ಬೆಂಗಳೂರು: ಸಿದ್ದರಾಮಯ್ಯನವರ ಸರಕಾರ ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ ನಡೆಸಿದಂತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಮಾಧುಸ್ವಾಮಿ ಅವರ ಸಮಿತಿ ರಚಿಸಿ ಒಳ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡಿತ್ತು. ಅದನ್ನು ಕೂಡಲೇ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.
ಮಾಡದೆ ಇದ್ದಲ್ಲಿ ಆಗಸ್ಟ್ 1ರಿಂದ ನಾವು ರಾಜ್ಯದ ಉದ್ದಗಲಕ್ಕೂ ಹೋರಾಟ ಮಾಡುತ್ತೇವೆ. ರಾಜ್ಯ ಸರಕಾರದ ವಿರುದ್ಧ ಅಸಹಕಾರ ಚಳವಳಿ ಮಾಡಲು ತಯಾರಿದ್ದೇವೆ ಎಂದು ಎಚ್ಚರಿಸಿದರು.
ಅಸ್ಪಶ್ಯರು ತಮ್ಮ ಬದುಕಿಗಾಗಿ– ಉಳಿವಿಗಾಗಿ ದೊಡ್ಡ ಆಂದೋಲನ ಮಾಡಲು ಸಿದ್ಧರಿದ್ದೇವೆ ಎಂದು ಪ್ರಕಟಿಸಿದರು. ಇದೇ 31ರೊಳಗೆ ಜಾರಿ ಆಗದಿದ್ದರೆ 30 ಜಿಲ್ಲೆಗಳಲ್ಲೂ ಅಸಹಕಾರ ಚಳವಳಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡುವುದಾಗಿ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC