nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ: ಕೇಂದ್ರ ಸಚಿವ ಎ. ನಾರಾಯಣಸ್ವಾಮಿ
    ತುಮಕೂರು November 26, 2023

    ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ: ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

    By adminNovember 26, 2023No Comments2 Mins Read
    a narayana swamy

    ತುಮಕೂರು: ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಗೆ ಸಂಪುಟ ನಿರ್ಧಾರ ವಿಚಾರದಲ್ಲಿ ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ನವರು ಅನುಮತಿ ಕೇಳಿದ್ರು.‌ ಸರ್ಕಾರ ಅನುಮತಿ ನೀಡಿತ್ತು ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ತೀರ್ಪಾಗಲಿ ಎಂದರು.


    Provided by
    Provided by

    ನ್ಯಾಯಾಲಯದ ಮುಂದೆಯೇ ಕ್ಲೀನ್ ಚಿಟ್ ಪಡೆದು ಜನರ ಮುಂದೆ ಹೋಗಬೇಕಿತ್ತು. ಇದೊಂದು ನ್ಯಾಯಾಲಯಕ್ಕೆ ಸವಾಲ್ ಹಾಕಿದ ರೀತಿಯಲ್ಲಿದೆ ಎಂದರು.

    ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್. ಇಂತಹ ಪ್ರಕರಣಗಳನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವುದು ಸೂಕ್ತವಾಗಿರಲಿಲ್ಲ ಎಂದರು.

    ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವು ಖಂಡಿಸುತ್ತೇನೆ. ಒಂದು ಸಲ ಎಫ್.ಐಆರ್ ಆದ್ಮೇಲೆ ಚಾರ್ಜ್ ಶೀಟ್ ಕೊಟ್ಟರೆ ಬದಲಾವಣೆ ಮಾಡಲು ನ್ಯಾಯಾಧೀಶರ ಅನುಮತಿ ಪಡೆಯಬೇಕು ಎಂದರು.

    ಪ್ರಕರಣಗಳು ಒಂದು ಸಲ ಕೋರ್ಟ್ ಗೆ ಹೋದ್ರೆ ನ್ಯಾಯಾಧೀಶರೇ ತೀರ್ಮಾನ ತೆಗೆದುಕೊಳ್ಳಬೇಕು. ಕ್ಯಾಬಿನೆಟ್ ಗೆ ಯಾವುದೇ ಅಧಿಕಾರ ಇಲ್ಲ ಅನ್ನೋದು ನನ್ನ ಅಭಿಪ್ರಾಯ ಎಂದು ಹೇಳಿದರು.

    ಕಾನೂನಾತ್ಮಕವಾಗಿ ಪ್ರಕ್ರಿಯೆ ನಡೆದಿರಲಿಲ್ಲ ಎಂಬ ಕಾಂಗ್ರೆಸ್ ಸಮರ್ಥನೆ ವಿಚಾರ. ಇಷ್ಟು ದಿನ ಏನ್ ಮಾಡ್ತಿದ್ರಿ. ಸ್ಪೀಕರ್ ಅನುಮತಿ ಪಡೆದೆ ಅಥವಾ ಅಂದಿನ ಅಡ್ವಕೇಟ್ ಜನರಲ್ ಅಡ್ವರ್ಸ್ ರಿಪೋರ್ಟ್ ಇದ್ದಾಗಲೂ ಕೋರ್ಟ್ ಗೆ ಬಂದಿದೆ ಎಂದರು.

    ಡಿಕೆ ಶಿವಕುಮಾರ್ ಅವರ ವಿರುದ್ಧ ಅನೇಕ ಪ್ರಕರಣಗಳಿವೆ. ಇದನ್ನು ನ್ಯಾಯಾಲಯದಲ್ಲೇ ವಜಾ ಮಾಡಿಸಬಹುದಿತ್ತು. ರಾಜ್ಯ ಸರ್ಕಾರಕ್ಕೆ ನೀವೇ ಯಾಕೆ ಕಪ್ಪು ಚುಕ್ಕೆಯಿಟ್ರಿ ಎಂದರು.

    ಲೋಕಸಭೆ ಚುನಾವಣೆಗೂ ಮೊದಲೇ ಒಳ ಮೀಸಲಾತಿ ಆಗುತ್ತೆ. ರಾಜ್ಯ ಸರ್ಕಾರದ ಕೆಲಸ ಏನಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಒಳ ಮೀಸಲಾತಿ ಹೆಚ್ಚಳ ಮಾಡಿತ್ತು, ಅದು ಜಾರಿಯಾಗಿದೆ ಎಂದರು.

    ಬ್ಯಾಕ್ ಲಾಗ್ ಜಾರಿಯಾಗಿದೆ. ಕೆಪಿಎಸ್ಸಿ ಉದ್ಯೋಗದಲ್ಲಿ ಮೀಸಲಾತಿ ಘೋಷಣೆ ಮಾಡಬೇಕಿದೆ. ಒಳ ಮೀಸಲಾತಿಯಲ್ಲಿ ಒಂದು ಹಂತದಲ್ಲಿ ಗೆಲುವು ಸಾಧಿಸಿದ್ದೇವೆ ಎಂದು ತಿಳಿಸಿದರು.

    ಅರುಣ್ ಮಿಶ್ರ ತೀರ್ಪು ಅನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಅರುಣ್ ಮಿಶ್ರಾ ರೆಕಮಂಡೇಷನ್ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆ ಆಗುತ್ತೆ. ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ ಎಂದರು.

    ಒಳ ಮೀಸಲಾತಿ ಹೋರಾಟಗಾರರಿಗೆ ಅದು ಮೊದಲನೇ ಗೆಲವು.ಅಟಾರ್ನಿ ಜನರಲ್ ಅವರೇ ಒಳ ಮೀಸಲಾತಿ ಪರವಾಗಿ ಬಂದಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನಿ, ಅಮಿತ್ ಷಾ ಒಪ್ಪಿಕೊಂಡಿದ್ದಾರೆ ಎಂದರು.

    ಇಡೀ ದೇಶದಲ್ಲಿ ಒಳ ಮೀಸಲಾತಿಗೆ ನ್ಯಾಯ ಸಿಗಲಿದೆ ಎಂದರು. ಜಾತಿಗಣತಿ ವಿಚಾರದಲ್ಲಿ  ಜಾತಿಗಣತಿ ಅವಶ್ಯಕತೆಯಿದೆ. ಜಾತಿಗಣತಿ ಜೊತೆಗೆ ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಲಾಗಿತ್ತು. ಸಿಎಂಗೆ ಬದ್ಧತೆಯಿರಬೇಕು ಎಂದರು.

    ಚುನಾವಣೆಗೆ ಮೊದಲು ಹೇಳಿದ್ದರು. ಜಾತಿ ಗಣತಿಗೆ  1160 ಕೋಟಿ ಖರ್ಚು ಮಾಡಿದ್ರು. ಪದೇ ಪದೇ ಮಾಧ್ಯಮದಲ್ಲಿ ನಾನು ಮಾಡ್ತೀನಿ ಅಂತ ಹೇಳೋದು ಶೋಭೆ ತರಲ್ಲ. ವರದಿ ಮಾಡಿ ಪ್ರಿಂಟ್ ಹಾಕಿ, ಸಹಿ ಹಾಕಿ ಎಲ್ಲಾ ಅಗಿದೆ ಎಂದರು.

    ಸಹಿ ಹಾಕಿಲ್ಲ ಅನ್ನೋದು ಒಂದು ಭಾಗ, ಮೂಲ ಪ್ರತಿ ನಾಪತ್ತೆಯಾಗಿದೆ ಅಂತ ಚರ್ಚೆ ಆಗುತ್ತಿದೆ. ಟ್ರಜರಿಯಲ್ಲಿ ಆಯ್ತಾ, ಕಚೇರಿಯಲ್ಲಿ ನಾಪತ್ತೆ ಆಯ್ತಾ.  ಯಾರ ಕಸ್ಟಡಿಯಲ್ಲಿ ಇದ್ದಾಗ ಮೂಲ ಪ್ರತಿ ನಾಪತ್ತೆ ಆಯ್ತು , ಅನ್ನೋ ಬಗ್ಗೆ ತನಿಖೆಗೆ ಆದೇಶ ಮಾಡಲಿಲ್ಲ ಎಂದರು.

    ದೂರು, ಎಫ್.ಐ.ಆರ್ ಆಗಲಿಲ್ಲ. ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಕೆಲಸ ಸಿಎಂ ಮಾಡ್ತಿದ್ದಾರೆ. ವರದಿ ಹೊರ ಬಂದರೆ ಏನು ಆಗಲ್ಲ. 2011ರ ಬಳಿಕ ಜನಗಣತಿ ಆಗಿಲ್ಲ ಎಂದರು.

    ಪ್ರತಿ ಕುಟುಂಬದಲ್ಲಿ ಆಧಾರ್ ಕಾರ್ಡ್ ಯಿದೆ. ರಾಜ್ಯ ಜನತೆಯ ಮಾಹಿತಿ ಪಡೆಯಲು ಯಾವುದೇ ಗೊಂದಲವಿಲ್ಲ. ವರದಿಗಳು ಸದನದಲ್ಲಿ ಚರ್ಚೆ ಆಗಬೇಕು.ತಪ್ಪಾಗಿರುವ ಬಗ್ಗೆ ಸದನದಲ್ಲಿ ಚರ್ಚೆಯಾಗಲಿ ಎಂದರು.

    admin
    • Website

    Related Posts

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ…

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.