nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    ಜಿಲ್ಲಾ ಸುದ್ದಿ June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    By adminJune 29, 2025No Comments2 Mins Read
    sagare

    ಸರಗೂರು:  ಶಾಲೆಯ ಹಳೆಯ ನೆನಪುಗಳು ಪರಿಶ್ರಮ, ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ ಎಂದು  ರಾಷ್ಟ್ರೀಯ  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು, ಸಮಾಜ ಸೇವಕರೂ ಆದ ಸೋಮಣ್ಣ ಅಭಿಪ್ರಾಯಪಟ್ಟರು.

    ತಾಲೂಕಿನ ಸಾಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಗರೆ ಗ್ರಾಮ ಪ್ರೌಢಶಾಲೆಯಲ್ಲಿ  ಶನಿವಾರದಂದು ಗುರುವಂದನೆ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಗುರುವಂದನಾ,  ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.


    Provided by

    ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಅಂದಿನಿಂದ ಇಲ್ಲಿಯವರೆಗೂ ಸೇವೆ ಸಲ್ಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ವಿದ್ಯಾರ್ಥಿ ಜೀವನದ ನೂರಾರು ನೆನಪುಗಳು ಕಣ್ಣು ಮುಂದೆ ಬರುವಂತೆ ಮಾಡಿದೆ. ಗುರುವಿನ ಶ್ರೇಷ್ಠತೆ ವಿದ್ಯಾರ್ಥಿ ಜೀವನದಲ್ಲಿ ತಿಳಿಯುವುದಕ್ಕಿಂತ ವೃತ್ತಿ ಜೀವನದ ಪಯಣದಲ್ಲಿ ತಿಳಿಯುವುದು ಹೆಚ್ಚು ಎಂದರು.

    ಗುರುಗಳ ಮಾರ್ಗದರ್ಶನದಲ್ಲಿ ನಾವು ವಿದ್ಯೆ, ಸಂಸ್ಕಾರವನ್ನು ಕಲಿತು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವುದರಿಂದ ಸಮಾಜದಲ್ಲಿ ದೊಡ್ಡಮಟ್ಟದಲ್ಲಿ ಬೆಳೆದಿದ್ದೇವೆ. ಗುರುಗಳು ನಮ್ಮ ಪಾಲಿಗೆ ದೇವರಿದ್ದಂತೆ. ಇಂದಿನ ಯುವ ಪೀಳಿಗೆ ಗುರುಗಳ ಮಾರ್ಗದಲ್ಲಿ ನಡೆದಾಗ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

    ನಿವೃತ್ತ ಶಿಕ್ಷಣಾಧಿಕಾರಿ ಎಸ್.ಪಿ. ಶಿವಕುಮಾರ್ ರವರು ದಿಕ್ಸೂಚಿ ಭಾಷಣ ಮಾತನಾಡಿ, ನಾವು ಇಂದು ಏನಾದರೂ ಗಳಿಸಿದ್ದರೆ ಅದೆಲ್ಲವೂ ಈ ಸಮಾಜದಿಂದ ಗಳಿಸಿದ್ದೇವೆ. ಹಾಗಾಗಿ ಈ ಸಮಾಜದಿಂದ ಪಡೆದದ್ದನ್ನು ನಾವು ಮತ್ತೆ ಸಮಾಜಕ್ಕೆ ವಾಪಸ್ ನೀಡಬೇಕಾಗುತ್ತದೆ. ಆ ಮೂಲಕ ಅಕ್ಷರ ಕಲಿಸಿದ ಗುರುಗಳು, ಜನ್ಮ ಕೊಟ್ಟ ಹೆತ್ತವರು, ಆಡಿ ಬೆಳೆದ ಭೂಮಿಯ ಋಣವನ್ನು ತೀರಿಸಲೇಬೇಕು. ಸುಮಾರು 30 ವರ್ಷ ನಂತರವೂ ವಿದ್ಯೆ ಕಲಿಸಿದ ಗುರುವಿನ ಮಹತ್ವ ಅರಿತು, ಅವರಿಗೆ ವಂದಿಸುವ ಕಾರ್ಯ ಮಾದರಿಯಾಗಿದೆ. ಉಜ್ವಲ ಜೀವನ ನಿರ್ಮಿಸಬೇಕಾದರೆ ಗುರುವಿನ ಉತ್ತಮ ಮಾರ್ಗದರ್ಶನ ಅತ್ಯವಶ್ಯಕವಾಗಿದೆ’ ಎಂದರು.

    ಗ್ರಾಮದ ಹಿರಿಯ ವಿದ್ಯಾರ್ಥಿ & ಹುಣಸೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹದೇವ್  ಸ್ವಾಗತ ಭಾಷಣ ಮಾತನಾಡಿ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರನ್ನೂ ಒಟ್ಟುಗೂಡಿಸುವ, ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ’ ಎಂದರು.

    ಈ ಸಂದರ್ಭದಲ್ಲಿ ಸಾಗರೆ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿದ ಸುಮಾರು 70 ಶಿಕ್ಷಕರಿಗೆ ಗುರುಗಳನ್ನು ಆಹ್ವಾನಿಸಿ ಗೌರವ ಸನ್ಮಾನ ನೆರವೇರಿಸಲಾಯಿತು.

    ಅಂತಾರಾಷ್ಟ್ರೀಯ ಖ್ಯಾತಿಯ ಜನಪದ  ಗಾಯಕರಾದ ಅಮ್ಮ ರಾಮಚಂದ್ರ ರವರು ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.  ಜೊತೆಗೆ ಸಾಗರೆ ಗ್ರಾಮದ ಕವಿ ಸೂರಿ & ತಂಡದವರಿಂದ ಗುರುಗಳ ಶ್ರೇಷ್ಠತೆ ಕುರಿತ ಹಾಡುಗಳ ಗಾಯನ‌ ಜರುಗಿತು.

    ರಾಘವೇಂದ್ರ ಎಸ್. ಆರ್. ವಂದನಾರ್ಪಣೆ ನೆರವೇರಿಸಿದರು. ಸ್ನೇಹ ಸಮ್ಮಿಲನ ಮತ್ತು ಗೀತ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

    ಈ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ವಸಂತ ಸಣ್ಣಪ್ಪ ನಾಯಕ, ಶಿಕ್ಷಕರ ವೃಂದ ಉಪನ್ಯಾಸಕ ಅನೀಲ್ ಕುಮಾರ್ ಕೆ. ಬೀದರ್, ಶಿಕ್ಷಕ ರವಿಂದ್ರ ಸಿ ವಿ, ದುಂಡಪ್ಪ, ನಿಂಗಣ್ಣ, ತ್ರೀವೇಣಿ, ಎಂ.ಬಿ.ಸೂರ್ಯವಂತಿ, ಚನ್ನಮಲ್ಲಸ್ವಾಮಿ, ಜಯರಾಂ, ದೇವರಾಜು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಇನ್ನೂ ಶಿಕ್ಷಕರು ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ

    June 28, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.