ವರದಿ: ಹಾದನೂರು ಚಂದ್ರ
ಸರಗೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿಕಡೆ ಕಾರ್ತಿಕ ಮಾಸದ ಹಿನ್ನೆಲೆಯಲ್ಲಿನ.16ರಿಂದ 18ರವರೆಗೆ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯಲಿದೆ. ಭಕ್ತರು, ಕಾಡಿಗೆ ಕಿಂಚಿತ್ತೂ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಿದ್ಧತೆ ಮುಜರಾಯಿ ಮತ್ತು ತಾಲೂಕು ಆಡಳಿತ ಮಾಡಲಾಗಿದೆ.
ಪ್ರತಿ ವರ್ಷದಂತೆ ದೇವಸ್ಥಾನದಲ್ಲಿಕಾರ್ತಿಕ ಮಾಸದಲ್ಲಿನಡೆಯುವ ಜಾತ್ರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ತಯಾರಿ ಮಾಡಿಕೊಳ್ಳುವಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ. ದೇವಸ್ಥಾನವನ್ನು ಸ್ವಚ್ಛಗೊಳಿಸುವುದು, ಸುಣ್ಣ–ಬಣ್ಣ ಬಳಿಯುವುದು, ತಳಿರು ತೋರಣ ಕಟ್ಟಿ ಅಲಂಕಾರ ಮಾಡುವುದು ಸೇರಿದಂತೆ ಕೊಂಡೋತ್ಸವ ನಡೆಯುವ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಆದೇಶ ನೀಡಲಾಗಿದೆ.
ಜಾತ್ರೆಯ ವಿವಿಧ ಕಾರ್ಯಕ್ರಮ:
ಶ್ರೀ ಕ್ಷೇತ್ರ ಬೇಲದಕುಪ್ಪೆ, ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವದಲ್ಲಿವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇರಲಿವೆ. ನ. 16ರಂದು ಆಲಯ ಪ್ರವೇಶ, ಗಣಪತಿ ಪೂಜೆ, ಹೋಮ-ಹವನ, ರುದ್ರಾಭಿಷೇಕ ಪಾರಾಯಣ, ನೈವೇದ್ಯ, ಮಹಾಮಂಗಳಾರತಿ, ಬ್ರಾಹ್ಮಿ ಮುಹೂರ್ತದಲ್ಲಿನವರತ್ನನ್ಯಾಸ, ಪ್ರಾಣಪ್ರತಿಷ್ಠೆ, ಪೂರ್ಣಾಹುತಿ ನಂತರ ಮಕರ ಲಗ್ನದಲ್ಲಿ ಮಹಾಮಂಗಳಾರತಿ, ರಾಜೋಪಚಾರ, ತೀರ್ಥ ಪ್ರಸಾದ ವಿನಿಯೋಗ ಇರಲಿದೆ.
ನ. 17ರಂದು ಸ್ವಾಮಿ ಅವರಿಗೆ ದೇವಸ್ಥಾನದ ಸಮೀಪದಲ್ಲಿರುವ ಕೆರೆಯಿಂದ ನಾನಾ ಪೂಜೆಗಳನ್ನು ಸಲ್ಲಿಸಿ, ಹಾಲು ಹರವಿ ಸೇವೆ ತೆಗೆದುಕೊಂಡು ದೇವರನ್ನು ಉದ್ಭವ ಸ್ಥಾನಕ್ಕೆ ಕರೆದೊಯ್ಯಲಾಗುವುದು. ವೀರಗಾಸೆ ಕುಣಿತ, ಸರಳ ವಾದ್ಯಗೋಷ್ಠಿ ಮೊಳಗಲಿವೆ. ಮಧ್ಯಾಹ್ನ 12ಕ್ಕೆ ಕೊಂಡೋತ್ಸವ ಇರಲಿದೆ. ಎಣ್ಣೆಮಜ್ಜನ ಮತ್ತು ಪ್ರಸಾದ ವಿನಿಯೋಗ ಇರಲಿದೆ. 18ಕ್ಕೆ ರುದ್ರಾಕ್ಷಿ ಮಂಟಪ, ಹುಲಿವಾಹನ, ನಂದಿಧ್ವಜದೊಂದಿಗೆ ರಥೋತ್ಸವ ಇರಲಿದೆ.
ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ:
ಜಾತ್ರಾ ಮಹೋತ್ಸವ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರಗೂರು ಪೊಲೀಸ್ ವೃತ್ತನಿರೀಕ್ಷಕ ಪ್ರಸನ್ನಕುಮಾರ್, ಉಪನಿರೀಕ್ಷಕ ಕಿರಣ್ ನೇತೃತ್ವದಲ್ಲಿಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನೇಮಿಸಿಕೊಳ್ಳುವಂತೆ ಸಭೆಯಲ್ಲಿ ತಿಳಿಸಲಾಗಿದೆ. 200ಕ್ಕೂ ಹೆಚ್ಚು ಸಾರಿಗೆ ಬಸ್ ವ್ಯವಸ್ಥೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಚೈನ್ ಗೇಟ್ ಬಳಿ ದೇವರ ಗೋಪುರ:
ಅರಣ್ಯದೊಳಗೆ ದೇವಸ್ಥಾನವಿರುವ ಕಾರಣ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿಚೈನ್ ಗೇಟ್ ಬಳಿ 8 ಎಕರೆಗೂ ಮೀರಿದ ಜಮೀನಿನನ್ನು ಸಮತಟ್ಟು ಮಾಡಲಾಗುವುದು. ಉಚಿತ ಆರೋಗ್ಯ ಸೇವೆ ನೀಡಲು ತಾತ್ಕಾಲಿಕ ಚಿಕಿತ್ಸಾ ಕೇಂದ್ರವನ್ನು ತೆರೆಯಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ಬರುವ ಭಕ್ತರಿಗೆ ಚನ್ನಗುಂಡಿ ಗ್ರಾಮಸ್ಥರು ಅನ್ನ ಸಂತರ್ಪಣೆ ಏರ್ಪಡಿಸಲಿದ್ದಾರೆ.
ಬೇಲದಕುಪ್ಪೆ ಮಹದೇಶ್ವರ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡಲು ಈಗಾಗಲೇ ಸಭೆ ನಡೆಸಲಾಗಿದ್ದು, ಕಾಡು, ಪ್ರಾಣಿಗಳಿಗೆ ತೊಂದರೆಯಾಗದಂತೆ ಕೊಂಡೋತ್ಸವ ಇರಲಿದೆ. ಹುಲಿ ದಾಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಭಕ್ತರು ಎಚ್ಚರಿಕೆಯಿಂದ ಜಾತ್ರೆ ನೋಡಿ ವಾಪಸಾಗಬೇಕು ಎಂಬುದು ಮನವಿ.
— ರಾಕೇಶ್ ಗೌಡ, ಪಾರುಪತ್ತೇದಾರ, ಬೇಲದಕುಪ್ಪೆ ದೇವಸ್ಥಾನ.
ಪ್ರತಿ ವರ್ಷದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೇಲದಕುಪ್ಪೆ ಶ್ರೀ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಭಕ್ತಾದಿಗಳು ಅನುಕೂಲವಾಗುವ ನಿಟ್ಟಿನಲ್ಲಿ ಬ್ಯಾರಿಕೇಡ್ ಹಾಗೂ ಪೋಲಿಸ್ ಸಿಬ್ಬಂದಿಗಳು ಆಯೋಜಿಸಿದ್ದು ಜಾತ್ರೆಗೆ ಬರುವ ಸಾರ್ವಜನಿಕರಿಗೆ ಕೊಂಡೋತ್ಸವ ಸಂದರ್ಭದಲ್ಲಿ ಹಿತಘಟನೆ ನಡೆದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಾತ್ರೆಗೆ ಬರುವ ಜನರಿಗೆ ಚೇನ್ ಗೇಟ್ ಬಳಿ ಪಾರ್ಕಿಂಗ್ ಮತ್ತು ತಿಂಡಿ ಅಂಗಡಿ ವ್ಯವಸ್ಥೆ ಮಾಡಲಾಗಿದೆ.— ಮೋಹನಕುಮಾರಿ, ಸರಗೂರು ತಹಶೀಲ್ದಾರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


