಿ ನಿಂತು ಹತ್ತಿರ ಬರುತ್ತಿದ್ದಂತೆ ಒಮ್ಮಿಂದೊಮ್ಮೆ ಚಂಗನೆ ಕತ್ತೆಯ ಮೇಲೆ ಎರಗಿ ಕುತ್ತಿಗೆಗೆ ಬಾಯಿಹಾಕಿತು. ಇದ್ದಕ್ಕಿದ್ದಂತೆ ಆದ ತನ್ನ ಸ್ಥಿತಿಗೆ ನೊಂದ ಕತ್ತೆಯು ಈ ನರಿಯು ತನಗೆ ಮೋಸ ಎಂದು ಆಗ ತಿಳಿಯಿತು, ನಾನು ಆ ಕಾಡು ನಾಯಿಯ ಮಾತು ಕೇಳಬೇಕಿತ್ತು. ನಾನು ಒಳ್ಳೆಯವರ ಸಹವಾಸ ಮಾಡಿದ್ದರೆ ತನಗೆ ಇಂತಹ ದುರ್ಗತಿ ಬರುತ್ತಿರಲಿಲ್ಲ ಎಂದು ನೋವಿನಿಂದ ಚೀರಾಡಿತು.

    ನೀತಿ: ತಮ್ಮ ಸ್ವಾರ್ಥಕ್ಕಾಗಿ ಬೇರೆಯವರನ್ನು ಬಲಿಕೊಡುವವರ ಸಂಖ್ಯೆಯೇ ಜಾಸ್ತಿ.

    venugopal
    ವೇಣುಗೋಪಾಲ್ ತುಮಕೂರು

    ಸಂಪಾದಕರ ನುಡಿ

    ನಮಸ್ಕಾರ ಪ್ರೀತಿಪಾತ್ರ ಓದುಗರೆ,

    ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಯಾರು ಜೊತೆಗೂಡುತ್ತೇವೆ, ಅವರಿಂದ ನಾವು ಯಾವ ರೀತಿಯ ಪ್ರಭಾವವನ್ನು ಹೊಂದುತ್ತೇವೆ ಎಂಬುದು ಬಹಳ ಮುಖ್ಯವಾಗಿದೆ. “ದುಷ್ಟರ ಸಹವಾಸದ ಪರಿಣಾಮ” ಎಂಬ ಈ ಕಥೆ, ಮೋಸಗಾರರ ಮಾತುಗಳನ್ನು ನಂಬಿದಾಗ ಹೇಗೆ  ಎದುರಾಗಬಹುದು ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ.

    ಈ ಕಥೆಯಲ್ಲಿ ಕತ್ತೆಯು ತನ್ನ ಸ್ವಾತಂತ್ರ್ಯವನ್ನು ಹುಡುಕುವ ಪ್ರಯತ್ನದಲ್ಲಿ ಮೋಸಗಾರ ನರಿಯ ಮಾತು ನಂಬಿದ ಪರಿಣಾಮ ದುರಂತ ಎದುರಿಸುತ್ತದೆ. ಆದರೆ, ಅದನ್ನು ಎಚ್ಚರಿಸುವ ನಾಯಿ ಮಾತುಗಳನ್ನು ಮುಕ್ತಾಯವಾಗಿ ಕಡೆಗಣಿಸುತ್ತದೆ. ನಮ್ಮ ಜೀವನದಲ್ಲಿಯೂ ಇದೇ ಪರಿ, ಸುಳ್ಳುಮಾತುಗಳಿಗಿಂತ ನಿಜವಾದ ಸಹಾಯ ಮತ್ತು ಸಲಹೆಯನ್ನು ಗುರುತಿಸುವ ಜಾಣ್ಮೆ ಅವಶ್ಯಕ.

    ನೀತಿ ಕಥೆಗಳು ನಮ್ಮ ಜೀವನದ ಮಾರ್ಗದರ್ಶನಕ್ಕೆ ಸಹಾಯಕವಾಗುತ್ತವೆ. ಈ ಕಥೆಯಿಂದ “ಉತ್ತಮ ಜನರ ಸಂಗತಿಯಲ್ಲಿ ಮುಂದುವರಿದರೆ ಪ್ರಗತಿ, ಆದರೆ ದುಷ್ಟರ ಸಹವಾಸದಲ್ಲಿ ನಾಶ” ಎಂಬ ಮಹತ್ವದ ಪಾಠವನ್ನು ಕಲಿಯಬಹುದು.

    ನಮ್ಮ “ನಮ್ಮ ತುಮಕೂರು” ಓದುಗರಿಗೆ ಸದಾ ಪ್ರಾಮಾಣಿಕ, ಪ್ರಭಾವಶಾಲಿ ಮತ್ತು ಜೀವನೋಪಾಯ ಪಾಠ ನೀಡುವ ಉದಾಹರಣೆಗಳನ್ನು ನೀಡಲು ನಾವು ಸದಾ ಬದ್ಧ. ಈ ರೀತಿಯ ಹಲವಾರು ಪಾಠಪೂರಿತ ಕಥೆಗಳಿಗಾಗಿ ನಮ್ಮೊಂದಿಗೆ ಇರಿ!

    — ಜಿ.ಎಲ್.ನಟರಾಜು, ಮುಖ್ಯ ಸಂಪಾದಕರು, ನಮ್ಮ ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ನಿಜವಾದ ದಾನಿ

    April 4, 2025

    ರಾಜನ ಹಿಂದಿನ ಜನುಮ

    April 2, 2025

    ಏಪ್ರಿಲ್ 1: ಪ್ರತಿ ನಿತ್ಯವೂ ನಾವು ಫೂಲ್ ಗಳಾಗುತ್ತೇವೆ

    April 1, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    ತುಮಕೂರು: ಹುಳಿಯಾರಿನ ವಿಜಯ ಕರ್ನಾಟಕ ವರದಿಗಾರ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ…

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.