ಕಾಡುಗಳ್ಳ ವೀರಪ್ಪನ್ ನನ್ನು ಕೊಂದಿದ್ದ ಎನ್ ಕೌಂಟರ್ ಸ್ಪೆಷಲಿಸ್ಟ್ ಅಧಿಕಾರಿ ವೆಲ್ಲಾದುರೈ ಸಸ್ಪೆಂಡ್ ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ. ಹೌದು, ಕಾಡುಗಳ್ಳ ವೀರಪ್ಪನ್ ನನ್ನು ಹೊಡೆದುರುಳಿಸಿದ ವಿಶೇಷ ಕಾರ್ಯಪಡೆಯಲ್ಲಿ ತಮಿಳುನಾಡು ಪೊಲೀಸ್ ಹೆಚ್ಚುವರಿ ಅಧೀಕ್ಷಕ ಎಸ್ ವೆಲ್ಲಾದುರೈ ಅವರ ನಿವೃತ್ತಿಗೆ ಒಂದು ದಿನ ಮೊದಲು ಅಮಾನತು ಮಾಡಲಾಗಿದೆ.
ಈಗಾಗಲೇ ಎನ್ ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿದ್ದ ವೆಲ್ಲಾದುರೈ ಅವರನ್ನು ತಮಿಳುನಾಡು ಗೃಹ ಇಲಾಖೆ ಅಮಾನತುಗೊಳಿಸಿದೆ. ಮೂಲಗಳ ಪ್ರಕಾರ, 2013ರಲ್ಲಿ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ‘ಕೊಕ್ಕಿ’ ಕುಮಾರ್ ಅಲಿಯಾಸ್ ರಾಮು ಎಂಬಾತನ ಲಾಕಪ್ ಡೆತ್ ಪ್ರಕರಣದಲ್ಲಿ ವೆಲ್ಲಾದುರೈ ಭಾಗಿಯಾಗಿದ್ದರು ಎಂದು ಆರೋಪಿಸಿ ಅಮಾನತುಗೊಳಿಸಲಾಗಿತ್ತು.
ಆದರೆ, ವೆಲ್ಲಾದುರೈ ಅಮಾನತು ಆಗಿರುವ ಹಿನ್ನೆಲೆ ಅಪಾರ ವಿರೋಧ ವ್ಯಕ್ತವಾದ ಕಾರಣ ಶುಕ್ರವಾರದ ನಂತರದ ಆದೇಶದಲ್ಲಿ ಇಲಾಖೆ ಕೆಲವು ಷರತ್ತುಗಳಿಗೆ ಒಳಪಟ್ಟು ದಂಡ ವಿಧಿಸಿ ನಿವೃತ್ತಿ ಅಮಾನತು ಹಿಂಪಡೆದಿದೆ. ಹೌದು, ವೆಲ್ಲಾದುರೈ ಅವರ ನಿವೃತ್ತಿ ಫಂಡ್ ನಲ್ಲಿ 5 ಲಕ್ಷ ರೂ. ಕಡಿತಗೊಳಿಸಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


