ತುಮಕೂರು: ವಿರಾಜಪೇಟೆ ಭಾಗದಲ್ಲಿ ಮೂರು ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಗಾಯಗೊಂಡವರನ್ನು ಮೈಸೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಮಧುಗಿರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ ಮೂಲಕ ಈ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು.
ರಾಮನ ಹೆಸರನ್ನು ಹೇಳುವವರ ಮೇಲೆ ಹಲ್ಲೆ ಮಾಡುವುದು, ತೆಂಗಿನ ತೋಟಕ್ಕೆ ಬೆಂಕಿ ಇಡುವುದು ಇಂತಹ ಹಳೆ ಚಾಳಿ ಕೆಲಸಗಳನ್ನು ಕಾಂಗ್ರೆಸ್ ಪ್ರಾರಂಭ ಮಾಡಿದೆ ಎಂದು ದೂರಿದರು.
ಜಾಹೀರಾತುಗಳಲ್ಲಿ ಕಾಂಗ್ರೆಸ್ ಪಕ್ಷವು ಕೀಳು ಅಭಿರುಚಿಯೊಂದಿಗೆ ಚೊಂಬಿನ ಚಿತ್ರಗಳನ್ನು ತೋರಿಸುತ್ತಿದೆ. ಆದರೆ ಅವರು ರಾಜ್ಯವನ್ನು ಲೂಟಿ ಮಾಡುತ್ತಿರುವುದನ್ನು ಕೂಡ ತೋರಿಸಲಿ ಎಂದು ಟೀಕಿಸಿದರು.
ಕರ್ನಾಟಕದಲ್ಲಿ ರಾಜ್ಯದ ಜನರು ಕಟ್ಟಿರುವ ತೆರಿಗೆ ಹಣವನ್ನು ಕಾಂಗ್ರೆಸ್ ನವರು ಲೂಟಿ ಮಾಡುತ್ತಿದ್ದಾರೆ ಅಂತಹ ವ್ಯಂಗ್ಯ ಚಿತ್ರವನ್ನು ತೋರಿಸಲಿ ಎಂದು ಹೇಳಿದರು.
ಇನ್ನು ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಬಗ್ಗೆ ಸಾಕಷ್ಟು ನೋಡಿದ್ದೇನೆ ಎಂದು ಲಘುವಾಗಿ ಮಾತನಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296