nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌

    July 13, 2026

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026
    Facebook Twitter Instagram
    ಟ್ರೆಂಡಿಂಗ್
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    • ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
    • ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ತುಮಕೂರು ಫಲಶೃತಿ: ವರದಿ ಪ್ರಕಟಗೊಂಡು 12 ಗಂಟೆಗಳಲ್ಲೇ ಗ್ರಾಮಸ್ಥರಿಗೆ ಸಿಕ್ತು ಶಾಶ್ವತ ಕುಡಿಯುವ ನೀರು
    ಜಿಲ್ಲಾ ಸುದ್ದಿ January 8, 2024

    ನಮ್ಮ ತುಮಕೂರು ಫಲಶೃತಿ: ವರದಿ ಪ್ರಕಟಗೊಂಡು 12 ಗಂಟೆಗಳಲ್ಲೇ ಗ್ರಾಮಸ್ಥರಿಗೆ ಸಿಕ್ತು ಶಾಶ್ವತ ಕುಡಿಯುವ ನೀರು

    By adminJanuary 8, 2024No Comments2 Mins Read
    korategere

    ಹಂಚಿಮಾರನಹಳ್ಳಿ ಗ್ರಾಮಸ್ಥರು ಶಾಶ್ವತ ಕುಡಿಯುವ ನೀರಿಗಾಗಿ ಕೊರಟಗೆರೆ ಇ ಓ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಬಗ್ಗೆ ನಮ್ಮತುಮಕೂರು ವಾಹಿನಿ ವರದಿ ಪ್ರಕಟಿಸಿತ್ತು. ಈ ವರದಿ ಪ್ರಕಟಗೊಂಡು 12 ಗಂಟೆಗಳೊಳಗೆ ಬೋರ್ ವೆಲ್ ಕೊರೆಸಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ.

    ತಾಲ್ಲೂಕು ಪಂಚಾಯಿತಿ ಇ ಓ ಅಪೂರ್ವ ಸಿ. ಅವರು, ನಮ್ಮ ತುಮಕೂರು ವಾಹಿನಿಯ ವರದಿಗೆ ಸ್ಪಂದಿಸಿ ಹಂಚಿಮಾರನಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದಾರೆ. ಶಾಶ್ವತ ಕುಡಿಯುವ ನೀರಿಗಾಗಿ ಸುಮಾರು 8 ವರ್ಷದಿಂದ ಹಂಚಿಮಾರನಹಳ್ಳಿ ಗ್ರಾಮಸ್ಥರು ಅಲೆದಾಡುತ್ತಿದ್ದರು. ಇದೀಗ ನಮ್ಮತುಮಕೂರು ವರದಿಯ ಬೆನ್ನಲ್ಲೇ ಗ್ರಾಮಸ್ಥರ ಸಮಸ್ಯೆ ಬಗೆಹರಿದಿದೆ.

    ಭಾನುವಾರ ನಮ್ಮ ತುಮಕೂರು ವಾಹಿನಿಯು ಹಂಚಿಮಾರನಹಳ್ಳಿ ಗ್ರಾಮಸ್ಥರು ಶಾಶ್ವತ ಕುಡಿಯುವ ನೀರಿಗಾಗಿ ಕೊರಟಗೆರೆ ಇ ಓ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ವರದಿ ಪ್ರಸಾರ ಮಾಡಿತ್ತು..

    ಸುದ್ದಿ ಪ್ರಸಾರವಾದ ಬಳಿಕ ಕೇವಲ 12 ಗಂಟೆ ಒಳಗೆಯೇ ಪರಿಹಾರ ಸಿಕ್ಕಂತಾಗಿದೆ. ಇದು ನಮ್ಮ ತುಮಕೂರು ವಾಹಿನಿಯ ಬಿಗ್ ಇಂಫ್ಯಾಕ್ಟ್ ಆಗಿದೆ.

    ಹಂಚಿಮಾರನಹಳ್ಳಿ ಗ್ರಾಮಕ್ಕೆ ಬಂದ ಬೋರ್ವೆಲ್ ವಾಹನ ಕಂಡ ಖಾಸಗಿ ಜಮೀನಿನ ರೈತ ಡ್ರಿಲ್ ಮಾಡದಂತೆ ತಡೆದ ಪ್ರಸಂಗವೂ ಸಹ ನಡೆದಿದೆ. ಈ ಸಂದರ್ಭದಲ್ಲಿ ಕೊರಟಗೆರೆ ಪಿಎಸ್ ಐ ಚೇತನ್ ಕುಮಾರ್ ಮತ್ತು ಪೊಲೀಸ್ ಸಿಬ್ಬಂದಿಗಳು ಮಧ್ಯಪ್ರವೇಶಿಸಿ ಖಾಸಗಿ ಜಮೀನಿನ ರೈತ ಕುಟುಂಬಕ್ಕೆ ಕಾನೂನು ಅರಿವು ಮೂಡಿಸಿ ಬೋರ್ವೆಲ್ ಡ್ರಿಲ್ ಮಾಡಲು ಮನ ಹೋಲಿಸಿದ್ದರು.

    ತಾಲೂಕು ಪಂಚಾಯಿತಿ ಇ ಓ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದ ಸ್ಥಳದಲ್ಲಿಯೇ ಸುಮಾರು 560 ಅಡಿಯಲ್ಲಿ 3 ಇಂಚು ನೀರು ಸಿಕ್ಕಿದ್ದು ಈ ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಂತಾಗಿದೆ..

    ಬೋರ್ ವೆಲ್ ಕೊರೆಯುತ್ತಿದ್ದ ವೇಳೆ ಚಿಮ್ಮಿದ ನೀರನ್ನು ಕಂಡು ಗ್ರಾಮಸ್ಥರು ಕುಣಿದು ಕುಪ್ಪಳಿಸಿ, ಸಂಭ್ರಮಿಸಿದ್ದರು, ಗ್ರಾಮದ ಮಹಿಳೆಯರು ಗಂಗೆ ಪೂಜೆ ಮಾಡಿ ಸಂತಸ ವ್ಯಕ್ತಪಡಿಸಿದರು. ನಮ್ಮ ತುಮಕೂರು ವಾಹಿನಿ ಪ್ರತಿನಿಧಿ ಮಂಜುಸ್ವಾಮಿ ಎಂ.ಎನ್. ರವರ ವಿಶೇಷ ಕಾಳಜಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.

    ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಕೀರ್ತಿ ನಾಯಕ್ ಹಾಗೂ ಕೊರಟಗೆರೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್ ಮತ್ತು ಬೂದಗವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘು ನಂದನ್ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶ್ರೀನಿವಾಸ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯರ ಮುಂದಾಳತ್ವದಲ್ಲಿ ಬೋರ್ವೆಲ್ ಕೊರೆಯಲಾಯ್ತು.

    ಹಂಚಿಮರನಹಳ್ಳಿಯ ಗ್ರಾಮಸ್ಥರ ನೋವಿಗೆ ತಕ್ಷಣವೇ ಸ್ಪಂದಿಸಿದ ಕ್ಷೇತ್ರದ ಜನಪ್ರಿಯ ಶಾಸಕ ಹಾಗೂ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ರವರಿಗೆ ವಿಶೇಷವಾದ ಧನ್ಯವಾದಗಳನ್ನ ಗ್ರಾಮಸ್ಥರು ತಿಳಿಸಿದರು.

    ಹಂಚಿಮಾರನಹಳ್ಳಿ ಗ್ರಾಮಸ್ಥರ ದಿಟ್ಟ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಂತಾಗಿದೆ. ಕೊರಟಗೆರೆ ತಾಲೂಕು ಪಂಚಾಯಿತಿ ಇ ಓ ಅಪೂರ್ವ ಸಿ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಕೀರ್ತಿ ನಾಯಕ್ ಗ್ರಾಮಸ್ಥರ ಹಪ್ರತಿಭಟನೆಯ ಮರುದಿನವೇ ಸ್ಥಳ ಪರಿಶೀಲಿಸಿ ಶೀಘ್ರವೇ ಗ್ರಾಮಸ್ಥರ ಮನೆ ಮನೆಗೆ ನೀರು ಪೂರೈಸುವ ಭರವಸೆ ನೀಡಿ ಗ್ರಾಮಸ್ಥರಿಗೆ ಶುಭ ಹಾರೈಸಿದ್ದಾರೆ.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಘುನಂದನ್, ಕಾರ್ಯದರ್ಶಿ ನರಸಿಂಹಮೂರ್ತಿ,ಸದಸ್ಯರಾದ ರವಿಕುಮಾರ್, ಸಾಮಾಜಿಕ ಹೋರಾಟಗಾರ ರಾಜ ರವೀಂದ್ರ ನಾಯಕ, ಪತ್ರಕರ್ತ ಮಂಜುಸ್ವಾಮಿ ಎಂ ಎನ್, ಹನುಮಂತರಾಯಪ್ಪ, ಸುರೇಶ್, ನಾಗರಾಜು, ಪರಂದಾಮಯ್ಯ, ಶಿವರತ್ನಮ್ಮ, ಮಂಜುನಾಥ್, ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿವರ್ಗ ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


    Provided by
    Provided by
    admin
    • Website

    Related Posts

    ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ

    July 12, 2026

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌

    July 13, 2026

    ನವದೆಹಲಿ: ಮನೆಕೆಲಸದಾಕೆಯ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಮತ್ತು ಮಾಜಿ ಸಚಿವ ಹೆಚ್.ಡಿ.…

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.