ಬೆಂಗಳೂರು: ಎಸ್.ಟಿ. ಸೋಮಶೇಖರ್ ಅವರು ಯಾರಿಗೆ ಮತ ಹಾಕಿದಾರೋ ನನಗೆ ಗೊತ್ತಿಲ್ಲ. ಅದನ್ನು ಬಿಜೆಪಿಯವರೇ ಖಚಿತ ಪಡಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜ್ಯಸಭಾ ಚುನಾವಣೆಯ ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರೇ ಹೇಳಿದ್ದಂತೆ ಅವರು ಆತ್ಮಸಾಕ್ಷಿಗೆ ಮತ ಹಾಕಿರಬಹುದು ಎಂದು ವ್ಯಂಗ್ಯವಾಡಿದರು.
ಜೆಡಿಎಸ್ ಪಕ್ಷದಿಂದ ಮತ್ತೊಂದು ಅಭ್ಯರ್ಥಿಯನ್ನು ಹಾಕಿಸಿದ್ದೇ ಬಿಜೆಪಿಯವರು. ಅವರ ಅಭ್ಯರ್ಥಿ ಗೆಲ್ಲಲು 48 ಮತ ಸಾಕಾಗಿತ್ತು. ಈಗ ಕುಪೇಂದ್ರ ರೆಡ್ಡಿಯವರನ್ನು ಕರೆತಂದ ಮೇಲೆ ಅವರನ್ನು ಗೆಲ್ಲಿಸುವ ಜವಾಬ್ದಾರಿ ಬಿಜೆಪಿಯವರದ್ದೇ ಆಗಿದೆ ಎಂದರು.
ಎಸ್.ಟಿ. ಸೋಮಶೇಖರ್ ವಿರುದ್ದ ಬಿಜೆಪಿಯವರು ಕಾನೂನು ಕ್ರಮ ಕೈಗೊಳ್ಳಲಿದ್ದು, ಅವರಿಗೆ ನೀವು ನೆರವು ನೀಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಮುಂದೆ ನಡೆಯುವ ಬೆಳವಣಿಗೆಗಳನ್ನು ನೋಡಿ ಆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296