nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಫೀಸ್‌ ನಲ್ಲಿ ಟಾರ್ಚರ್‌ ಕೊಟ್ಟ ಎಂದು ಮೇಲಾಧಿಕಾರಿಗೆ ಹೊಡೆಸಿದ ಸಿಬ್ಬಂದಿ..!
    ರಾಜ್ಯ ಸುದ್ದಿ April 6, 2024

    ಆಫೀಸ್‌ ನಲ್ಲಿ ಟಾರ್ಚರ್‌ ಕೊಟ್ಟ ಎಂದು ಮೇಲಾಧಿಕಾರಿಗೆ ಹೊಡೆಸಿದ ಸಿಬ್ಬಂದಿ..!

    By adminApril 6, 2024No Comments2 Mins Read
    attack

    ನಡು ರಸ್ತೆಯಲ್ಲಿ ಯುವಕರಿಬ್ಬರು ಸೇರಿ ರಾಡ್‌ ನಿಂದ ವ್ಯಕ್ತಿಗೆ ಮನಬಂದಂತೆ ಥಳಿಸಿದ, ಹಲ್ಲೆ ದೃಶ್ಯವೆಲ್ಲವೂ ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದರ ಡ್ಯಾಶ್‌ ಬೋರ್ಡ್‌ನ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆಫೀಸ್‌ ನಲ್ಲಿ ಟಾರ್ಚರ್‌ ಕೊಟ್ಟ ಮೇಲಾಧಿಕಾರಿಗೆ ಸಿಬ್ಬಂದಿಯೇ ಸುಪಾರಿ ಕೊಟ್ಟು ಹೊಡೆಸಿರುವುದು ತನಿಖೆಯಲ್ಲಿ ಗೊತ್ತಾಗಿದೆ. ತನಿಖೆ ಕೈಗೊಂಡ ಹೆಣ್ಣೂರು ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

    ಹಲ್ಲೆಗೊಳಗಾದ ಸುರೇಶ್ ಎಂಬಾತನಿಂದ ದೂರು ಪಡೆದು, ಹಲ್ಲೆ ನಡೆಸಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಮಾಶಂಕರ್, ವಿನೀಶ್, ಅನೀಶ್, ಮುತ್ತು ಹಾಗೂ ಸಂದೀಪ್ ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ ಮಾ. 31 ರಂದು ಹೊರಮಾವುನಿಂದ ಹೆಣ್ಣೂರಿಗೆ ತೆರಳುವ ಮಾರ್ಗದಲ್ಲಿ ಸುರೇಶ್‌ ಹೋಗುತ್ತಿದ್ದಾಗ, ಬಲವಾದ ಆಯುಧದಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಹಲ್ಲೆ ಮಾಡಿದ್ದ ದೃಶ್ಯವು ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.


    Provided by
    Provided by

    ಪೊಲೀಸ್‌ ವಿಚಾರಣೆ ವೇಳೆ ಮೇಲಾಧಿಕಾರಿ ಆಗಿದ್ದ ಸುರೇಶ್‌ ತನ್ನ ಸಿಬ್ಬಂದಿಗೆ ಕೆಲಸದಲ್ಲಿ ಹೆಚ್ಚೆಚ್ಚು ಒತ್ತಡ ಕೊಟ್ಟಿದ್ದನಂತೆ. ಈ ಕಾರಣಕ್ಕೆ ಸಿಬ್ಬಂದಿಯಿಂದಲೇ ಸುರೇಶ್‌ ಹಲ್ಲೆಗೆ ಸುಪಾರಿ ಕೊಟ್ಟಿರುವುದು ತಿಳಿದು ಬಂದಿದೆ. ಬಂಧಿತರಾಗಿರುವ ಉಮಾಶಂಕರ್, ವಿನೀಶ್ ಹಾಗೂ ಹಲ್ಲೆಗೊಳಗಾದ ಸುರೇಶ್ ಹೆರಿಟೇಜ್ ಹಾಲು ಉತ್ಪನ್ನಗಳ ಕಂಪನಿಯ ಉದ್ಯೋಗಿಗಳಾಗಿದ್ದಾರೆ.

    ತನಿಖೆ ವೇಳೆ ಸುರೇಶ್‌ ಹೆಚ್ಚು ಒತ್ತಡ ಹಾಕುತ್ತಿದ್ದ ಹೀಗಾಗಿ ಈ ಕೃತ್ಯ ಎಸಗಿದ್ದಾಗಿ ಉಮಾಶಂಕರ್‌ ಹೇಳಿಕೆ ನೀಡಿದ್ದಾನೆ. ಸುರೇಶ್‌ ಗೆ ಹಲ್ಲೆ ಮಾಡಿ, ಬುದ್ಧಿ ಕಲಿಯುವಂತೆ ಮಾಡಿ ಎಂದು ಹಣ ಕೊಟ್ಟು ಸುಪಾರಿ ನೀಡಿದ್ದನಂತೆ. ಕಳೆದ ಒಂದು ವರ್ಷದ ಹಿಂದಷ್ಟೇ ಆಡಿಟಿಂಗ್‌ ಕೆಲಸಕ್ಕೆ ಸೇರಿದ್ದ ಸುರೇಶ್‌, ಸಿಬ್ಬಂದಿಗೆಲ್ಲ ಆ ದಿನದ ಬ್ಯಾಲೆನ್ಸ್ ಅಂದೇ ಕ್ಲಿಯರ್ ಮಾಡುವಂತೆ ಒತ್ತಡವನ್ನು ಹಾಕುತ್ತಿದ್ದನಂತೆ. ಮಾತ್ರವಲ್ಲ ಕಂಪನಿಯ ಹಿರಿಯ ಅಧಿಕಾರಿಗಳ ಗಮನಕ್ಕೂ ತಂದು, ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಿದ್ದ. ಇದು ಕೆಲಸ ಮಾಡುತ್ತಿದ್ದವರಿಗೆ ಒತ್ತಡ ತಂದಿತ್ತು. ಹೀಗಾಗಿ ಆತನಿಗೆ ಬುದ್ಧಿ ಕಲಿಸಲು ನಿರ್ಧರಿಸಿದ ಉಮಾಶಂಕರ್‌ ಮಾಜಿ ಉದ್ಯೋಗಿ ಸಂಪರ್ಕ ಮಾಡಿದ್ದ. ಈ ಹಿಂದೆ ಕೆಲಸಕ್ಕಿದ್ದ ವ್ಯಕ್ತಿಯ ಮುಖಾಂತರ ಸಂದೀಪ್ ಎಂಬಾತನ ಸಂಪರ್ಕ ಮಾಡಿದ್ದ. ಕೆಆರ್ ಪುರಂನ ಸಂದೀಪ್ ಹಾಗೂ ಆತನ ಗೆಳೆಯರಿಗೆ ಸುಪಾರಿ ಕೊಟ್ಟಿದ್ದ. ಅದರಂತೆ ರಸ್ತೆಯಲ್ಲಿ ಹೋಗುತ್ತಿದ್ದ ಸುರೇಶ್‌ ಮೇಲೆ ದಾಳಿ ಮಾಡಿದ ಸಂದೀಪ್‌ ಟೀಂ, ಸ್ಟೀಲ್‌ ರಾಡ್‌ನಿಂದ ಹೊಡೆದು ಪರಾರಿಯಾಗಿದ್ದರು. ಬಳಿಕ ಏನು ಗೊತ್ತಿಲ್ಲದಂತೆ ತಮ್ಮ ಪಾಡಿಗೆ ತಾವಿದ್ದರು. ಆದರೆ ವಿಡಿಯೋ ವೈರಲ್ ಬಳಿಕ ಆರೋಪಿಗಳ ಬೆನ್ನಟ್ಟಿದ ಪೊಲೀಸರು ಎಲ್ಲರನ್ನು ಬಂಧಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

     

     

     

     

     

     

     

     

     

     

     

     

     

     

     

     

     

     

     

     

     

     

     

     

     

     

     

     

    admin
    • Website

    Related Posts

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ…

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.