nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    ಸ್ಪೆಷಲ್ ನ್ಯೂಸ್ June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    By adminJune 5, 2026No Comments3 Mins Read
    short film
    • ರಾಘವೇಂದ್ರ ಅಡಿಗ ಎಚ್ಚೆನ್.

    ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ.

    ನವ ಪೀಳಿಗೆಯ ಕಥೆಗಾರರನ್ನು ಗುರುತಿಸುವ ನಿಟ್ಟಿನಲ್ಲಿ 2026 ರ ಆರಂಭದಲ್ಲಿ ಘೋಷಿಸಲಾದ ಈ ಸ್ಪರ್ಧೆ, ದೇಶಾದ್ಯಂತ ಉದಯೋನ್ಮುಖ ಪ್ರತಿಭೆಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲೇ ಚಿತ್ರೀಕರಿಸಿದ ವಿಶಿಷ್ಟ ಕಿರುಚಿತ್ರಗಳಿಗೆ ವೇದಿಕೆಯಾಗಿದೆ.

    ಒಟ್ಟು ಎಂಟು ಭಾರತೀಯ ಭಾಷೆಗಳಲ್ಲಿ ನಡೆದ ಈ ಸ್ಪರ್ಧೆಯ ಮುಖ್ಯ ಉದ್ದೇಶ ಸಿನಿಮಾ ನಿರ್ಮಾಣ ಕೇವಲ ಕೆಲವರಿಗಷ್ಟೇ ಸೀಮಿತವಾಗದೆ, ದೇಶದ ಮೂಲೆ ಮೂಲೆಯ ವಿಭಿನ್ನ ಸಂಸ್ಕೃತಿ ಮತ್ತು ಕಥೆಗಳಿಗೆ ಸೂಕ್ತ ಮನ್ನಣೆ ಸಿಗುವಂತೆ ಮಾಡುವುದಾಗಿದೆ.

    ಸ್ಪರ್ಧೆಯು ಈಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಭಾರತೀಯ ಚಿತ್ರರಂಗದ ದಿಗ್ಗಜ ನಿರ್ದೇಶಕರನ್ನೊಳಗೊಂಡ ಜ್ಯೂರಿ ಸಮಿತಿಯು ವಿಜೇತರ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಪ್ರತಿಷ್ಠಿತ ಸಮಿತಿಯಲ್ಲಿ ಅನುರಾಗ್ ಕಶ್ಯಪ್ (ಹಿಂದಿ), ರವಿ ಜಾಧವ್ (ಮರಾಠಿ), ನಾಗ್ ಅಶ್ವಿನ್ (ತೆಲುಗು), ಸೃಜಿತ್ ಮುಖರ್ಜಿ (ಬೆಂಗಾಲಿ), ಪಿ. ಸಮುದ್ರಖಣಿ (ತಮಿಳು), ನಮ್ಮ ಹೆಮ್ಮೆಯ ನಿರ್ದೇಶಕ ಹೇಮಂತ್ ರಾವ್ (ಕನ್ನಡ) ಮತ್ತು ಲಿಜೋ ಜೋಸ್ ಪೆಲ್ಲಿಸ್ಸೆರಿ (ಮಲಯಾಳಂ) ಭಾಗಿಯಾಗಿದ್ದಾರೆ.

    ಇದರೊಂದಿಗೆ, ಸಮಾರೋಪ ಸಮಾರಂಭದಲ್ಲಿ ವಿಶೇಷ ಕಾರ್ಯಕ್ರಮವಾಗಿ ಖ್ಯಾತ ಪತ್ರಕರ್ತ ರಾಜೀವ್ ಮಸಂದ್ ಅವರ ನೇತೃತ್ವದಲ್ಲಿ ಜ್ಯೂರಿ ಸದಸ್ಯರ ವಿಶೇಷ ಸಂವಾದ ನಡೆಯಲಿದ್ದು, ಕಥೆ ಹೇಳುವ ಶೈಲಿ, ಪ್ರಾದೇಶಿಕ ಸಿನಿಮಾಗಳು ಮತ್ತು ಭಾರತೀಯ ಚಿತ್ರರಂಗದ ಭವಿಷ್ಯದ ಕುರಿತು ಚರ್ಚೆ ನಡೆಯಲಿದೆ.

    ಮುಂಬೈನ ಪ್ರಸಿದ್ಧ ಹೋಟೆಲ್‌ನಲ್ಲಿ ನಡೆಯಲಿರುವ ಈ ಅದ್ಧೂರಿ ಸಮಾರೋಪ ಸಮಾರಂಭದಲ್ಲಿ ಚಿತ್ರರಂಗದ ಗಣ್ಯರು, ಮಾಧ್ಯಮ ಮುಖ್ಯಸ್ಥರು,ಹಾಗೂ ಯುವ ನಿರ್ದೇಶಕರು ಒಂದೆಡೆ ಸೇರಲಿದ್ದಾರೆ. ಎಂಟು ಭಾಷಾ ವಿಭಾಗಗಳಲ್ಲಿ ವಿಜೇತರನ್ನು ಘೋಷಿಸಲಾಗುತ್ತಿದ್ದು; ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟ, ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ಸಂಕಲನ, ಅತ್ಯುತ್ತಮ ಕಥೆ, ಅತ್ಯುತ್ತಮ ಸಂಗೀತ, ಅತ್ಯುತ್ತಮ ಹಾಸ್ಯನಟ ಸೇರಿದಂತೆ ಜ್ಯೂರಿಗಳ ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.

    ಯುವ ಪ್ರತಿಭೆಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ಆಯ್ಕೆಯಾದ ಅತ್ಯುತ್ತಮ ಕಿರುಚಿತ್ರಗಳ ಪ್ರಸಾರ ಹಕ್ಕುಗಳನ್ನು ಜೀ ಸಂಸ್ಥೆ ಪಡೆಯಲಿದೆ. ಈ ಕಿರುಚಿತ್ರಗಳನ್ನು ZEE5 ಒಟಿಟಿ ವೇದಿಕೆಯಲ್ಲಿ ಸ್ಟ್ರೀಮ್ ಮಾಡುವುದರ ಜೊತೆಗೆ, ಜೀ ಟಿವಿ, ಜೀ ಕನ್ನಡ,ಜೀ ಮರಾಠಿ, ಜೀ ಬಾಂಗ್ಲಾ, ಜೀ ತೆಲುಗು, ಜೀ ತಮಿಳು, ಜೀ ಕೇರಳಂ, ಜೀ ಜೆಸ್ಟ್ ಮತ್ತು ಜಿಂಗ್ ವಾಹಿನಿಗಳಲ್ಲಿಯೂ ಪ್ರಸಾರವಾಗಲಿವೆ. ಯುವ ಕಥೆಗಾರರಿಗೆ ಡಿಜಿಟಲ್ ಹಾಗೂ ಟಿವಿ ಮಾಧ್ಯಮಗಳೆರಡರಲ್ಲೂ ದೊಡ್ಡ ಮಟ್ಟದ ವೇದಿಕೆಯಾಗಲಿದೆ. ಇದರೊಂದಿಗೆ ಪ್ರತಿ ಭಾಷಾ ವಿಭಾಗದ ಒಬ್ಬ ವಿಜೇತರಿಗೆ ತಲಾ 2,00,000 ರೂಪಾಯಿ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು.

    ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ನ ಕುರಿತು ಮಾತನಾಡಿದ ನಿರ್ದೇಶಕ ಅನುರಾಗ್ ಕಶ್ಯಪ್, ಪ್ರಯೋಗಗಳನ್ನು ಮಾಡಿ, ಸೋಲು ಗೆಲುವುಗಳ ನಡುವೆ ತಮ್ಮ ವಿಭಿನ್ನ ಶೈಲಿಯ ಕಥೆಗಳನ್ನು ಹೇಳಲು ಕಿರುಚಿತ್ರಗಳು ಸಹಕಾರಿಯಾಗಿವೆ. ಈ ಸ್ಪರ್ಧೆಯು ಮುಕ್ತ ಅಭಿವ್ಯಕ್ತಿಗೆ ರಾಷ್ಟ್ರ ಮಟ್ಟದ ವೇದಿಕೆ ಕಲ್ಪಿಸಿದೆ” ಎಂದರು.

    ನಿರ್ದೇಶಕ ಹೇಮಂತ್ ರಾವ್ ಮಾತನಾಡಿ, “ಹೊಸ ಪ್ರಯೋಗಗಳನ್ನು ನಾವು ಎಷ್ಟು ಧೈರ್ಯದಿಂದ ಬೆಂಬಲಿಸುತ್ತೇವೆಯೋ, ಅದರ ಮೇಲೆ ಚಿತ್ರರಂಗದ ಭವಿಷ್ಯ ನಿಂತಿದೆ. ಈ ವೇದಿಕೆಯು ಯುವ ನಿರ್ದೇಶಕರಿಗೆ ಯಾವುದೇ ಕಟ್ಟುಪಾಡುಗಳಿಲ್ಲದೆ ತಮ್ಮ ಕಥೆಗಳನ್ನು ಹೇಳಲು ಆತ್ಮವಿಶ್ವಾಸ ನೀಡಿದೆ” ಎಂದು ಅಭಿಪ್ರಾಯ ಪಟ್ಟರು.

    ನಾಗ್ ಅಶ್ವಿನ್ ಮಾತನಾಡಿ, “ಯಾವುದೇ ಚೌಕಟ್ಟುಗಳಿಗೆ ಸಿಲುಕದ ಹೊಸ ಪ್ರತಿಭೆಗಳು ಅದ್ಭುತ ಆಲೋಚನೆಗಳನ್ನು ಹೊಂದಿರುತ್ತಾರೆ . ಇಂದಿನ ತಂತ್ರಜ್ಞಾನದ ಸುಲಭ ಲಭ್ಯತೆ ಯುವ ಪೀಳಿಗೆಯ ಕಲ್ಪನಾ ಶಕ್ತಿಗೆ ಹೊಸ ಆಯಾಮ ನೀಡಿದೆ” ಎಂದು ಹಂಚಿಕೊಂಡರು.

    ರವಿ ಜಾಧವ್ ಮಾತನಾಡಿ,”ಭಾರತೀಯ ಚಿತ್ರರಂಗದ ಅಸಲಿ ಶಕ್ತಿ ಇರುವುದೇ ನಮ್ಮ ಪ್ರಾದೇಶಿಕ ಕಥೆಗಳಲ್ಲಿ. ಇದು ವಿಭಿನ್ನ ಹಿನ್ನೆಲೆಯ ಧ್ವನಿಗಳನ್ನು ಒಂದೇ ವೇದಿಕೆಯಲ್ಲಿ ಸಂಭ್ರಮಿಸುವ ಅದ್ಭುತ ಪ್ರಯತ್ನ” ಎಂದರು.

    ಸೃಜಿತ್ ಮುಖರ್ಜಿ ಮಾತನಾಡಿ, ” ಸಿನಿಮಾಗಳಿಗೆ ಈಗ ಭಾಷೆ ಮತ್ತು ಭೌಗೋಳಿಕ ಗಡಿಗಳಿಲ್ಲ. ಇಂತಹ ವೇದಿಕೆಗಳು ಒಳ್ಳೆ ಕಥೆಗಳಿಗೆ ಉತ್ತಮ ಅವಕಾಶ ನೀಡಿ ಪ್ರೇಕ್ಷಕರನ್ನು ತಲುಪುವಲ್ಲಿ ಸಹಕಾರಿಯಾಗಿವೆ.” ಎಂದರು

    ಲಿಜೋ ಜೋಸ್ ಪೆಲ್ಲಿಸ್ಸೆರಿ, “ಭಾರತೀಯ ಸಿನಿಮಾರಂಗ ಸದಾ ಹೊಸತನವನ್ನು ಬಯಸುತ್ತದೆ ಕಥೆ ಹೇಳುವ ಹಳೆಯ ಶೈಲಿಯನ್ನು ಮೀರಿ,ಪ್ರೇಕ್ಷಕರನ್ನು ಬೆರಗುಗೊಳಿಸುವ ಹೊಸ ಧ್ವನಿಗಳಿಗೆ ಅವಕಾಶ ನೀಡುವುದು ಮುಖ್ಯ” ಎಂದು ನುಡಿದರು.

    ಪಿ. ಸಮುದ್ರಖಣಿ,”ನೈಜ ಜೀವನದ ಅನುಭವಗಳಿಂದ ಬಂದ ಕಥೆಗಳು ನೇರವಾಗಿ ಪ್ರೇಕ್ಷಕರ ಮನ ಮುಟ್ಟುತ್ತವೆ.  ಅಂತಹ ಕಥೆಗಳಿಗೆ ಇಲ್ಲಿ ಮನ್ನಣೆ ಸಿಗುತ್ತಿರುವುದು ಸಂತಸದ ವಿಚಾರ . ಜೀ ಸಂಸ್ಥೆ ಆಯೋಜಿಸುತ್ತಿರುವ  ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಮಹಾ ಸಮಾರೋಪವು, ಕೇವಲ ಒಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾಗಿರದೆ ದೇಶದ ಸಾಂಸ್ಕೃತಿಕ ವೈವಿದ್ಯತೆ,ಸೃಜನಶೀಲತೆ ಮತ್ತು ಯುವ ಕಥೆಗಾರರನ್ನು ಸಂಭ್ರಮಿಸುವ ವೇದಿಕೆಯಾಗಲಿದೆ..

    ದೀಪಕ್ ಶ್ರೀರಾಮುಲು, ಚೀಫ್ ಚಾನೆಲ್ ಆಫೀಸರ್ – ಜೀ ಕನ್ನಡ & ಜೀ 5

    ಬ್ಯುಸಿನೆಸ್ ಹೆಡ್ ಅವರು ” ಜೀ ನೆಟ್‌ವರ್ಕ್ ಹೊಸ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ವೇದಿಕೆ ಕಲ್ಪಿಸುತ್ತಾ ಬಂದಿದೆ. ಈ ಹಾದಿಯಲ್ಲಿ ಅನೇಕ ನಿರ್ದೇಶಕರು, ಬರಹಗಾರರು,ನಟರು ಹೀಗೆ ಅನೇಕರ ಕಲಿಕೆಗೆ ಜೀ ಪೂರಕವಾಗಿದೆ. ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದೊಂದಿಗೆ ಜೀ ರೈಟರ್ಸ್ ರೂಮ್ ಎನ್ನುವ ಹೊಸ ಹೆಜ್ಜೆಯನ್ನು ಇಟ್ಟಿತ್ತು. ಈ ಬಾರಿ ದೇಶದಲ್ಲೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಬಹುಭಾಷಾ ಕಿರುಚಿತ್ರ ಸ್ಪರ್ಧೆಯನ್ನು ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಆಯೋಜಿಸಲಾಗಿತ್ತು .ಈ ಪ್ರಯತ್ನಕ್ಕೆ  ಚಿತ್ರರಂಗದ ಖ್ಯಾತ ನಿರ್ದೇಶಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಹಾಗೇ ಜನರಿಂದ ಕೂಡ ಅತ್ಯುತ್ತಮ ಪ್ರತಿಕ್ರಿಯೆ ಬಂದಿರುವ ಸಂತಸ ನಮಗಿದೆ.  ಈ ಸ್ಪರ್ಧೆಯ ಗ್ರಾಂಡ್ ಫಿನಾಲೆ ಜೂನ್ 5 ರಂದು ನಡೆಯಲಿದ್ದು ಈ ವೇದಿಕೆ ಉದಯೋನ್ಮುಖ ಪ್ರತಿಭೆಗಳನ್ನು  ಚಿತ್ರರಂಗ, ಮುಖ್ಯ ವಾಹಿನಿ ಹಾಗೂ OTTಗೆ ಪರಿಚಯಿಸುವ ಅದ್ಭುತ ಕಾರ್ಯಕ್ರಮವಾಗಲಿದೆ.ಇಂಹತ ಸೃಜನಾತ್ಮಕ ಹಾಗೂ ಅರ್ಥ ಪೂರ್ಣ ವೇದಿಕೆಯನ್ನು ಸೃಷ್ಟಿಸುವಲ್ಲಿ ಮಾರ್ಗದರ್ಶನ ನೀಡಿರುವ ರಾಘವೇಂದ್ರ ಹುಣಸೂರು,ಚೀಫ್ ಕಂಟೆಂಟ್ ಆಫೀಸರ್,ಜೀ ಹಾಗೂ ಜೀ ತಂಡಕ್ಕೂ ನನ್ನ ಕೃತಜ್ಞತೆಗಳು ಹಾಗೂ ಎಲ್ಲಾ ಸ್ಪರ್ಧಾರ್ಥಿಗಳಿಗೂ ಶುಭವಾಗಲಿ” ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.